ಬ್ರೇಕಿಂಗ್ ನ್ಯೂಸ್
13-12-23 04:39 pm Mangalore Correspondent ಕ್ರೈಂ
ಉಳ್ಳಾಲ, ಡಿ.13: ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಹರೇಕಳದ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ಸಮೀಪದ ಮನೆಗಳಿಗೆ ಮರಳು ಪೂರೈಸುತ್ತಿದ್ದ ಎರಡು ನಾಡ ದೋಣಿಗಳನ್ನ ಕೊಣಾಜೆ ಠಾಣೆಗೆ ಪ್ರಭಾರಿಯಾಗಿರುವ ಉಳ್ಳಾಲ ಇನ್ಸ್ ಪೆಕ್ಟರ್ ಹೆಚ್.ಎನ್ ಬಾಲಕೃಷ್ಣ ನೇತೃತ್ವದ ತಂಡ ದಾಳಿ ನಡೆಸಿ ಗಣಿ, ಭೂವಿಜ್ಞಾನ ಅಧಿಕಾರಿಗಳ ವಶಕ್ಕೆ ನೀಡಿದೆ.
ಹರೇಕಳದ ಧಕ್ಕೆಯ ನೇತ್ರಾವತಿ ನದಿಯಲ್ಲಿ ನಾಡ ದೋಣಿಗಳಲ್ಲಿ ಮರಳು ಸಾಗಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಉಳ್ಳಾಲ ಠಾಣಾ ಪಿಐ ಬಾಲಕೃಷ್ಣ ನೇತೃತ್ವದ ತಂಡವು ದಾಳಿ ನಡೆಸಿ ಮರಳು ಮತ್ತು ದೋಣಿಗಳನ್ನು ವಶಕ್ಕೆ ಪಡೆದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದೆ.


ಹರೇಕಳ, ಪಾವೂರಿನಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೆ ನಿರಂತರವಾಗಿ ನಡೆಯುತ್ತಲೇ ಇದೆ. ಕೊಣಾಜೆ ಪೊಲೀಸರಿಗೆ ಇದೇನು ಗೊತ್ತಿಲ್ಲದ ಸಂಗತಿಯಲ್ಲ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕಳೆದ ಕೆಲ ತಿಂಗಳ ಹಿಂದೆ ತೆರವಾದ ಇನ್ಸ್ ಪೆಕ್ಟರ್ ಸ್ಥಾನಕ್ಕೆ ಪರ್ಯಾಯ ಅಧಿಕಾರಿ ನೇಮಕವಾಗಿಲ್ಲ. ಕೊಣಾಜೆಯಲ್ಲಿ ಪಿಎಸ್ ಐಗಳು ಮತ್ತು ಅನುಭವಿ ಪೊಲೀಸರ ಕಾರು ಬಾರು ನಡೆಯುತ್ತಿದೆ.
ಕೊಣಾಜೆ ಠಾಣೆಯ ಪ್ರಭಾರ ಉಸ್ತುವಾರಿಯನ್ನ ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ವಹಿಸಿದ್ದು, ಅವರ ನೇತೃತ್ವದಲ್ಲಿ ನಡೆದ ದಿಢೀರ್ ದಾಳಿಯಿಂದ ಹರೇಕಳದಲ್ಲಿ ಬೇರೂರಿರುವ ಮರಳು ಮಾಫಿಯಾಗಳು ದಿಕ್ಕೆಟ್ಟು ಹೋಗಿವೆ. ಕಾರ್ಯಾಚರಣೆಯಲ್ಲಿ ಪಿಎಸ್ ಐ ಪುನೀತ್ ಗಾಂವ್ಕರ್, ವಿನೋದ್, ಸಿಬ್ಬಂದಿಗಳಾದ ಶೈಲೇಂದ್ರ ಮೊದಲಾದವರು ಇದ್ದರು.
Mangalore Ullal Police inspector team raids illegal sand mining, two boats seized.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm