ಬ್ರೇಕಿಂಗ್ ನ್ಯೂಸ್
13-12-23 09:07 pm Mangalore Correspondent ಕ್ರೈಂ
ಉಳ್ಳಾಲ, ಡಿ.13: ರಾತ್ರಿ ನಿಲ್ಲಿಸಿದ್ದ ಸಿಟಿ ಬಸ್ಸಿನ ಎರಡು ಬ್ಯಾಟರಿಗಳನ್ನ ಕಳ್ಳನೋರ್ವ ಗೋಣಿ ಚೀಲವನ್ನ ಮುಖಕ್ಕೆ ಅಡ್ಡಲಾಗಿ ಹಿಡಿದು ಬಂದು ಸಿಸಿ ಕ್ಯಾಮೆರಾಕ್ಕೆ ತುರುಕಿ ಕಳವು ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಪಲ ಬಗಂಬಿಲದಲ್ಲಿ ಬುಧವಾರ ನಸುಕಿನ ಜಾವ ನಡೆದಿದ್ದು, ಕಳ್ಳನ ಕೈಚಳಕ ಬಸ್ಸಿನ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ.
ಕುಂಪಲ- ಕೊಟ್ಟಾರ ನಡುವೆ ಓಡಾಟ ನಡೆಸುವ ರೂಟ್ ನಂಬರ್ 44 ಮೂಕಾಂಬಿಕಾ ಟ್ರಾವೆಲ್ಸ್ ಸಿಟಿ ಬಸ್ಸನ್ನು ನಿನ್ನೆ ರಾತ್ರಿ ಓಡಾಟ ಮುಗಿಸಿ ಕುಂಪಲದ ಬಗಂಬಿಲ ಎಂಬಲ್ಲಿ ನಿಲ್ಲಿಸಲಾಗಿತ್ತು. ನಸುಕಿನ ವೇಳೆ ಬಸ್ಸಿನೊಳಗೆ ಮುಖಕ್ಕೆ ಗೋಣಿ ಚೀಲವನ್ನು ಅಡ್ಡಲಾಗಿ ಹಿಡಿದು ನುಗ್ಗಿದ ಕಳ್ಳನೋರ್ವ ಗೋಣಿ ಚೀಲವನ್ನ ಸಿಸಿ ಕ್ಯಾಮೆರಾಕ್ಕೆ ತುರುಕಿ ಬಸ್ಸಿನ ಎರಡು ಬ್ಯಾಟರಿ ಹಾಗೂ ಕೇಬಲ್ ಗಳನ್ನು ಕಳವು ಮಾಡಿದ್ದಾನೆ. ಬಸ್ಸು ಹಳೆಯದಾದರೂ ಅದರೊಳಗಿದ್ದ ಸಿಸಿ ಟಿವಿ ಸುಸ್ಥಿತಿಯಲ್ಲಿದ್ದು ಕಳ್ಳನ ಕರಾಮತ್ತಿನ ವೀಡಿಯೋ ಚಿತ್ರಣ ಅದರಲ್ಲಿ ದಾಖಲಾಗಿದೆ.

ಸುಮಾರು 40,000 ರೂಪಾಯಿ ಮೌಲ್ಯದ ಬ್ಯಾಟರಿಗಳನ್ನ ಕಳವು ಮಾಡಲಾಗಿದ್ದು ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂಪಲ ಪ್ರದೇಶದಲ್ಲಿ ಬೆರಳೆಣಿಕೆಯಷ್ಟೇ ಬಸ್ಸುಗಳು ಓಡಾಟ ನಡೆಸುತ್ತಿದ್ದು ಬ್ಯಾಟರಿ ಇಲ್ಲದ ಬಸ್ಸು ಬುಧವಾರ ಓಡಾಟ ನಡೆಸದೆ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಯಿತು.
Mangalore Bus battery stolen, covers Cc camera with sack cloth at Ullal. Video of this goes viral on social media.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm