ಬ್ರೇಕಿಂಗ್ ನ್ಯೂಸ್
14-12-23 08:21 am Mangaluru Correspondent ಕ್ರೈಂ
ಉಳ್ಳಾಲ, ಡಿ.14: ನಡುರಾತ್ರಿ ಶಾಲೆ ಎದುರು ಬಿಯರ್ ಕುಡಿದು ಬಾಟಲಿಯನ್ನ ರಸ್ತೆಗೆ ಎಸೆದವರನ್ನ ಪ್ರಶ್ನಿಸಿದ ಯುವಕನನ್ನ ಇರಿದು ಕೊಲೆ ಮಾಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿಯ ಜಾಯ್ ಲ್ಯಾಂಡ್ ಶಾಲೆ ಬಳಿ ಬುಧವಾರ ರಾತ್ರಿ ನಡೆದಿದೆ.
ಕೊಲ್ಯ ಸಾರಸ್ವತ ಕಾಲನಿ ಜಾಯ್ ಲ್ಯಾಂಡ್ ಶಾಲಾ ಬಳಿ ನಿವಾಸಿ ವರುಣ್ ಗಟ್ಟಿ(28)ಕೊಲೆಯಾದ ಯುವಕ. ಬುಧವಾರ ರಾತ್ರಿ 10.45ರ ವೇಳೆಗೆ ಜಾಯ್ ಲ್ಯಾಂಡ್ ಆಂಗ್ಲ ಮಾಧ್ಯಮ ಶಾಲೆಯ ಎದುರುಗಡೆಯ ಕಟ್ಟೆಯೊಂದರಲ್ಲಿ ಕುಳಿತು ಆರೋಪಿ ಸೂರಜ್ ಮತ್ತು ರವಿರಾಜ್ ಎಂಬವರು ಬಿಯರ್ ಕುಡಿದು ಬಾಟಲಿಯನ್ನ ರಸ್ತೆಗೆ ಎಸೆದಿದ್ದರೆನ್ನಲಾಗಿದೆ. ಈ ವೇಳೆ ತನ್ನ ಮನೆಯಲ್ಲಿದ್ದ ವರುಣ್ ಮತ್ತು ಆತನ ಸ್ನೇಹಿತ ಅಕ್ಷಯ್ ಶಾಲೆಯ ಮುಂದೆ ಬಿಯರ್ ಬಾಟಲಿ ಯಾಕೆ ಎಸೆಯುತ್ತೀರಾ ಎಂದು ಪ್ರಶ್ನಿಸಿದ್ದಾರೆ.



ಈ ವೇಳೆ ಇತ್ತಂಡಗಳ ನಡುವೆ ವಾಗ್ವಾದ, ತಳ್ಳಾಟ ನಡೆದಿದ್ದು ಸೂರಜ್, ವರುಣ್ ಬೆನ್ನಿಗೆ ಹರಿತವಾದ ಆಯುಧದಿಂದ ಇರಿದಿದ್ದಾನೆ. ಗಂಭೀರ ಗಾಯಗೊಂಡ ವರುಣ್ ಸಮೀಪದ ತನ್ನ ಮನೆ ಕಡೆ ನಡೆದು ಹೋಗಿದ್ದು ಆತನ ಸಹೋದರ ಶರಣ್ ಮತ್ತು ಸ್ನೇಹಿತರು ತಕ್ಷಣ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ವರುಣ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಘಟನಾ ಸ್ಥಳದ ರಸ್ತೆಯುದ್ದಕ್ಕೂ ವರಣ್ ರಕ್ತ ಹರಿದಿದೆ.
ಇರಿದು ಕೊಲೆ ಮಾಡಿದ ಸೂರಜ್ ಮತ್ತು ಆತನೊಂದಿಗಿದ್ದ ರವಿರಾಜ್ ಸಾರಸ್ವತ ಕಾಲೊನಿ ನಿವಾಸಿಗಳಾಗಿದ್ದು ಇಬ್ಬರನ್ನೂ ಕ್ಷಿಪ್ರವಾಗಿ ಉಳ್ಳಾಲ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರವಿರಾಜ್ ಸೋಮೇಶ್ವರ ಗ್ರಾಮ ಪಂಚಾಯತ್ ಮಾಜಿ ಸದಸ್ಯನಾಗಿದ್ದು ಸೂರಜ್ ಮರಳು ಸಾಗಿಸುವ ಲಾರಿ ಚಾಲಕನಾಗಿದ್ದಾನೆ.
ಮೃತ ವರುಣ್ ಮಂಗಳೂರು ಮೂಡಾದ ಕಮೀಷನರ್ ಅವರ ವಾಹನದ ಚಾಲಕನಾಗಿದ್ದರು. ಮೃತರು ತಂದೆ, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.
28 year old youth murdered at Saraswathi Colony in Ullal, Mangalore for questioning miscrents for throwing beer bottle. The deceased has been identified as Varun Gatti.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm