ಬ್ರೇಕಿಂಗ್ ನ್ಯೂಸ್
14-12-23 08:21 am Mangaluru Correspondent ಕ್ರೈಂ
ಉಳ್ಳಾಲ, ಡಿ.14: ನಡುರಾತ್ರಿ ಶಾಲೆ ಎದುರು ಬಿಯರ್ ಕುಡಿದು ಬಾಟಲಿಯನ್ನ ರಸ್ತೆಗೆ ಎಸೆದವರನ್ನ ಪ್ರಶ್ನಿಸಿದ ಯುವಕನನ್ನ ಇರಿದು ಕೊಲೆ ಮಾಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿಯ ಜಾಯ್ ಲ್ಯಾಂಡ್ ಶಾಲೆ ಬಳಿ ಬುಧವಾರ ರಾತ್ರಿ ನಡೆದಿದೆ.
ಕೊಲ್ಯ ಸಾರಸ್ವತ ಕಾಲನಿ ಜಾಯ್ ಲ್ಯಾಂಡ್ ಶಾಲಾ ಬಳಿ ನಿವಾಸಿ ವರುಣ್ ಗಟ್ಟಿ(28)ಕೊಲೆಯಾದ ಯುವಕ. ಬುಧವಾರ ರಾತ್ರಿ 10.45ರ ವೇಳೆಗೆ ಜಾಯ್ ಲ್ಯಾಂಡ್ ಆಂಗ್ಲ ಮಾಧ್ಯಮ ಶಾಲೆಯ ಎದುರುಗಡೆಯ ಕಟ್ಟೆಯೊಂದರಲ್ಲಿ ಕುಳಿತು ಆರೋಪಿ ಸೂರಜ್ ಮತ್ತು ರವಿರಾಜ್ ಎಂಬವರು ಬಿಯರ್ ಕುಡಿದು ಬಾಟಲಿಯನ್ನ ರಸ್ತೆಗೆ ಎಸೆದಿದ್ದರೆನ್ನಲಾಗಿದೆ. ಈ ವೇಳೆ ತನ್ನ ಮನೆಯಲ್ಲಿದ್ದ ವರುಣ್ ಮತ್ತು ಆತನ ಸ್ನೇಹಿತ ಅಕ್ಷಯ್ ಶಾಲೆಯ ಮುಂದೆ ಬಿಯರ್ ಬಾಟಲಿ ಯಾಕೆ ಎಸೆಯುತ್ತೀರಾ ಎಂದು ಪ್ರಶ್ನಿಸಿದ್ದಾರೆ.
ಈ ವೇಳೆ ಇತ್ತಂಡಗಳ ನಡುವೆ ವಾಗ್ವಾದ, ತಳ್ಳಾಟ ನಡೆದಿದ್ದು ಸೂರಜ್, ವರುಣ್ ಬೆನ್ನಿಗೆ ಹರಿತವಾದ ಆಯುಧದಿಂದ ಇರಿದಿದ್ದಾನೆ. ಗಂಭೀರ ಗಾಯಗೊಂಡ ವರುಣ್ ಸಮೀಪದ ತನ್ನ ಮನೆ ಕಡೆ ನಡೆದು ಹೋಗಿದ್ದು ಆತನ ಸಹೋದರ ಶರಣ್ ಮತ್ತು ಸ್ನೇಹಿತರು ತಕ್ಷಣ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ವರುಣ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಘಟನಾ ಸ್ಥಳದ ರಸ್ತೆಯುದ್ದಕ್ಕೂ ವರಣ್ ರಕ್ತ ಹರಿದಿದೆ.
ಇರಿದು ಕೊಲೆ ಮಾಡಿದ ಸೂರಜ್ ಮತ್ತು ಆತನೊಂದಿಗಿದ್ದ ರವಿರಾಜ್ ಸಾರಸ್ವತ ಕಾಲೊನಿ ನಿವಾಸಿಗಳಾಗಿದ್ದು ಇಬ್ಬರನ್ನೂ ಕ್ಷಿಪ್ರವಾಗಿ ಉಳ್ಳಾಲ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರವಿರಾಜ್ ಸೋಮೇಶ್ವರ ಗ್ರಾಮ ಪಂಚಾಯತ್ ಮಾಜಿ ಸದಸ್ಯನಾಗಿದ್ದು ಸೂರಜ್ ಮರಳು ಸಾಗಿಸುವ ಲಾರಿ ಚಾಲಕನಾಗಿದ್ದಾನೆ.
ಮೃತ ವರುಣ್ ಮಂಗಳೂರು ಮೂಡಾದ ಕಮೀಷನರ್ ಅವರ ವಾಹನದ ಚಾಲಕನಾಗಿದ್ದರು. ಮೃತರು ತಂದೆ, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.
28 year old youth murdered at Saraswathi Colony in Ullal, Mangalore for questioning miscrents for throwing beer bottle. The deceased has been identified as Varun Gatti.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm