ಬ್ರೇಕಿಂಗ್ ನ್ಯೂಸ್
14-12-23 07:05 pm Mangalore Correspondent ಕ್ರೈಂ
ಉಳ್ಳಾಲ, ಡಿ.14: ತಂಗಿಯ ಅನುಕೂಲಕ್ಕಾಗಿ ಮಂಗಳೂರಿನ ಕಾವೂರಿನ ಬಾಡಿಗೆ ಮನೆಗೆ ಕುಟುಂಬ ಸಮೇತ ಸ್ಥಳಾಂತರಗೊಳ್ಳಲು ಸಿದ್ಧತೆಯಲ್ಲಿದ್ದ ಕೊಲ್ಯ ನಿವಾಸಿ ವರುಣ್ ಗಟ್ಟಿ ನಿನ್ನೆ ರಾತ್ರಿ ದಾರುಣವಾಗಿ ಕೊಲೆಯಾಗಿದ್ದು ಕೊಲೆ ಆರೋಪಿಗಳನ್ನ ಉಳ್ಳಾಲ ಪೊಲೀಸರು ಕ್ಷಿಪ್ರವಾಗಿ ಬಂಧಿಸಿದ್ದಾರೆ.
ವರುಣ್ ಗೆ ಇರಿದು ಕೊಲೆ ಮಾಡಿದ ಕೊಲ್ಯ ಸಾರಸ್ವತ ಕಾಲನಿ ನಿವಾಸಿ ಸೂರಜ್ ಮತ್ತು ಆತನೊಂದಿಗಿದ್ದ ಮಾಜಿ ಗ್ರಾ.ಪಂ ಸದಸ್ಯ ರವಿರಾಜ್ ಎಂಬವರನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿನ್ನೆ ರಾತ್ರಿ ಸುಮಾರು 10.45ರ ವೇಳೆಗೆ ಕೊಲ್ಯದ ಜಾಯ್ ಲ್ಯಾಂಡ್ ಆಂಗ್ಲ ಮಾಧ್ಯಮ ಶಾಲೆಯ ಎದುರುಗಡೆಯಲ್ಲಿ ಸೂರಜ್ ಮತ್ತು ರವಿರಾಜ್ ಎಂಬವರು ಬಿಯರ್ ಕುಡಿದು ಬಾಟಲಿಯನ್ನ ಶಾಲಾ ಆವರಣ ಗೋಡೆಗೆ ಎಸೆದಿದ್ದರೆನ್ನಲಾಗಿದೆ. ಈ ವೇಳೆ ಅಲ್ಲೇ ಸಮೀಪದ ಬಾಡಿಗೆ ಮನೆ ನಿವಾಸಿ ವರುಣ್ ಮತ್ತು ಆತನ ಸ್ನೇಹಿತ ಅಕ್ಷಯ್ ಶಾಲೆಯ ಆವರಣ ಗೋಡೆಗೆ ಬಿಯರ್ ಬಾಟಲಿ ಯಾಕೆ ಎಸೆಯುತ್ತೀರಾ ಎಂದು ಪ್ರಶ್ನಿಸಿದ್ದಾರೆ.

ಈ ವೇಳೆ ಇತ್ತಂಡಗಳ ನಡುವೆ ಗಲಾಟೆ ನಡೆದಿದ್ದು ಸೂರಜ್ ಏಕಾಏಕಿ ವರುಣ್ ನ ಎಡ ಪಕ್ಕೆಲುಬು ಮತ್ತು ಎದೆ ಭಾಗಕ್ಕೆ ಹರಿತವಾದ ಆಯುಧದಿಂದ ಇರಿದಿದ್ದಾನೆ. ಒಂದೆರಡು ಇರಿತಕ್ಕೆ ಗಂಭೀರ ಗಾಯಗೊಂಡ ವರುಣ್ ಸಮೀಪದ ತನ್ನ ಮನೆ ಕಡೆ ಹೆಜ್ಜೆ ಹಾಕಿದ್ದು ರಸ್ತೆಯುದ್ದಕ್ಕೂ ರಕ್ತ ಚೆಲ್ಲಿದೆ. ಬಳಿಕ ಆಸ್ಪತ್ರೆಯಲ್ಲಿ ವರುಣ್ ಕೊನೆಯುಸಿರೆಳೆದಿದ್ದಾನೆ. ಒಂದೆರಡು ಇರಿತಕ್ಕೆ ವರುಣ್ ಸಾವುಗೀಡಾಗಲು ಆರೋಪಿ ಸೂರಜ್ ಅದ್ಯಾವ ಆಯುಧ ಬಳಸಿದ್ದಾನೆ ಎಂಬ ಬಗ್ಗೆ ಸಂಶಯಗಳಿವೆ. ಕೋಳಿ ಅಂಕದಲ್ಲಿ ಕೋಳಿಗಳ ಕಾಲಿಗೆ ಕಟ್ಟುವ ಹರಿತವಾದ ಬಾಲ್ (ಸಣ್ಣ ಚೂರಿ) ಬಳಸಿದ್ದ ಎನ್ನುವ ಮಾಹಿತಿಯೂ ಕೇಳಿಬರುತ್ತಿದೆ. ಪೊಲೀಸರು ಇನ್ನಷ್ಟೆ ಕೊಲೆಗೆ ಬಳಸಿದ್ದ ಆಯುಧವನ್ನ ದಸ್ತಗಿರಿ ಮಾಡಬೇಕಿದೆ.

ಘಟನಾ ಸ್ಥಳಕ್ಕೆ ಮಂಗಳೂರು ಕಮೀಷನರ್ ಅನುಪಮ್ ಅಗರ್ ವಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಮಹಜರು ನಡೆಸುವ ಸಲುವಾಗಿ ದಿನವಿಡೀ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಿದ್ದು ಜಾಯ್ ಲ್ಯಾಂಡ್ ಶಾಲಾ ಮಕ್ಕಳಿಗೂ ಶಾಲಾಡಳಿತ ರಜೆ ಘೋಷಿಸಿತ್ತು. ಸಂಜೆ ವೇಳೆ ಮೃತ ವರುಣ್ ನ ಮೃತದೇಹದ ಅಂತ್ಯಕ್ರಿಯೆ ನಡೆದಿದೆ.
ನಾಳೆಯೇ ಮನೆ ಬದಲಿಸಲಿದ್ದರು !
ಕೊಲ್ಯ ಜಾಯ್ ಲ್ಯಾಂಡ್ ಶಾಲೆ ಬಳಿಯ ಬಾಡಿಗೆ ಮನೆ ನಿವಾಸಿಗಳಾದ ಬಾಲಕೃಷ್ಣ ಗಟ್ಟಿ, ಸುಮಿತ್ರ ದಂಪತಿಯ ಮೂವರು ಮಕ್ಕಳಲ್ಲಿ ಮೃತ ವರುಣ್ ಮನೆಯ ಹಿರಿ ಮಗನಾಗಿದ್ದು ಮೂಡಾಡಲ್ಲಿ ಕಮೀಷನರ್ ಅವರ ವಾಹನ ಚಾಲಕನಾಗಿದ್ದ. ವರುಣ್ ತಂಗಿ ವರ್ಷಾ ಮಂಗಳೂರು ವಿಮಾನ ನಿಲ್ದಾಣದಲ್ಲಿ ಉದ್ಯೋಗಿಯಾಗಿದ್ದು ಆಕೆಯ ಅನುಕೂಲಕ್ಕಾಗಿ ನಾಳೆ (ಡಿ.15) ಶುಕ್ರವಾರ ಕಾವೂರಿನ ನೂತನ ಬಾಡಿಗೆ ಮನೆಗೆ ಸ್ಥಳಾಂತರಗೊಳ್ಳಲು ಕುಟುಂಬ ಸಿದ್ಧತೆ ನಡೆಸಿತ್ತು. ಆದರೆ ಮನೆಮಗನ ಅಕಾಲಿಕ ಮರಣವು ಕುಟುಂಬವನ್ನ ಶೋಕ ಸಾಗರದಲ್ಲಿ ಮುಳುಗಿಸಿದೆ.
Mangalore Ullal murder near school, two arrested over beer bootle. Police commissioner Agarwal visited the spot and spoke to the family.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm