ಬ್ರೇಕಿಂಗ್ ನ್ಯೂಸ್
17-12-23 08:56 pm Udupi Correspondent ಕ್ರೈಂ
ಉಡುಪಿ, ಡಿ.17: ಪರವಾನಗಿ ಇಲ್ಲದ ಲ್ಯಾಬ್, ಕ್ಲಿನಿಕ್ಗಳ ಮೇಲೆ ಆರೋಗ್ಯಾಧಿಕಾರಿಗಳು ದಾಳಿ ನಡೆಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಈ ವೇಳೆ ತಾನು ವೈದ್ಯನೆಂದು ಹೇಳಿಕೊಂಡು ಬ್ರಹ್ಮಾವರ ತಾಲೂಕಿನ ಕಂಬಳಗದ್ದೆ ಕ್ರಾಸ್ನ ಕುಂಜಾಲಿನಲ್ಲಿ ಕ್ಲಿನಿಕ್ ಇಟ್ಟುಕೊಂಡು ಆಯುರ್ವೇದಿಕ್, ಅಲೋಪತಿ ಚಿಕಿತ್ಸೆ ನೀಡುತ್ತಿದ್ದ ಬಿಕಾಂ ಪದವೀಧರನೊಬ್ಬ ಸಿಕ್ಕಿಬಿದ್ದಿದ್ದಾನೆ.
ಬಿಕಾಂ ಪದವಿ ಪಡೆದಿರುವ ಸಂದೇಶ್ ರಾವ್ ಕುಂಜಾಲಿನಲ್ಲಿ ಶ್ರೀಸೂರ್ಯನಾರಾಯಣ ಸ್ವಾಮಿ ಹೆಸರಿನ ಆಯುರ್ವೇದಿಕ್ ಕೇಂದ್ರ ತೆರೆದು ಚಿಕಿತ್ಸೆ ನೀಡುತ್ತಿದ್ದನು. ಈ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿಗಳು ದಾಳಿ ನಡೆಸಿದಾಗ ಸಂದೇಶ್ ರಾವ್ ವೈದ್ಯನಲ್ಲ, ಆತ ನಕಲಿ ವೈದ್ಯ ಎಂದು ತಿಳಿದುಬಂದಿದೆ. ಸದ್ಯ, ಕ್ಲಿನಿಕ್ ಜಪ್ತಿ ಮಾಡಿದ ಆರೋಗ್ಯಾಧಿಕಾರಿಗಳು, ಆರೋಪಿ ವಿರುದ್ಧ ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಲ್ಯಾಬ್, ಕ್ಲಿನಿಕ್ಗಳ ಮೇಲೆ ದಾಳಿ ಆರೋಗ್ಯಾಧಿಕಾರಿಗಳ ದಾಳಿ
ರಾಜ್ಯದಲ್ಲಿ ಭ್ರೂಣ ಹತ್ಯೆ ಕೇಸ್ ಪತ್ತೆ ಹಿನ್ನೆಲೆ ಆರೋಗ್ಯಾಧಿಕಾರಿಗಳು ಇಂದು ಜಿಲ್ಲೆಯ ಹಲವೆಡೆ ಲ್ಯಾಬ್, ಕ್ಲಿನಿಕ್ಗಳ ಮೇಲೆ ದಾಳಿ ನಡೆಸಿದ್ದರು. ಉಡುಪಿ, ಕುಂದಾಪುರ ತಾಲೂಕಿನ ಏಳು ಕಡೆ ದಾಳಿ ನಡೆಸಿದಾಗ ನಕಲಿ ವೈದ್ಯರು, ಅನುಮತಿ ರಹಿತ ಕ್ಲಿನಿಕ್ಗಳು ಪತ್ತೆಯಾಗಿವೆ. ಪರವಾನಗಿ ಇಲ್ಲದ ಲ್ಯಾಬ್, ಕ್ಲಿನಿಕ್ ಸೀಜ್ ಮಾಡಿ ಕೆಪಿಎಂಇ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಪ್ಪುಂದದ ಸುಷ್ಮಾ ಕ್ಲಿನಿಕಲ್ ಲ್ಯಾಬ್ ಸೀಜ್ ಮಾಡಿ ಕೇಸ್ ದಾಖಲು ಮಾಡಲಾಗಿದ್ದು, ಕುಂದಾಪುರದ ಬಯೋಲಿನ್ ಕ್ಲಿನಿಕಲ್ ಲ್ಯಾಬ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಆರೂರಿನಲ್ಲಿ ಆರೋಗ್ಯಾಧಿಕಾರಿಗಳು ಒಂದು ಕ್ಲಿನಿಕ್ ಜಪ್ತಿ ಮಾಡಿದ್ದಾರೆ.
ಆಯುರ್ವೇದಿಕ್ ನೋಂದಣಿಯಲ್ಲಿ ಅಲೋಪತಿ ಕ್ಲಿನಿಕ್ ನಡೆಸುತ್ತಿದ್ದ ವಿಚಾರ ಪತ್ತೆಯಾಗಿದೆ. ಆದಿ ಉಡುಪಿಯ ಧನ್ವಂತರಿ ಕ್ಲಿನಿಕ್, ನಾವುಂದದ ನಂಬಿಯಾರ್ ಕ್ಲಿನಿಕ್ನಲ್ಲಿ ಅಲೋಪತಿ ಚಿಕಿತ್ಸೆ ನೀಡುತ್ತಿದ್ದ ವಿಚಾರ ತಿಳಿದುಬಂದಿದೆ.
Udupi Health Department raid on illegal clinics, B COM graduate arrested for posing as Ayurveda doctor.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm