ಬ್ರೇಕಿಂಗ್ ನ್ಯೂಸ್
17-12-23 08:56 pm Udupi Correspondent ಕ್ರೈಂ
ಉಡುಪಿ, ಡಿ.17: ಪರವಾನಗಿ ಇಲ್ಲದ ಲ್ಯಾಬ್, ಕ್ಲಿನಿಕ್ಗಳ ಮೇಲೆ ಆರೋಗ್ಯಾಧಿಕಾರಿಗಳು ದಾಳಿ ನಡೆಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಈ ವೇಳೆ ತಾನು ವೈದ್ಯನೆಂದು ಹೇಳಿಕೊಂಡು ಬ್ರಹ್ಮಾವರ ತಾಲೂಕಿನ ಕಂಬಳಗದ್ದೆ ಕ್ರಾಸ್ನ ಕುಂಜಾಲಿನಲ್ಲಿ ಕ್ಲಿನಿಕ್ ಇಟ್ಟುಕೊಂಡು ಆಯುರ್ವೇದಿಕ್, ಅಲೋಪತಿ ಚಿಕಿತ್ಸೆ ನೀಡುತ್ತಿದ್ದ ಬಿಕಾಂ ಪದವೀಧರನೊಬ್ಬ ಸಿಕ್ಕಿಬಿದ್ದಿದ್ದಾನೆ.
ಬಿಕಾಂ ಪದವಿ ಪಡೆದಿರುವ ಸಂದೇಶ್ ರಾವ್ ಕುಂಜಾಲಿನಲ್ಲಿ ಶ್ರೀಸೂರ್ಯನಾರಾಯಣ ಸ್ವಾಮಿ ಹೆಸರಿನ ಆಯುರ್ವೇದಿಕ್ ಕೇಂದ್ರ ತೆರೆದು ಚಿಕಿತ್ಸೆ ನೀಡುತ್ತಿದ್ದನು. ಈ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿಗಳು ದಾಳಿ ನಡೆಸಿದಾಗ ಸಂದೇಶ್ ರಾವ್ ವೈದ್ಯನಲ್ಲ, ಆತ ನಕಲಿ ವೈದ್ಯ ಎಂದು ತಿಳಿದುಬಂದಿದೆ. ಸದ್ಯ, ಕ್ಲಿನಿಕ್ ಜಪ್ತಿ ಮಾಡಿದ ಆರೋಗ್ಯಾಧಿಕಾರಿಗಳು, ಆರೋಪಿ ವಿರುದ್ಧ ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಲ್ಯಾಬ್, ಕ್ಲಿನಿಕ್ಗಳ ಮೇಲೆ ದಾಳಿ ಆರೋಗ್ಯಾಧಿಕಾರಿಗಳ ದಾಳಿ
ರಾಜ್ಯದಲ್ಲಿ ಭ್ರೂಣ ಹತ್ಯೆ ಕೇಸ್ ಪತ್ತೆ ಹಿನ್ನೆಲೆ ಆರೋಗ್ಯಾಧಿಕಾರಿಗಳು ಇಂದು ಜಿಲ್ಲೆಯ ಹಲವೆಡೆ ಲ್ಯಾಬ್, ಕ್ಲಿನಿಕ್ಗಳ ಮೇಲೆ ದಾಳಿ ನಡೆಸಿದ್ದರು. ಉಡುಪಿ, ಕುಂದಾಪುರ ತಾಲೂಕಿನ ಏಳು ಕಡೆ ದಾಳಿ ನಡೆಸಿದಾಗ ನಕಲಿ ವೈದ್ಯರು, ಅನುಮತಿ ರಹಿತ ಕ್ಲಿನಿಕ್ಗಳು ಪತ್ತೆಯಾಗಿವೆ. ಪರವಾನಗಿ ಇಲ್ಲದ ಲ್ಯಾಬ್, ಕ್ಲಿನಿಕ್ ಸೀಜ್ ಮಾಡಿ ಕೆಪಿಎಂಇ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಪ್ಪುಂದದ ಸುಷ್ಮಾ ಕ್ಲಿನಿಕಲ್ ಲ್ಯಾಬ್ ಸೀಜ್ ಮಾಡಿ ಕೇಸ್ ದಾಖಲು ಮಾಡಲಾಗಿದ್ದು, ಕುಂದಾಪುರದ ಬಯೋಲಿನ್ ಕ್ಲಿನಿಕಲ್ ಲ್ಯಾಬ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಆರೂರಿನಲ್ಲಿ ಆರೋಗ್ಯಾಧಿಕಾರಿಗಳು ಒಂದು ಕ್ಲಿನಿಕ್ ಜಪ್ತಿ ಮಾಡಿದ್ದಾರೆ.
ಆಯುರ್ವೇದಿಕ್ ನೋಂದಣಿಯಲ್ಲಿ ಅಲೋಪತಿ ಕ್ಲಿನಿಕ್ ನಡೆಸುತ್ತಿದ್ದ ವಿಚಾರ ಪತ್ತೆಯಾಗಿದೆ. ಆದಿ ಉಡುಪಿಯ ಧನ್ವಂತರಿ ಕ್ಲಿನಿಕ್, ನಾವುಂದದ ನಂಬಿಯಾರ್ ಕ್ಲಿನಿಕ್ನಲ್ಲಿ ಅಲೋಪತಿ ಚಿಕಿತ್ಸೆ ನೀಡುತ್ತಿದ್ದ ವಿಚಾರ ತಿಳಿದುಬಂದಿದೆ.
Udupi Health Department raid on illegal clinics, B COM graduate arrested for posing as Ayurveda doctor.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm