ಬ್ರೇಕಿಂಗ್ ನ್ಯೂಸ್
17-12-23 08:56 pm Udupi Correspondent ಕ್ರೈಂ
ಉಡುಪಿ, ಡಿ.17: ಪರವಾನಗಿ ಇಲ್ಲದ ಲ್ಯಾಬ್, ಕ್ಲಿನಿಕ್ಗಳ ಮೇಲೆ ಆರೋಗ್ಯಾಧಿಕಾರಿಗಳು ದಾಳಿ ನಡೆಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಈ ವೇಳೆ ತಾನು ವೈದ್ಯನೆಂದು ಹೇಳಿಕೊಂಡು ಬ್ರಹ್ಮಾವರ ತಾಲೂಕಿನ ಕಂಬಳಗದ್ದೆ ಕ್ರಾಸ್ನ ಕುಂಜಾಲಿನಲ್ಲಿ ಕ್ಲಿನಿಕ್ ಇಟ್ಟುಕೊಂಡು ಆಯುರ್ವೇದಿಕ್, ಅಲೋಪತಿ ಚಿಕಿತ್ಸೆ ನೀಡುತ್ತಿದ್ದ ಬಿಕಾಂ ಪದವೀಧರನೊಬ್ಬ ಸಿಕ್ಕಿಬಿದ್ದಿದ್ದಾನೆ.
ಬಿಕಾಂ ಪದವಿ ಪಡೆದಿರುವ ಸಂದೇಶ್ ರಾವ್ ಕುಂಜಾಲಿನಲ್ಲಿ ಶ್ರೀಸೂರ್ಯನಾರಾಯಣ ಸ್ವಾಮಿ ಹೆಸರಿನ ಆಯುರ್ವೇದಿಕ್ ಕೇಂದ್ರ ತೆರೆದು ಚಿಕಿತ್ಸೆ ನೀಡುತ್ತಿದ್ದನು. ಈ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿಗಳು ದಾಳಿ ನಡೆಸಿದಾಗ ಸಂದೇಶ್ ರಾವ್ ವೈದ್ಯನಲ್ಲ, ಆತ ನಕಲಿ ವೈದ್ಯ ಎಂದು ತಿಳಿದುಬಂದಿದೆ. ಸದ್ಯ, ಕ್ಲಿನಿಕ್ ಜಪ್ತಿ ಮಾಡಿದ ಆರೋಗ್ಯಾಧಿಕಾರಿಗಳು, ಆರೋಪಿ ವಿರುದ್ಧ ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಲ್ಯಾಬ್, ಕ್ಲಿನಿಕ್ಗಳ ಮೇಲೆ ದಾಳಿ ಆರೋಗ್ಯಾಧಿಕಾರಿಗಳ ದಾಳಿ
ರಾಜ್ಯದಲ್ಲಿ ಭ್ರೂಣ ಹತ್ಯೆ ಕೇಸ್ ಪತ್ತೆ ಹಿನ್ನೆಲೆ ಆರೋಗ್ಯಾಧಿಕಾರಿಗಳು ಇಂದು ಜಿಲ್ಲೆಯ ಹಲವೆಡೆ ಲ್ಯಾಬ್, ಕ್ಲಿನಿಕ್ಗಳ ಮೇಲೆ ದಾಳಿ ನಡೆಸಿದ್ದರು. ಉಡುಪಿ, ಕುಂದಾಪುರ ತಾಲೂಕಿನ ಏಳು ಕಡೆ ದಾಳಿ ನಡೆಸಿದಾಗ ನಕಲಿ ವೈದ್ಯರು, ಅನುಮತಿ ರಹಿತ ಕ್ಲಿನಿಕ್ಗಳು ಪತ್ತೆಯಾಗಿವೆ. ಪರವಾನಗಿ ಇಲ್ಲದ ಲ್ಯಾಬ್, ಕ್ಲಿನಿಕ್ ಸೀಜ್ ಮಾಡಿ ಕೆಪಿಎಂಇ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಪ್ಪುಂದದ ಸುಷ್ಮಾ ಕ್ಲಿನಿಕಲ್ ಲ್ಯಾಬ್ ಸೀಜ್ ಮಾಡಿ ಕೇಸ್ ದಾಖಲು ಮಾಡಲಾಗಿದ್ದು, ಕುಂದಾಪುರದ ಬಯೋಲಿನ್ ಕ್ಲಿನಿಕಲ್ ಲ್ಯಾಬ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಆರೂರಿನಲ್ಲಿ ಆರೋಗ್ಯಾಧಿಕಾರಿಗಳು ಒಂದು ಕ್ಲಿನಿಕ್ ಜಪ್ತಿ ಮಾಡಿದ್ದಾರೆ.
ಆಯುರ್ವೇದಿಕ್ ನೋಂದಣಿಯಲ್ಲಿ ಅಲೋಪತಿ ಕ್ಲಿನಿಕ್ ನಡೆಸುತ್ತಿದ್ದ ವಿಚಾರ ಪತ್ತೆಯಾಗಿದೆ. ಆದಿ ಉಡುಪಿಯ ಧನ್ವಂತರಿ ಕ್ಲಿನಿಕ್, ನಾವುಂದದ ನಂಬಿಯಾರ್ ಕ್ಲಿನಿಕ್ನಲ್ಲಿ ಅಲೋಪತಿ ಚಿಕಿತ್ಸೆ ನೀಡುತ್ತಿದ್ದ ವಿಚಾರ ತಿಳಿದುಬಂದಿದೆ.
Udupi Health Department raid on illegal clinics, B COM graduate arrested for posing as Ayurveda doctor.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm