ಬ್ರೇಕಿಂಗ್ ನ್ಯೂಸ್
19-12-23 03:39 pm Mangalore Correspondent ಕ್ರೈಂ
ಮಂಗಳೂರು, ಡಿ 19: ಮನೆ ಬಾಡಿಗೆ ಕೊಡುವ ಜಾಹೀರಾತು ನೀಡಿದ್ದ ಹಿರಿಯ ನಾಗರಿಕರಿಗೆ ಸೈನಿಕನೆಂದು ಹೇಳಿ 2.41 ಲಕ್ಷ ರೂಪಾಯಿ ವಂಚಿಸಿದ ಘಟನೆ ನಗರದಲ್ಲಿ ನಡೆದಿದೆ.
ಹಿರಿಯ ನಾಗರೀಕರೊಬ್ಬರು ಅಪಾರ್ಟ್ ಮೆಂಟ್ ಬಾಡಿಗೆ ನೀಡುವ ಬಗ್ಗೆ ಆನ್ಲೈನ್ ಸೈಟ್ವೊಂದರಲ್ಲಿ ಜಾಹೀರಾತು ನೀಡಿದ್ದರು. ಡಿಸೆಂಬರ್ 8 ರಂದು ಯಾರೋ ಅಪರಿಚಿತ ವ್ಯಕ್ತಿ ತಾನು ಆಶೀಶ್ ಕುಮಾರ್ ಹಾಗೂ ತಾನು ಭಾರತೀಯ ಸೇನೆಯಲ್ಲಿ ನೌಕರನಾಗಿರುವುದಾಗಿ ತಿಳಿಸಿ ಮಾತನಾಡಿದ್ದಾನೆ.
ಆನ್ಲೈನ್ ಸೈಟ್ನಲ್ಲಿ ಅಪಾರ್ಟ್ಮೆಂಟ್ ಖಾಲಿ ಇರುವ ಬಗ್ಗೆ ಮಾತನಾಡಿ ನಂತರ ಬಾಡಿಗೆ ವಿಷಯವಾಗಿ ಅವರಲ್ಲಿ ವಿಚಾರಿಸಿಕೊಂಡು ನಂತರ ಮುಂಗಡ ಹಣ ಪಾವತಿಸುವುದಾಗಿಯೂ ಹಾಗೂ ಆರ್ಮಿ ಇಲಾಖೆಯಿಂದ ಕಮಾಂಡಿಂಗ್ ಪೇಮೆಂಟ್ ನಿಂದ ಹಣ ಸಂದಾಯವಾಗುವುದಾಗಿ ತಿಳಿಸಿದ್ದಾನೆ. ವಂಚನೆಗೊಳಗಾದವರು ಮೊದಲಿಗೆ 1/-ರೂ,5/-ರೂ., 49,999/-ರೂ. ಮತ್ತು 49994/-ರೂಗಳ UPI CODE ಗಳನ್ನು ವಾಟ್ಸ ಆಪ್ ಮುಖಾಂತರ ಕಳುಹಿಸಿದ್ದಾರೆ. ನಂತರ ಸತ್ಯವೆಂದು ಭಾವಿಸಿ ತಮ್ಮ ಬಾಬ್ತು ಹೆಚ್ಡಿಎಫ್ಸಿ ಬ್ಯಾಂಕ್, ಮಲ್ಲೇಶ್ವರಂ ಶಾಖೆ ಖಾತೆ ನಂಬರ್ನಿಂದ ಗೂಗಲ್ ಪೇ ಮುಖಾಂತರ ದಿನಾಂಕ ಡಿಸೆಂಬರ್ 8 ರಂದು 1,41,999/-ರೂ ಪಾವತಿಸಿರುತ್ತಾರೆ.
ನಂತರ ದಿನಾಂಕ ಡಿಸೆಂಬರ್ 9 ರಂದು ಈ ಅಪರಿಚಿತ ವ್ಯಕ್ತಿ ಮತ್ತೊಮ್ಮೆ ಕರೆ ಮಾಡಿ ಅದೇ ರೀತಿ ಮತ್ತೊಮ್ಮೆ ಪಾವತಿ ಮಾಡಬೇಕೆಂದು ಹಾಗೂ ಈ ಹಣ ಆರ್ಮಿ ಇಲಾಖೆಯಿಂದ ಕಮಾಂಡಿಂಗ್ ಪೇಮೆಂಟ್ ನಿಂದ ದೊರೆಯುವುದಾಗಿ ನಂಬಿಸಿದ್ದಾನೆ. ಹಿರಿಯ ನಾಗರಿಕರು ಅದೇ ರೀತಿ ಐಎಂಪಿ ಎಸ್ ಮುಖಾಂತರ 1,00,000/-ರೂ ಹಣ ಪಾವತಿಸಿರುತ್ತಾರೆ. ಈ ರೀತಿಯಾಗಿ ಯಾರೋ ಅಪರಿಚಿತ ವ್ಯಕ್ತಿ ಆನ್ಲೈನ್ ಮುಖಾಂತರ ಆಶೀಶ್ ಕುಮಾರ್ ಎಂದು ಪರಿಚಯಿಸಿಕೊಂಡು ತಾನು ಆರ್ಮಿಯಲ್ಲಿ ನೌಕರನೆಂದು ಹಿರಿಯ ನಾಗರಿಕರಿಗೆ ನಂಬಿಸಿ ಆನ್ಲೈನ್ ಮುಖಾಂತರ ಒಟ್ಟು 2,41,999/- ರೂಗಳನ್ನು ಮೋಸದಿಂದ ವರ್ಗಾಯಿಸಿಕೊಂಡು ವಂಚನೆ ಮಾಡಿದ್ದಾನೆ. ಈ ಅಪರಿಚಿತ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೆನ್ ಪೊಲೀಸ್ ಠಾಣೆಯಲ್ಲಿ ವಂಚೆನಗೊಳಗಾದವರು ದೂರು ನೀಡಿದ್ದಾರೆ.
ಆನ್ಲೈನ್ ಮೂಲಕ ಹಣಕಾಸು ವಂಚನೆ ನಡೆಸುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಸರ್ಕಾರದ ಅಧೀನ ಸ್ಟಾರ್ಟ್ ಅಪ್ ಸಂಸ್ಥೆ ಸೈಸೆಕ್ ಹೊಸ ಆ್ಯಪ್ ಸಿದ್ಧಪಡಿಸಿದೆ. ಬ್ರೌಸ್ ಸೇಫ್ ಎನ್ನುವ ಆ್ಯಪ್ ಸಿದ್ಧಪಡಿಸಿದ್ದು, ಈ ಆ್ಯಪ್ ಬಳಸಿದರೆ ಲಿಂಕ್ಗಳನ್ನು ಒತ್ತಿ ಹಣ ಕಳೆದುಕೊಳ್ಳುವುದಕ್ಕೆ ಬ್ರೇಕ್ ಬೀಳಲಿದೆ.
In a shocking incident, a senior citizen was duped of Rs 2.41 lakh by posing as a soldier for advertising house rent. A senior citizen had advertised on an online site about renting out an apartment. On December 8, an unidentified person told him that he was Ashish Kumar and that he was an employee of the Indian Army.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm