ಬ್ರೇಕಿಂಗ್ ನ್ಯೂಸ್
19-12-23 04:24 pm Mangalore Correspondent ಕ್ರೈಂ
ಬೆಳ್ತಂಗಡಿ, ಡಿ.19: ಕುಡಿದ ಮತ್ತಿನಲ್ಲಿ ಕಟುಕ ಪತಿಯೋರ್ವ ಪತ್ನಿಯ ಕಣ್ಣು ಮತ್ತು ಕೆನ್ನೆಗೆ ಕಚ್ಚಿ ಮಾಂಸವನ್ನೇ ಕಿತ್ತು ಹಾಕಿರುವ ರಾಕ್ಷಿಸೀ ಕೃತ್ಯ ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಆರೋಪಿ ತನ್ನ ಪುತ್ರಿಯ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.
ಶಿಶಿಲ ಬಳಿಯ ಕೋಟೆಬಾಗಿಲು ನಿವಾಸಿ ಸುರೇಶ್ ಗೌಡ ಎಂಬಾತನೇ ಈ ರಾಕ್ಷಸಿ ಕೃತ್ಯ ಎಸಗಿರುವಾತ. ಪತಿ ಸುರೇಶ್ ಗೌಡ ಕುಡಿದು ಬಂದು ಜಗಳ ಮಾಡಿದ್ದು ಈ ವೇಳೆ ಆಕೆಯ ಕಣ್ಣು ಹಾಗೂ ಕೆನ್ನೆಯ ಭಾಗಕ್ಕೆ ಕಚ್ಚಿ ಮಾಂಸವನ್ನೇ ಕಿತ್ತು ಹಾಕಿದ್ದಾನೆ. ಆ ಬಳಿಕ ದೊಣ್ಣೆಯಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ತಂದೆಯ ದಾಳಿಯಿಂದ ತಾಯಿಯನ್ನು ಬಿಡಿಸಲು ಬಂದ ಪುತ್ರಿಯ ತಲೆ ಹಾಗೂ ಕಣ್ಣಿಗೂ ಆರೋಪಿ ಹೊಡೆದಿದ್ದಾನೆ. ಆಗ ಆಕೆ ಪ್ರಾಣ ಉಳಿಸಿಕೊಳ್ಳಲು ತಂದೆಯಿಂದ ತಪ್ಪಿಸಿಕೊಂಡು ನೆರೆಹೊರೆಯವರಿಗೆ ವಿಚಾರ ತಿಳಿಸಿದ್ದಾಳೆ.
ನೆರೆಹೊರೆಯವರು ಧಾವಿಸುತ್ತಿದ್ದಂತೆ ಆರೋಪಿ ತೋಟದೊಳಗೆ ಓಡಿ ತಪ್ಪಿಸಿಕೊಂಡಿದ್ದಾನೆ. ಪತಿಯಿಂದ ಜೀವ ಉಳಿಸಿಕೊಳ್ಳಲು ಓಡಿ ಹೋಗಿರುವ ಪತ್ನಿ ಇಂದು ಬೆಳಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಿಪರೀತವಾಗಿ ಗಾಯಗೊಂಡ ತಾಯಿ ಹಾಗೂ ಪುತ್ರಿಯನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಬೆಳ್ತಂಗಡಿಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident, a drunk butcher bit his wife on the eyes and cheeks and chopped off her flesh at Shishila village in Belthangady taluk of Dakshina Kannada district late on Monday nigh.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 09:29 pm
HK News Staffer
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm