ಬ್ರೇಕಿಂಗ್ ನ್ಯೂಸ್
19-12-23 07:04 pm Mangalore Correspondent ಕ್ರೈಂ
ಉಳ್ಳಾಲ, ಡಿ.19: ಮನೆಯನ್ನೇ ಅಕ್ರಮ ಸಾರಾಯಿ ಘಟಕವನ್ನಾಗಿಸಿ ಅಂತರಾಜ್ಯ ಸ್ಪಿರಿಟ್ ಧಂದೆಯಲ್ಲಿ ತೊಡಗಿಸಿದ್ದ ಪ್ರಮುಖ ಕಿಂಗ್ ಪಿನ್ ತಲಪಾಡಿ, ಸಾಂತ್ಯದ ಲೋಕಲ್ ಪುಢಾರಿ ನಿತ್ಯಾನಂದ ಭಂಡಾರಿಯನ್ನ ಅಬಕಾರಿ ಪೊಲೀಸರು ವಶಕ್ಕೆ ಪಡೆದಿರುವ ಮಾಹಿತಿ ಲಭಿಸಿದೆ.
ಕಳೆದ ಮಂಗಳವಾರ ಕರ್ನಾಟಕ- ಕೇರಳ ಗಡಿ ಪ್ರದೇಶ ತಲಪಾಡಿ ಸಮೀಪದ ಕಿನ್ಯ ಗ್ರಾಮದ ಸಾಂತ್ಯ ನಿವಾಸಿ ನಿತ್ಯಾನಂದ ಭಂಡಾರಿ ಎಂಬವನ ಮನೆಯಲ್ಲಿ ನಡೆಸಲ್ಪಡುತ್ತಿದ್ದ ಅಕ್ರಮ ಸಾರಾಯಿ ಘಟಕಕ್ಕೆ ದಾಳಿ ಮಾಡಿದ ಅಬಕಾರಿ ಪೊಲೀಸರು 2240 ಲೀಟರ್ ಸ್ಪಿರಿಟ್ ಹಾಗೂ 222 ಲೀಟರ್ ನಕಲಿ ಲಿಕ್ಕರ್ ಅನ್ನು ವಶಪಡಿಸಿಕೊಂಡಿದ್ದರು. ಅಂತಾರಾಜ್ಯ ಸ್ಪಿರಿಟ್ ಮಾರಾಟ ದಂಧೆಯ ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೊಲೀಸರು ಆರೋಪಿ ಮನೆಗೆ ದಾಳಿ ನಡೆಸಿ ಅಪಾರ ಪ್ರಮಾಣದ ಮದ್ಯ ವಶಪಡಿಸಿಕೊಂಡಿದ್ದರು.
ಅಕ್ರಮ ಮದ್ಯವನ್ನ ನಿತ್ಯಾನಂದ ಕೇರಳಕ್ಕೆ ಸಾಗಿಸುತ್ತಿದ್ದು ಅಬಕಾರಿ ಪೊಲೀಸರ ದಾಳಿ ವೇಳೆ ಪರಾರಿಯಾಗಿ ತಲೆಮರೆಸಿಕೊಂಡಿದ್ದ. ಇದೀಗ ಆರೋಪಿ ನಿತ್ಯಾನಂದನನ್ನ ಪೊಲೀಸರು ವಶಕ್ಕೆ ಪಡೆದಿದ್ದು ವೈದ್ಯಕೀಯ ಪರೀಕ್ಷೆಗೊಳಪಡಿಸಿ ವರ್ಕೌಟ್ ಮಾಡುತ್ತಿರುವುದಾಗಿ ಮಾಹಿತಿ ಲಭಿಸಿದೆ.
ಜನರಿಗೆ ಪ್ರಾಣಕ್ಕೆ ಮಾರಕವಾದ ಸ್ಪಿರಿಟ್ ಕುಡಿಸಿ ತನ್ನ ಜೇಬು ತುಂಬಿಸಿ ಕೋಟಿ ಕುಳವಾಗಿರುವ ನಿತ್ಯಾನಂದ ಈ ಹಿಂದೆ ತನ್ನ ಮುಂಬಯಿ ಧಣಿಗಳ ಕಾಳ ಧನವನ್ನ ಚಕ್ರಬಡ್ಡಿಗೆ ಕೊಟ್ಟು ಧನಿಕನಾಗಿದ್ದ. ಇಷ್ಟಲ್ಲದೆ ಧಾರ್ಮಿಕ ಕಾರ್ಯಕ್ರಮ, ರಾಜಕೀಯ ಪಕ್ಷದಲ್ಲೂ ಗುರುತಿಸಿಕೊಂಡು ತಾನೇ ಡೊನೇಷನ್ ನೀಡಿ ವೇದಿಕೆಯಲ್ಲಿ ಲೋಕಲ್ ಪುಡಾರಿಯಾಗಿ ಮಿಂಚುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
Mangalore Inter state illegal liquor sale, King pin Nithyananda Bhandary arrested from Talapady. Few days ago Excise Department officials from Mangaluru unearthed an inter-State illicit liquor racket close to the Karnataka-Kerala border near Talapady on Tuesday night and arrested three persons.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm