ಬ್ರೇಕಿಂಗ್ ನ್ಯೂಸ್
20-12-23 10:44 pm Bangalore Correspondent ಕ್ರೈಂ
ಬೆಂಗಳೂರು, ಡಿ 20: ನೈಜೀರಿಯಾ ಪ್ರಜೆಯೊಬ್ಬ ತನ್ನ ಹೊಟ್ಟೆಯಲ್ಲೇ ಬರೋಬ್ಬರಿ ಎರಡು ಕೇಜಿಯಷ್ಟು ಕೊಕೇನ್ ಮಾದಕ ದ್ರವ್ಯದ ಮಾತ್ರೆಗಳನ್ನು ತುಂಬಿಸಿಕೊಂಡು ಬಂದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿ ಬಿದ್ದಿದ್ದಾನೆ.
ಹೊಟ್ಟೆಯಲ್ಲಿ ಕೊಕೇನ್ ತುಂಬಿದ್ದ 99 ಕ್ಯಾಪ್ಸೂಲ್ಗಳನ್ನು ತಪಾಸಣೆ ವೇಳೆ ಪತ್ತೆ ಮಾಡಲಾಗಿದೆ. ಇದರ ಮೌಲ್ಯ ಸುಮಾರು 20 ಕೋಟಿ ರೂಪಾಯಿ ಎಂದು ಅಂದಾಜಿಸಿದ್ದು ಹೊಟ್ಟೆಯ ರಹಸ್ಯ ತಿಳಿದ ಕಸ್ಟಮ್ಸ್ ಅಧಿಕಾರಿಗಳು ಅವಾಕ್ಕಾಗಿದ್ದಾರೆ. ಆರೋಪಿ ಇಥಿಯೋಪಿಯಾದ ಅದ್ದೀಸ್ ಅಬಾದ್ ನಗರದಿಂದ ಬೆಂಗಳೂರಿಗೆ ವಿಮಾನದಲ್ಲಿ ಆಗಮಿಸಿದ್ದ. ಕಂದಾಯ ವಿಚಕ್ಷಣಾ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ಖಚಿತ ಮಾಹಿತಿ ಆಧರಿಸಿ ತಪಾಸಣೆ ನಡೆಸಿದ್ದಾರೆ.
ಹೊಟ್ಟೆಯಲ್ಲಿ ಕೊಕೇನ್ ಇರೋದನ್ನ ಖಚಿತಪಡಿಸಿದ ಅಧಿಕಾರಿಗಳು ವ್ಯಕ್ತಿಯನ್ನು ನೇರವಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಐದು ದಿನಗಳ ಕಾಲ ಇರಿಸಿ ಆಪರೇಶನ್ ಮಾಡಿದ್ದು ಹೊಟ್ಟೆಯಲ್ಲಿದ್ದ ಮಾದಕ ವಸ್ತುಗಳನ್ನು ಹಂತ ಹಂತವಾಗಿ ಹೊರಗೆ ತೆಗೆಯಲಾಗಿದೆ. 40 ವರ್ಷದ ಆರೋಪಿ ನೈಜೀರಿಯಾ ಪ್ರಜೆಯಾಗಿದ್ದು ಹೊಟ್ಟೆ ನೋವಿಗೆ ಸರ್ಜರಿ ಇದೆಯೆಂದು ವೈದ್ಯಕೀಯ ಚಿಕಿತ್ಸೆಯ ಕಾರಣವೊಡ್ಡಿ ಭಾರತದ ವೀಸಾ ಗಿಟ್ಟಿಸಿಕೊಂಡಿದ್ದ. ಡಿ.11ರಂದು ಬೆಂಗಳೂರಿಗೆ ಬಂದಾಗಲೇ ವಶಕ್ಕೆ ಪಡೆಯಲಾಗಿತ್ತು.
ಆರೋಪಿ ವಿರುದ್ಧ ಮಾದಕ ದ್ರವ್ಯ ನಿಗ್ರಹ ಕಾಯ್ದೆ ಸೇರಿದಂತೆ ಹಲವು ಸೆಕ್ಷನ್ ಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ರವಾನೆ ಮಾಡಲಾಗಿದೆ. ಮಾದಕ ವಸ್ತುಗಳನ್ನು ಆರೋಪಿ ಯಾರಿಗೆ ನೀಡಲು ಹೊರಟಿದ್ದ ಅನ್ನೋದ್ರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The Directorate Revenue Intelligence (DRI) officials at the Kempegowda International Airport seized cocaine worth Rs 20 crore from passengers. A Nigerian national was attempting to smuggle cocaine in capsules inside his stomach. The customs officials recovered 2 kg of cocaine concealed inside 99 capsules. The passenger was flying from Addis Ababa, Ethiopia to Bengaluru.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm