ಬ್ರೇಕಿಂಗ್ ನ್ಯೂಸ್
21-12-23 06:05 pm Mangalore Correspondent ಕ್ರೈಂ
ಬೆಳ್ತಂಗಡಿ, ಡಿ.21: ಸರಕಾರಿ ಸಂಸ್ಥೆಯ ಉದ್ಯೋಗಿಯೊಬ್ಬರು ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಬಸ್ ಹತ್ತುತ್ತಿದ್ದಾಗ ಕರಿಮಣಿ ಸರ ಕಳವಾದ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು ಇಬ್ಬರು ತಮಿಳುನಾಡು ಮೂಲದ ಕಳ್ಳಿಯರನ್ನು ಬಂಧಿಸಿದ್ದಾರೆ.
ವಾರಿಜಾ ಅವರು ಡಿ.12ರಂದು ಕೆಎಸ್ಸಾರ್ಟಿಸಿ ಬಸ್ ಹತ್ತುತ್ತಿದ್ದಾಗ 24 ಗ್ರಾಂ ತೂಕದ ಚಿನ್ನದ ಕರಿಮಣಿ ಸರವನ್ನು ಕಳ್ಳತನ ಮಾಡಲಾಗಿತ್ತು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದರು. ಅದರಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದರು.
ಪ್ರಕರಣದ ತನಿಖೆ ಸಂದರ್ಭದಲ್ಲಿ ಬೆಳ್ತಂಗಡಿ ಉಪ ನಿರೀಕ್ಷಕ ಚಂದ್ರಶೇಖರ್ ಮತ್ತು ತಂಡದ ಪೊಲೀಸರು ಸಂಶಯದ ಮೇರೆಗೆ ತಮಿಳುನಾಡು ಮೂಲದ ಇಬ್ಬರು ಮಹಿಳೆಯರನ್ನು ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ಕಳ್ಳತನ ಒಪ್ಪಿಕೊಂಡಿದ್ದು ಇಬ್ಬರನ್ನೂ ಬಂಧಿಸಿದ್ದಾರೆ. ತಮಿಳುನಾಡಿನ ತಿರುಪೂರ್ ಜಿಲ್ಲೆಯ ಮೋಹಿನಿ ಯಾನೆ ಮಾರಿಮುತ್ತು (35) ಮತ್ತು ದಿವ್ಯಾ ಯಾನೆ ಕಾಮಾಚಿ (30) ಬಂಧಿತರಾಗಿದ್ದು ಕದ್ದ ಕರಿಮಣಿ ಸರವನ್ನು ಪೊಲೀಸರಿಗೆ ನೀಡಿದ್ದಾರೆ.
ಆರೋಪಿಗಳು ಈ ಹಿಂದೆ ಬೆಳ್ತಂಗಡಿ ಸೇರಿದಂತೆ ಹಲವು ಕಡೆ ಕಳ್ಳತನ ನಡೆಸಿದ್ದು ವಿಚಾರಣೆ ವೇಳೆ ಮೂಲ್ಕಿ ಮತ್ತು ಬೆಳ್ತಂಗಡಿಯಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ತಪ್ಪೊಪ್ಪಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Belthangady Police have arrested two women on charges of chain snatching. The arrests were made following a recent incident of snatching the mangalasutra of a woman while she was boarding a government bus.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm