ಬ್ರೇಕಿಂಗ್ ನ್ಯೂಸ್
29-12-23 03:50 pm HK News Desk ಕ್ರೈಂ
ಮೈಸೂರು, ಡಿ.29: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಜೈಲಿಗೆ ಹಿಂದಿರುಗುವ ವೇಳೆ ಕೈದಿಯೊಬ್ಬ ಗಾಂಜಾವನ್ನು ಬಚ್ಚಿಟ್ಟುಕೊಂಡು ಕಾರಾಗೃಹದ ಒಳಗೆ ಹೋಗುವ ಸಮಯದಲ್ಲಿ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದಿರುವ ಘಟನೆ ಬುಧವಾರ ನಡೆದಿದೆ.
ಮೈಸೂರು ಕಾರಾಗೃಹದಲ್ಲಿ ಸಜಾಬಂಧಿಯಾಗಿರುವ ಮಡಿಕೇರಿ ಬಳಿಯ ಇಬ್ಬಣಿವಾಳವಾಡಿ ಗ್ರಾಮದ ನಿವಾಸಿ ದುರ್ಗದತ್ತ ಕಾಳಿದಾಸಸ್ವಾಮಿ (28) ಕಾರಾಗೃಹದೊಳಕ್ಕೆ ಹೋಗುವ ವೇಳೆ ಸಿಕ್ಕಿ ಬಿದ್ದಿದ್ದಾನೆ.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿದ್ದ ದುರ್ಗದತ್ತ ಕಾಳಿದಾಸಸ್ವಾಮಿಗೆ ಅನಾರೋಗ್ಯದ ಕಾರಣ ಜೈಲು ಅಧಿಕಾರಿಗಳು ಬುಧವಾರ ಮಧ್ಯಾಹ್ನ ಚಿಕಿತ್ಸೆಗಾಗಿ ಕೆಆರ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆತನಿಗೆ ಚಿಕಿತ್ಸೆ ಕೊಡಿಸಿ ಬುಧವಾರ ಮಧ್ಯಾಹ್ನ 2 ಗಂಟೆ ವೇಳೆಗೆ ವಾಪಸ್ ಜೈಲಿಗೆ ಕರೆತಂದಿದ್ದಾರೆ. ಈ ವೇಳೆ ಆತನನ್ನು ಅಲ್ಲಿನ ಸಿಬ್ಬಂದಿಗಳಾದ ಉಮೇಶ್ ಚಂದ್ರನಾಯಕ್ ಹಾಗೂ ಶಿವಾನಂದ ಕೋಕಲೆ ಅವರು ತಪಾಸಣೆಗೊಳಪಡಿಸಿದ್ದಾರೆ. ಈ ವೇಳೆ ಆತನ ಬಲಗಾಲಿನಲ್ಲಿ ಕಪ್ಪು ಬಣ್ಣದ ಟೇಪ್ ಸುತ್ತಿರುವುದು ಅವರಿಗೆ ಕಂಡುಬಂದಿದೆ. ಕೂಡಲೇ ಟೇಪ್ನ್ನು ತೆಗೆದು ಪರಿಶೀಲನೆ ನಡೆಸಿದಾಗ ಅಲ್ಲಿ ಗಾಂಜಾ ಪೊಟ್ಟಣವಿರುವುದು ಕಂಡುಬಂದಿದೆ. ತಕ್ಷಣವೇ ಮೇಲಾಧಿಕಾರಿಗಳಿಗೆ ವಿಚಾರ ತಿಳಿಸಿದ್ದಾರೆ.
ಸ್ಥಳಕ್ಕೆ ಬಂದ ಕಾರಾಗೃಹ ಅಧಿಕಾರಿಗಳು ದುರ್ಗದತ್ತ ಅವರ ವಿರುದ್ಧ ಮಂಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೆಆರ್ ಆಸ್ಪತ್ರೆಯ ಶೌಚಾಯದಲ್ಲಿ ನೆವೆಲ್ ಎಂಬಾತ ಇರಿಸಿದ್ದ ಗಾಂಜಾವನ್ನು ತೆಗೆದುಕೊಂಡು ಬಂದಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ. ಮಂಡಿ ಪೊಲೀಸರು 76 ಗ್ರಾಂ ಗಾಂಜಾ ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.
In a shocking incident, a prisoner, who was carrying ganja while returning to the jail after treatment on the pretext of ill health, was caught on camera by the jail staff.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm