ಬ್ರೇಕಿಂಗ್ ನ್ಯೂಸ್
29-12-23 03:50 pm HK News Desk ಕ್ರೈಂ
ಮೈಸೂರು, ಡಿ.29: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಜೈಲಿಗೆ ಹಿಂದಿರುಗುವ ವೇಳೆ ಕೈದಿಯೊಬ್ಬ ಗಾಂಜಾವನ್ನು ಬಚ್ಚಿಟ್ಟುಕೊಂಡು ಕಾರಾಗೃಹದ ಒಳಗೆ ಹೋಗುವ ಸಮಯದಲ್ಲಿ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದಿರುವ ಘಟನೆ ಬುಧವಾರ ನಡೆದಿದೆ.
ಮೈಸೂರು ಕಾರಾಗೃಹದಲ್ಲಿ ಸಜಾಬಂಧಿಯಾಗಿರುವ ಮಡಿಕೇರಿ ಬಳಿಯ ಇಬ್ಬಣಿವಾಳವಾಡಿ ಗ್ರಾಮದ ನಿವಾಸಿ ದುರ್ಗದತ್ತ ಕಾಳಿದಾಸಸ್ವಾಮಿ (28) ಕಾರಾಗೃಹದೊಳಕ್ಕೆ ಹೋಗುವ ವೇಳೆ ಸಿಕ್ಕಿ ಬಿದ್ದಿದ್ದಾನೆ.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿದ್ದ ದುರ್ಗದತ್ತ ಕಾಳಿದಾಸಸ್ವಾಮಿಗೆ ಅನಾರೋಗ್ಯದ ಕಾರಣ ಜೈಲು ಅಧಿಕಾರಿಗಳು ಬುಧವಾರ ಮಧ್ಯಾಹ್ನ ಚಿಕಿತ್ಸೆಗಾಗಿ ಕೆಆರ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆತನಿಗೆ ಚಿಕಿತ್ಸೆ ಕೊಡಿಸಿ ಬುಧವಾರ ಮಧ್ಯಾಹ್ನ 2 ಗಂಟೆ ವೇಳೆಗೆ ವಾಪಸ್ ಜೈಲಿಗೆ ಕರೆತಂದಿದ್ದಾರೆ. ಈ ವೇಳೆ ಆತನನ್ನು ಅಲ್ಲಿನ ಸಿಬ್ಬಂದಿಗಳಾದ ಉಮೇಶ್ ಚಂದ್ರನಾಯಕ್ ಹಾಗೂ ಶಿವಾನಂದ ಕೋಕಲೆ ಅವರು ತಪಾಸಣೆಗೊಳಪಡಿಸಿದ್ದಾರೆ. ಈ ವೇಳೆ ಆತನ ಬಲಗಾಲಿನಲ್ಲಿ ಕಪ್ಪು ಬಣ್ಣದ ಟೇಪ್ ಸುತ್ತಿರುವುದು ಅವರಿಗೆ ಕಂಡುಬಂದಿದೆ. ಕೂಡಲೇ ಟೇಪ್ನ್ನು ತೆಗೆದು ಪರಿಶೀಲನೆ ನಡೆಸಿದಾಗ ಅಲ್ಲಿ ಗಾಂಜಾ ಪೊಟ್ಟಣವಿರುವುದು ಕಂಡುಬಂದಿದೆ. ತಕ್ಷಣವೇ ಮೇಲಾಧಿಕಾರಿಗಳಿಗೆ ವಿಚಾರ ತಿಳಿಸಿದ್ದಾರೆ.
ಸ್ಥಳಕ್ಕೆ ಬಂದ ಕಾರಾಗೃಹ ಅಧಿಕಾರಿಗಳು ದುರ್ಗದತ್ತ ಅವರ ವಿರುದ್ಧ ಮಂಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೆಆರ್ ಆಸ್ಪತ್ರೆಯ ಶೌಚಾಯದಲ್ಲಿ ನೆವೆಲ್ ಎಂಬಾತ ಇರಿಸಿದ್ದ ಗಾಂಜಾವನ್ನು ತೆಗೆದುಕೊಂಡು ಬಂದಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ. ಮಂಡಿ ಪೊಲೀಸರು 76 ಗ್ರಾಂ ಗಾಂಜಾ ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.
In a shocking incident, a prisoner, who was carrying ganja while returning to the jail after treatment on the pretext of ill health, was caught on camera by the jail staff.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm