ಬ್ರೇಕಿಂಗ್ ನ್ಯೂಸ್
19-11-20 11:36 am Headline Karnataka News Network ಕ್ರೈಂ
ಮಂಡ್ಯ, ನವೆಂಬರ್ 19: ಯುವತಿಯ ಅಂಗಾಂಗಗಳನ್ನು ಕತ್ತರಿಸಿ ಬರ್ಬರವಾಗಿ ಕೊಲೆ ಮಾಡಿ ನದಿಗೆ ಎಸೆದಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಬಂಡಿಹೊಳೆಯಲ್ಲಿ ನಡೆದಿದೆ. ಇಲ್ಲಿನ ಹೇಮಾವತಿ ನದಿಯಲ್ಲಿ ಯುವತಿಯ ಅಂಗಾಂಗಗಳು ಪತ್ತೆಯಾಗಿವೆ.
ಬಂಡಿಹೊಳೆ ಗ್ರಾಮದ ಹೇಮಾವತಿ ದಡದಲ್ಲಿರುವ ವಿದ್ಯುತ್ ಸ್ಥಾವರ ಘಟಕದ ಸಮೀಪ ತಲೆ ಮತ್ತು ಅಂಗಾಂಗಗಳು ಪತ್ತೆಯಾಗಿವೆ. ಸ್ಥಳೀಯರು ಮೊದಲು ಯುವತಿಯ ದೇಹದ ಅಂಗಾಂಗಗಳು ತೇಲುತ್ತಿದ್ದುದನ್ನು ನೋಡಿದ್ದಾರೆ. ನಂತರ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಎರಡು ದಿನಗಳ ಹಿಂದೆ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.
25 ರಿಂದ 30 ವರ್ಷದ ಅಪರಿಚಿತ ಯುವತಿಯನ್ನು ತುಂಡುತುಂಡಾಗಿ ಕತ್ತರಿಸಿ ಕೊಲೆ ಮಾಡಿರುವ ದುಷ್ಕರ್ಮಿಗಳು, ಮೃತದೇಹವನ್ನು ಗೋಣಿಚೀಲದಲ್ಲಿ ಹಾಕಿಕೊಂಡು ವಾಹನದಲ್ಲಿ ಬಂದು ಇಲ್ಲಿ ಬಿಸಾಡಿ ಹೋಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತ ಯುವತಿ ಯಾರೆಂದು ಇನ್ನೂ ತಿಳಿದುಬಂದಿಲ್ಲ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಶೋಧ ಕಾರ್ಯ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಸೆರೆಗೆ ತನಿಖೆ ಕೈಗೊಂಡಿದ್ದಾರೆ. ಕೆ.ಆರ್.ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ತಲೆ ಹಾಗೂ ದೇಹದ ಭಾಗವನ್ನು ಮರಣೋತ್ತರ ಪರೀಕ್ಷೆಗಾಗಿ ಕೆ.ಆರ್.ಪೇಟೆಯ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಪೊಲೀಸರು ಸಾಗಿಸಿದ್ದು, ಯುವತಿಯ ಮೂಗಿನಲ್ಲಿ ಕೆಂಪು ಹರಳಿನ ಮೂಗುತಿ, ಬಲಗೈನ ಮುಂಗೈನ ಮೇಲೆ ಮೀನಿನ ಹಚ್ಚೆಯ ಗುರುತು ಇದೆ. ಈಕೆಯ ವಾರಸುದಾರರು ಯಾರಾದರೂ ಇದ್ದಲ್ಲಿ ಕೆ.ಆರ್.ಪೇಟೆ ಗ್ರಾಮಾಂತರ ಪೋಲಿಸರನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
A young girl has been brutally murdered and her body has been cut in pieces and throw to river Hemavathi in Mandya.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm