ಬ್ರೇಕಿಂಗ್ ನ್ಯೂಸ್
03-01-24 07:43 pm Bangalore Correspondent ಕ್ರೈಂ
ಬೆಂಗಳೂರು, ಜ.3: ತಾನು ಲೋಕಾಯುಕ್ತ ಅಧಿಕಾರಿಯೆಂದು ಪೋಸು ಕೊಟ್ಟು 30ಕ್ಕೂ ಹೆಚ್ಚು ಸರ್ಕಾರಿ ಅಧಿಕಾರಿಗಳಿಗೆ ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು ಬೆಂಗಳೂರು ಸಿಸಿಬಿ ಪೊಲೀಸರು ನಕಲಿ ಲೋಕಾಯುಕ್ತ ಅಧಿಕಾರಿಯನ್ನು ಬಂಧಿಸಿದ್ದಾರೆ.
ಆರೋಪಿ ಶ್ರೀನಾಥ್ ರೆಡ್ಡಿ (34) ಆಂಧ್ರಪ್ರದೇಶ ಮೂಲದ ವ್ಯಕ್ತಿಯಾಗಿದ್ದು, 2007ರಿಂದಲೇ ಇದೇ ಮಾದರಿಯ ಕ್ರಿಮಿನಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ. ಹಿಂದೆ ಬೀಗ ಹಾಕಿರುತ್ತಿದ್ದ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಶ್ರೀನಾಥ್ ಬಳಿಕ ಪೊಲೀಸ್ ಅಧಿಕಾರಿಯೆಂದು ಹೇಳಿ ಸರ್ಕಾರಿ ಅಧಿಕಾರಿಗಳನ್ನು ಯಾಮಾರಿಸಲು ತೊಡಗಿದ್ದ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.
ತೆಲುಗು ಚಲನಚಿತ್ರಗಳಿಂದ ಸ್ಫೂರ್ತಿ ಪಡೆದು ಸರ್ಕಾರಿ ಅಧಿಕಾರಿಗಳನ್ನು ಗುರಿಯಾಗಿಸಿ ಕುಕೃತ್ಯ ಮುಂದುವರಿಸಿದ್ದ. ಕೇವಲ 10ನೇ ತರಗತಿ ಓದಿರುವ ಆರೋಪಿ 36 ಸರ್ಕಾರಿ ಅಧಿಕಾರಿಗಳಿಗೆ ವಂಚನೆ ಮಾಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಆದರೆ ಒಬ್ಬರು ಮಾತ್ರ ಪೊಲೀಸರಿಗೆ ದೂರು ನೀಡಿದ್ದರು. ಅದನ್ನು ಆಧರಿಸಿ ತನಿಖೆ ನಡೆಸಿದಾಗ ಖದೀಮ ಸಿಕ್ಕಿಬಿದ್ದಿದ್ದಾನೆ.
ಆರೋಪಿ ಶ್ರೀನಾಥ್ ರೆಡ್ಡಿ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿಯೂ ಇದೇ ರೀತಿ ಸರ್ಕಾರಿ ಅಧಿಕಾರಿಗಳಿಗೆ ವಂಚಿಸಿದ್ದಾನೆ. ಈತನ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣದ ಹೆಚ್ಚಿನ ತನಿಖೆಗೆ ಸಿಸಿಬಿಗೆ ವರ್ಗಾಯಿಸಲಾಗಿತ್ತು.
ಲೋಕಾಯುಕ್ತ ಇನ್ಸ್ ಪೆಕ್ಟರ್ ಚಂದ್ರಶೇಖರ್ ಎಂದು ತನ್ನನ್ನು ಪರಿಚಯಿಸಿಕೊಂಡು ರೆಡ್ಡಿ ಸರ್ಕಾರಿ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡುತ್ತಿದ್ದ ಮತ್ತು ಹಣ ವಸೂಲಿ ಮಾಡುತ್ತಿದ್ದ. ಪ್ರಕರಣ ದಾಖಲಾಗಿದೆ ಎಂದು ಹೇಳಿ ಮುಚ್ಚಿ ಹಾಕಲು ಹಣ ನೀಡುವಂತೆ ಬ್ಲಾಕ್ಮೇಲ್ ಮಾಡುತ್ತಿದ್ದ. ಹಣ ಸಿಕ್ಕರೆ ಲೋಕಾಯುಕ್ತದ ತಾಂತ್ರಿಕ ವಿಭಾಗ ಯಾವುದೇ ವಿಚಾರಣೆ ನಡೆಸದೆ ಬಿ ರಿಪೋರ್ಟ್ ಸಲ್ಲಿಸಲಿದೆ ಎಂದು ಭರವಸೆ ನೀಡುತ್ತಿದ್ದ. ಇದೇ ರೀತಿ ಕಿರುಕುಳಕ್ಕೆ ಒಳಗಾದ ಸರ್ಕಾರಿ ಅಧಿಕಾರಿ ರಾಮದಾಸ್ ಎಂಬವರು ದೂರು ದಾಖಲಿಸಿದ್ದರು.
ಕೆಲವು ಕಡೆ ಲೋಕಾಯುಕ್ತದಲ್ಲಿ ಎಡಿಜಿಪಿ ಶ್ರೇಣಿಯ ಅಧಿಕಾರಿ ಎಂದು ತನ್ನನ್ನು ಹೇಳಿಕೊಂಡಿದ್ದ. ಅಲ್ಲದೆ, ತನ್ನ ಹೆಸರನ್ನು ಕೇಶವ ರಾವ್ ಎಂದಿ ಮಾಡಿಕೊಂಡಿದ್ದ. ಈತನ ವಿರುದ್ಧ ಎಲೆಕ್ಟ್ರಾನಿಕ್ ಸಿಟಿ, ಬೇಗೂರು, ಹೆಬ್ಬಗೋಡಿ, ಅತ್ತಿಬೆಲೆ, ಜಿಗಣಿ ಸೇರಿದಂತೆ ಹಲವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣಗಳಿವೆ.
Inspired by actor Suriya’s film, a man from Karnataka’s Chikkaballapura district, posing as a Lokayukta officer, allegedly extorted around Rs 3 crores from more than 60 government officials in Karnataka, Telangana, and Andhra Pradesh, Indian Express reported. On Tuesday, January 2nd, the Central Crime Branch arrested the accused, identified as Srinath Reddy (some reports say Srinivas Reddy), an Andhra Pradesh native. The accused has already had 36 cases filed against him in three states.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
11-06-26 11:40 am
HK News Staffer
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am