ಬ್ರೇಕಿಂಗ್ ನ್ಯೂಸ್
20-11-20 10:30 am Mangalore Correspondent ಕ್ರೈಂ
ಮಂಗಳೂರು, ನ.20 : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಮಹಿಳೆಯರ ಕುತ್ತಿಗೆಯಿಂದ 2.34 ಲಕ್ಷ ರೂ. ಮೌಲ್ಯದ ಚಿನ್ನದ ಸರ ಎಗರಿಸಿದ ಘಟನೆ ನಡೆದಿದ್ದು, ಕಾವೂರು ಹಾಗು ಕದ್ರಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.
ರಶ್ಮಿ ಎಂಬವರು ಕೆಲಸ ಮುಗಿಸಿ ಪಂಜಿಮೊಗರಿನ ಉರುಂದಾಡಿಗುಡ್ಡೆಯಲ್ಲಿರುವ ಮನೆ ಕಡೆಗೆ ಹೋಗುತ್ತಿದ್ದಾಗ ರಾಘವೇಂದ್ರ ಮಠದ ಹತ್ತಿರ ಅಪರಿಚಿತನೊಬ್ಬ ಬೈಕಿನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದಾನೆ ಎನ್ನಲಾಗಿದೆ.
ಭಯಗೊಂಡು ರಶ್ಮಿ ತನ್ನ ತಾಯಿಗೆ ಕರೆ ಮಾಡಿದ್ದು, ಅಷ್ಟರಲ್ಲಿ ಆ ವ್ಯಕ್ತಿಯು ಹಿಂದುಗಡೆಯಿಂದ ಬಂದು ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಎಳೆದೊಯ್ದಿದ್ದಾನೆ. ಚಿನ್ನದ ಕರಿಮಣಿ ಸರವು ಸುಮಾರು 22 ಗ್ರಾಂ ಇದ್ದು ಅದರ ಅಂದಾಜು ಮೌಲ್ಯ 80,000 ರೂ. ಆಗಿರಬಹುದು. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಗೀತಾ ಎಂಬವರು ಕದ್ರಿಯಲ್ಲಿರುವ ಸಂಬಂಧಿಕರ ಮನೆಯಿಂದ ಬುಧವಾರ ಸಂಜೆ ತನ್ನ ಮನೆಗೆ ವ್ಯಾಸನಗರದಲ್ಲಿರುವ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಬೈಕ್ ನಿಲ್ಲಿಸಿ ರಿಪೇರಿ ಮಾಡುವಂತೆ ನಟಿಸುತ್ತಿದ್ದ. ಆತನನ್ನು ದಾಟಿ ಮುಂದೆ ಹೋದ ನಂತರ ಆತನು ಹಿಂದಿನಿಂದ ಬಂದು ಕುತ್ತಿಗೆಯಲ್ಲಿದ್ದ ಸುಮಾರು 54,000 ರೂ. ಮೌಲ್ಯದ 13 ಗ್ರಾಂ ತೂಕದ ಚಿನ್ನದ ಕರಿಮಣಿ ಸರ ಮತ್ತು ಸುಮಾರು 1 ಲಕ್ಷ ರೂ. ಮೌಲ್ಯದ 26 ಗ್ರಾಂ ತೂಕದ ಸರ ಸಹಿತ 1,54,000 ರೂ. ಮೌಲ್ಯದ ಚಿನ್ನಾಭರಣಗಳನ್ನು ಕಿತ್ತುಕೊಂಡು ಹೋಗಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two women have reported chain snatching case of about 2.34 lakhs Kadri police station in Mangalore.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am