ಬ್ರೇಕಿಂಗ್ ನ್ಯೂಸ್
08-01-24 07:44 pm Mangalore Correspondent ಕ್ರೈಂ
ಮಂಗಳೂರು, ಜ.8: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ಆಯುಕ್ತರ ಮೇಲೆ ಲೈಂಗಿಕ ಕಿರುಕುಳ ಆರೋಪ ಹೊರಿಸಿದ ಪ್ರಕರಣದಲ್ಲಿ ಸ್ವತಃ ಮೂಡಾ ಕಮಿಷನರ್ ಮನ್ಸೂರ್ ಆಲಿ ಉರ್ವಾ ಠಾಣೆಗೆ ಹಾಜರಾಗಿ ಇನ್ಸ್ ಪೆಕ್ಟರ್ ಭಾರತಿ ಮುಂದೆ ತನ್ನ ಹೇಳಿಕೆಯನ್ನು ನೀಡಿದ್ದಾರೆ.
ಪೊಲೀಸ್ ಠಾಣೆಗೆ ಹಾಜರಾದ ಬಳಿಕ ಮಾಧ್ಯಮಕ್ಕೆ ಹೇಳಿಕೆ ನೀಡಿದ ಮನ್ಸೂರ್ ಆಲಿ, ಡಿ.27ರಂದು ಮೂಡಾ ಕಚೇರಿಯಲ್ಲಿ ನಡೆದ ಸಾಮಾನ್ಯ ಸಭೆಯ ಕುರಿತ ನಡಾವಳಿ ಬಗ್ಗೆ ಗುತ್ತಿಗೆ ಆಧಾರದಲ್ಲಿ ಉದ್ಯೋಗ ನಡೆಸುತ್ತಿರುವ ಮಹಿಳೆಗೆ ಸೂಚಿಸಿದ್ದೆ. ನೂರು ಪುಟಗಳಿಗೂ ಹೆಚ್ಚು ಇದ್ದ ವರದಿಯನ್ನು ತಪ್ಪು ತಪ್ಪಾಗಿ ಮಾಡಿಕೊಟ್ಟಿದ್ದರು. ತಪ್ಪಾಗಿ ವರದಿ ಕೊಟ್ಟ ಬಗ್ಗೆ ಅಷ್ಟು ಉದ್ದ ವರದಿ ಬರೆಯಲು ತನ್ನಿಂದ ಸಾಧ್ಯವಿಲ್ಲ ಎಂದಿದ್ದರು. ಸರಿಯಾಗಿ ಕೆಲಸ ಮಾಡೋದಿದ್ದರೆ ಇಲ್ಲಿರಿ, ಇಲ್ಲಾಂದ್ರೆ ಬೇರೆಯವರು ಕೆಲಸ ಮಾಡುತ್ತಾರೆ ಎಂದು ಹೇಳಿದ್ದೆ.
ಮರುದಿನ ಅವರ ಬದಲು ಬೇರೆ ಸಿಬಂದಿಯನ್ನು ಕೆಲಸಕ್ಕೆ ನೇಮಿಸುವಂತೆ ಗುತ್ತಿಗೆ ಏಜನ್ಸಿಗೆ ತಿಳಿಸಿದ್ದೆ. ಆದರೆ ಅದೇ ನೆಪದಲ್ಲಿ ತನ್ನನ್ನು ಕೆಲಸದಿಂದ ತೆಗೆದು ಹಾಕುತ್ತಾರೆಂಬ ಭಯ ಮತ್ತು ನನ್ನ ಮೇಲಿನ ಹಗೆತನದಲ್ಲಿ ಈ ರೀತಿ ದೂರು ಕೊಟ್ಟಿದ್ದಾರೆ. ತನಿಖಾಧಿಕಾರಿ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದೇನೆ. ಆ ಮಹಿಳೆ ಕೂಡ ಈ ರೀತಿ ಮಾಡಬಾರದಿತ್ತು, ತನ್ನಿಂದ ತಪ್ಪಾಗಿದೆ ಎಂದಿದ್ದಾರೆ. ಈಗ ಕಚೇರಿಗೆ ಬರುತ್ತಿದ್ದಾರೆ. ತನಿಖಾಧಿಕಾರಿ ಸೂಕ್ತ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.
ಸುಳ್ಳು ದೂರು ನೀಡಿರುವ ಬಗ್ಗೆ ಮಹಿಳೆ ವಿರುದ್ಧ ಕ್ರಮ ಕೈಗೊಳ್ತೀರಾ ಎಂದು ಕೇಳಿದ ಬಗ್ಗೆ ಈ ವಿಷಯವನ್ನು ಮೇಲಧಿಕಾರಿಗಳಿಗೆ ತಿಳಿಸಿದ್ದೇನೆ. ಏನು ಕ್ರಮ ಆಗಬೇಕೋ ಅವರು ಮಾಡಲಿದ್ದಾರೆ. ವಿಚಾರಣೆ ಹಂತದಲ್ಲಿರುವಾಗ ಈ ಬಗ್ಗೆ ಹೆಚ್ಚೇನು ಹೇಳಲು ಹೋಗುವುದಿಲ್ಲ ಎಂದಿದ್ದಾರೆ. ಮಹಿಳೆ ತನ್ನನ್ನು ಸಂಜೆ ಹೊತ್ತು ಚೇಂಬರಿಗೆ ಕರೆದು ಮೈ ಕೈ ಮುಟ್ಟಿ ಕಿರುಕುಳ ನೀಡುತ್ತಿದ್ದಾರೆ, ರಾತ್ರಿ ವರೆಗೂ ಕೆಲಸಕ್ಕಾಗಿ ನಿಲ್ಲಿಸುತ್ತಾರೆ, ಆಮೂಲಕ ಲೈಂಗಿಕ ಮತ್ತು ಮಾನಸಿಕ ಕಿರುಕುಳ ಆಗಿದೆ ಎಂದು ದೂರಿನಲ್ಲಿ ತಿಳಿಸಿದ್ದರು.
Mangalore Muda Commissioner Mansoor Ali alleged of sexual harrasment, says its revenge plan. Work pressure revenge has been turned into sexual harrasment which is wrong said Mansoor Ali speaking to media.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm