ಬ್ರೇಕಿಂಗ್ ನ್ಯೂಸ್
08-01-24 07:44 pm Mangalore Correspondent ಕ್ರೈಂ
ಮಂಗಳೂರು, ಜ.8: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ಆಯುಕ್ತರ ಮೇಲೆ ಲೈಂಗಿಕ ಕಿರುಕುಳ ಆರೋಪ ಹೊರಿಸಿದ ಪ್ರಕರಣದಲ್ಲಿ ಸ್ವತಃ ಮೂಡಾ ಕಮಿಷನರ್ ಮನ್ಸೂರ್ ಆಲಿ ಉರ್ವಾ ಠಾಣೆಗೆ ಹಾಜರಾಗಿ ಇನ್ಸ್ ಪೆಕ್ಟರ್ ಭಾರತಿ ಮುಂದೆ ತನ್ನ ಹೇಳಿಕೆಯನ್ನು ನೀಡಿದ್ದಾರೆ.
ಪೊಲೀಸ್ ಠಾಣೆಗೆ ಹಾಜರಾದ ಬಳಿಕ ಮಾಧ್ಯಮಕ್ಕೆ ಹೇಳಿಕೆ ನೀಡಿದ ಮನ್ಸೂರ್ ಆಲಿ, ಡಿ.27ರಂದು ಮೂಡಾ ಕಚೇರಿಯಲ್ಲಿ ನಡೆದ ಸಾಮಾನ್ಯ ಸಭೆಯ ಕುರಿತ ನಡಾವಳಿ ಬಗ್ಗೆ ಗುತ್ತಿಗೆ ಆಧಾರದಲ್ಲಿ ಉದ್ಯೋಗ ನಡೆಸುತ್ತಿರುವ ಮಹಿಳೆಗೆ ಸೂಚಿಸಿದ್ದೆ. ನೂರು ಪುಟಗಳಿಗೂ ಹೆಚ್ಚು ಇದ್ದ ವರದಿಯನ್ನು ತಪ್ಪು ತಪ್ಪಾಗಿ ಮಾಡಿಕೊಟ್ಟಿದ್ದರು. ತಪ್ಪಾಗಿ ವರದಿ ಕೊಟ್ಟ ಬಗ್ಗೆ ಅಷ್ಟು ಉದ್ದ ವರದಿ ಬರೆಯಲು ತನ್ನಿಂದ ಸಾಧ್ಯವಿಲ್ಲ ಎಂದಿದ್ದರು. ಸರಿಯಾಗಿ ಕೆಲಸ ಮಾಡೋದಿದ್ದರೆ ಇಲ್ಲಿರಿ, ಇಲ್ಲಾಂದ್ರೆ ಬೇರೆಯವರು ಕೆಲಸ ಮಾಡುತ್ತಾರೆ ಎಂದು ಹೇಳಿದ್ದೆ.
ಮರುದಿನ ಅವರ ಬದಲು ಬೇರೆ ಸಿಬಂದಿಯನ್ನು ಕೆಲಸಕ್ಕೆ ನೇಮಿಸುವಂತೆ ಗುತ್ತಿಗೆ ಏಜನ್ಸಿಗೆ ತಿಳಿಸಿದ್ದೆ. ಆದರೆ ಅದೇ ನೆಪದಲ್ಲಿ ತನ್ನನ್ನು ಕೆಲಸದಿಂದ ತೆಗೆದು ಹಾಕುತ್ತಾರೆಂಬ ಭಯ ಮತ್ತು ನನ್ನ ಮೇಲಿನ ಹಗೆತನದಲ್ಲಿ ಈ ರೀತಿ ದೂರು ಕೊಟ್ಟಿದ್ದಾರೆ. ತನಿಖಾಧಿಕಾರಿ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದೇನೆ. ಆ ಮಹಿಳೆ ಕೂಡ ಈ ರೀತಿ ಮಾಡಬಾರದಿತ್ತು, ತನ್ನಿಂದ ತಪ್ಪಾಗಿದೆ ಎಂದಿದ್ದಾರೆ. ಈಗ ಕಚೇರಿಗೆ ಬರುತ್ತಿದ್ದಾರೆ. ತನಿಖಾಧಿಕಾರಿ ಸೂಕ್ತ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.
ಸುಳ್ಳು ದೂರು ನೀಡಿರುವ ಬಗ್ಗೆ ಮಹಿಳೆ ವಿರುದ್ಧ ಕ್ರಮ ಕೈಗೊಳ್ತೀರಾ ಎಂದು ಕೇಳಿದ ಬಗ್ಗೆ ಈ ವಿಷಯವನ್ನು ಮೇಲಧಿಕಾರಿಗಳಿಗೆ ತಿಳಿಸಿದ್ದೇನೆ. ಏನು ಕ್ರಮ ಆಗಬೇಕೋ ಅವರು ಮಾಡಲಿದ್ದಾರೆ. ವಿಚಾರಣೆ ಹಂತದಲ್ಲಿರುವಾಗ ಈ ಬಗ್ಗೆ ಹೆಚ್ಚೇನು ಹೇಳಲು ಹೋಗುವುದಿಲ್ಲ ಎಂದಿದ್ದಾರೆ. ಮಹಿಳೆ ತನ್ನನ್ನು ಸಂಜೆ ಹೊತ್ತು ಚೇಂಬರಿಗೆ ಕರೆದು ಮೈ ಕೈ ಮುಟ್ಟಿ ಕಿರುಕುಳ ನೀಡುತ್ತಿದ್ದಾರೆ, ರಾತ್ರಿ ವರೆಗೂ ಕೆಲಸಕ್ಕಾಗಿ ನಿಲ್ಲಿಸುತ್ತಾರೆ, ಆಮೂಲಕ ಲೈಂಗಿಕ ಮತ್ತು ಮಾನಸಿಕ ಕಿರುಕುಳ ಆಗಿದೆ ಎಂದು ದೂರಿನಲ್ಲಿ ತಿಳಿಸಿದ್ದರು.
Mangalore Muda Commissioner Mansoor Ali alleged of sexual harrasment, says its revenge plan. Work pressure revenge has been turned into sexual harrasment which is wrong said Mansoor Ali speaking to media.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm