ಬ್ರೇಕಿಂಗ್ ನ್ಯೂಸ್
09-01-24 05:55 pm Mangalore Correspondent ಕ್ರೈಂ
ಮಂಗಳೂರು, ಜ.9: ನಟೋರಿಯಸ್ ರೌಡಿ ಆಕಾಶಭವನ್ ಶರಣ್ ಮೇಲೆ ಪೊಲೀಸರು ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದಾರೆ. ಮಂಗಳೂರಿನ ಜಪ್ಪು ಕುದ್ಪಾಡಿಯಲ್ಲಿ ಸಾಗುತ್ತಿದ್ದಾಗ ಪೊಲೀಸರು ಬಂಧಿಸಲು ಯತ್ನಿಸಿದ್ದು ಮರು ದಾಳಿಗೆ ಯತ್ನಿಸಿದ್ದಾನೆ ಎನ್ನಲಾಗುತ್ತಿದ್ದು, ಈ ವೇಳೆ ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದಾರೆ.
ಶರಣ್ ನನ್ನು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜ.5ರಂದು ರಾತ್ರಿ ಮಂಗಳೂರಿನ ಸಿಸಿಬಿ ಪೊಲೀಸರು ಕಾವೂರಿನಲ್ಲಿ ರೌಡಿಯನ್ನು ಹಿಡಿಯಲು ಯತ್ನಿಸಿದಾಗ ಕಾರನ್ನು ಹಾಯಿಸಿ ಕೊಲೆಗೆ ಯತ್ನಿಸಿದ ಬಗ್ಗೆ ಕಾವೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆನಂತರ, ಆಕಾಶಭವನ್ ಶರಣ್ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದರು. ಮಂಗಳವಾರ ಮಧ್ಯಾಹ್ನ ಆರೋಪಿ ಜಪ್ಪು ಕುದ್ಪಾಡಿಯಲ್ಲಿದ್ದಾನೆಂದು ವಶಕ್ಕೆ ಪಡೆಯಲು ಮುಂದಾಗಿದ್ದರು ಎನ್ನುವ ಮಾಹಿತಿಗಳಿವೆ.







ಆಕಾಶಭವನ್ ಶರಣ್ ಮೇಲೆ ಮಂಗಳೂರು, ಉಡುಪಿಯಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳಿದ್ದು, ನಟೋರಿಯಸ್ ರೌಡಿಯಾಗಿದ್ದಾನೆ. ಫೈನಾನ್ಸರ್ ಸುರೇಂದ್ರ ಬಂಟ್ವಾಳ್ ಪ್ರಕರಣದಲ್ಲಿ ಜೈಲಿನಲ್ಲಿದ್ದುಕೊಂಡೇ ಸುಪಾರಿ ಪಡೆದು ತನ್ನ ಸಹಚರರ ಮೂಲಕ ಕೊಲೆ ನಡೆಸಿದ್ದ. ಸುಳ್ಯದಲ್ಲಿ ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣದಲ್ಲಿಯೂ ಸುಪಾರಿ ಪಡೆದು ತನ್ನ ಸಹಚರರ ಮೂಲಕ ಮಾಡಿಸಿದ್ದ ಎನ್ನುವುದು ತನಿಖೆಯಲ್ಲಿ ಸಾಬೀತಾಗಿತ್ತು.
Mangalore police shoot at Rowdy Akash Bhavan Sharan, arrested. Recently Sharan had tried to attack CCB Police while trying to arrest him at Maryhill in Kavoor. Sharan faces a staggering 21 cases in Mangaluru and Udupi, including charges of murder, attempted murder, rape of a minor girl, and extortion
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm