ಬ್ರೇಕಿಂಗ್ ನ್ಯೂಸ್
12-01-24 01:51 pm Mangalore Correspondent ಕ್ರೈಂ
ಪುತ್ತೂರು, ಜ.12: ತಾನು ಪ್ರೀತಿಸಿದ ಯುವತಿ ಬೇರೆ ಮದುವೆಯಾದ ಸಿಟ್ಟಿನಲ್ಲಿ ವರನಿಗೆ ಸೇರಿದ ಬೈಕನ್ನು ರಾತ್ರಿ ವೇಳೆ ಸುಟ್ಟು ಹಾಕಿದ ಕೃತ್ಯ ಉಪ್ಪಿನಂಗಡಿ ಠಾಣೆ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾದ ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ಪ್ರಕರಣ ಸಂಬಂಧಿಸಿ ಪೊಲೀಸರು ತನಿಖೆ ನಡೆಸಿದಾಗ, ಈ ವಿಚಾರ ಬಯಲಾಗಿದೆ. ಉಪ್ಪಿನಂಗಡಿ ಗ್ರಾಮದ ನಿನ್ನಿಕಲ್ಲು ಪಾದಾಳದ ಸಂದೀಪ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಾನು ಪ್ರೀತಿಸಿದ ಯುವತಿ ಬೇರೊಬ್ಬನ ಜೊತೆ ಮದುವೆ ಆಗಿದ್ದಕ್ಕೆ ಈ ರೀತಿ ಮಾಡಿದ್ದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.
ಯುವಕ ಅದೇ ಗ್ರಾಮದ ಯುವತಿಯೊಬ್ಬಳನ್ನು ಏಕಮುಖವಾಗಿ ಪ್ರೀತಿಸಿದ್ದ ಎನ್ನಲಾಗಿದೆ. ಯುವತಿಗೆ ಜನವರಿ 3ರಂದು ಬೇರೊಬ್ಬ ಯುವಕನೊಂದಿಗೆ ವಿವಾಹವಾಗಿದ್ದು ಆಕೆಯನ್ನು ಮದುವೆಯಾದ ವ್ಯಕ್ತಿಯ ಮೇಲೆ ಆರೋಪಿಗೆ ಸಿಟ್ಟಿತ್ತು. ಯುವತಿ ಜನವರಿ 6ರಂದು ಗಂಡನ ಜೊತೆ ತವರಿಗೆ ಬಂದಿದ್ದಳು. ರಾತ್ರಿ ವೇಳೆ ಮನೆಯ ಸಮೀಪ ಇರಿಸಿದ್ದ ಬೈಕಿಗೆ ಬೆಂಕಿ ಹಚ್ಚಲಾಗಿತ್ತು. ಬೈಕ್ ಹೊತ್ತಿ ಉರಿಯುತ್ತಿದ್ದುದನ್ನು ಸಂಬಂಧಿಕರು ಗಮನಿಸಿದ್ದರು. ಬೈಕನ್ನು ಮನೆಯಿಂದ 100 ಮೀ ದೂರಕ್ಕೆ ಒಯ್ದು ಬೆಂಕಿ ಹಚ್ಚಲಾಗಿತ್ತು. ಈ ಬಗ್ಗೆ ವರ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು.
ತಾನು ಪ್ರೀತಿಸಿದ ಯುವತಿಯನ್ನು ಮದುವೆಯಾದ ವ್ಯಕ್ತಿಯ ಮೇಲಿನ ದ್ವೇಷದಿಂದ ಬೈಕ್ ಸುಟ್ಟುಹಾಕಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking incident, a woman in Puttur district burnt the bike belonging to the groom at night in uppinangady police limits. The matter came to light when the police investigated the case of setting fire to a two-wheeler registered at Uppinangady police station. The accused has been identified as Sandeep, a resident of Ninnikallu Padala in Uppinangady village.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm