ಬ್ರೇಕಿಂಗ್ ನ್ಯೂಸ್
12-01-24 01:51 pm Mangalore Correspondent ಕ್ರೈಂ
ಪುತ್ತೂರು, ಜ.12: ತಾನು ಪ್ರೀತಿಸಿದ ಯುವತಿ ಬೇರೆ ಮದುವೆಯಾದ ಸಿಟ್ಟಿನಲ್ಲಿ ವರನಿಗೆ ಸೇರಿದ ಬೈಕನ್ನು ರಾತ್ರಿ ವೇಳೆ ಸುಟ್ಟು ಹಾಕಿದ ಕೃತ್ಯ ಉಪ್ಪಿನಂಗಡಿ ಠಾಣೆ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾದ ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ಪ್ರಕರಣ ಸಂಬಂಧಿಸಿ ಪೊಲೀಸರು ತನಿಖೆ ನಡೆಸಿದಾಗ, ಈ ವಿಚಾರ ಬಯಲಾಗಿದೆ. ಉಪ್ಪಿನಂಗಡಿ ಗ್ರಾಮದ ನಿನ್ನಿಕಲ್ಲು ಪಾದಾಳದ ಸಂದೀಪ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಾನು ಪ್ರೀತಿಸಿದ ಯುವತಿ ಬೇರೊಬ್ಬನ ಜೊತೆ ಮದುವೆ ಆಗಿದ್ದಕ್ಕೆ ಈ ರೀತಿ ಮಾಡಿದ್ದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.
ಯುವಕ ಅದೇ ಗ್ರಾಮದ ಯುವತಿಯೊಬ್ಬಳನ್ನು ಏಕಮುಖವಾಗಿ ಪ್ರೀತಿಸಿದ್ದ ಎನ್ನಲಾಗಿದೆ. ಯುವತಿಗೆ ಜನವರಿ 3ರಂದು ಬೇರೊಬ್ಬ ಯುವಕನೊಂದಿಗೆ ವಿವಾಹವಾಗಿದ್ದು ಆಕೆಯನ್ನು ಮದುವೆಯಾದ ವ್ಯಕ್ತಿಯ ಮೇಲೆ ಆರೋಪಿಗೆ ಸಿಟ್ಟಿತ್ತು. ಯುವತಿ ಜನವರಿ 6ರಂದು ಗಂಡನ ಜೊತೆ ತವರಿಗೆ ಬಂದಿದ್ದಳು. ರಾತ್ರಿ ವೇಳೆ ಮನೆಯ ಸಮೀಪ ಇರಿಸಿದ್ದ ಬೈಕಿಗೆ ಬೆಂಕಿ ಹಚ್ಚಲಾಗಿತ್ತು. ಬೈಕ್ ಹೊತ್ತಿ ಉರಿಯುತ್ತಿದ್ದುದನ್ನು ಸಂಬಂಧಿಕರು ಗಮನಿಸಿದ್ದರು. ಬೈಕನ್ನು ಮನೆಯಿಂದ 100 ಮೀ ದೂರಕ್ಕೆ ಒಯ್ದು ಬೆಂಕಿ ಹಚ್ಚಲಾಗಿತ್ತು. ಈ ಬಗ್ಗೆ ವರ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು.
ತಾನು ಪ್ರೀತಿಸಿದ ಯುವತಿಯನ್ನು ಮದುವೆಯಾದ ವ್ಯಕ್ತಿಯ ಮೇಲಿನ ದ್ವೇಷದಿಂದ ಬೈಕ್ ಸುಟ್ಟುಹಾಕಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking incident, a woman in Puttur district burnt the bike belonging to the groom at night in uppinangady police limits. The matter came to light when the police investigated the case of setting fire to a two-wheeler registered at Uppinangady police station. The accused has been identified as Sandeep, a resident of Ninnikallu Padala in Uppinangady village.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 07:13 pm
HK News Desk
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
19-06-25 07:48 pm
Mangalore Correspondent
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm