ಬ್ರೇಕಿಂಗ್ ನ್ಯೂಸ್
12-01-24 04:26 pm HK News Desk ಕ್ರೈಂ
ಬೆಂಗಳೂರು, ಜ 12: ಉದ್ಯಮಿಯನ್ನು ಅಪಹರಿಸಿ, ಬೆದರಿಸಿ ಹಣ ಸುಲಿಗೆ ಮಾಡಿದ್ದ ಆರೋಪದಡಿ ಯುಪಿಎಸ್ಸಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಯುವಕ ಸೇರಿದಂತೆ ಇಬ್ಬರು ಆರೋಪಿಗಳನ್ನು ರಾಜಾಜಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸಚಿನ್ ಹಾಗೂ ಗೌರಿಶಂಕರ್ ಬಂಧಿತರು.
ಜನವರಿ 5ರಂದು ರಾಜಾಜಿನಗರದ ಡಾ.ರಾಜ್ಕುಮಾರ್ ರಸ್ತೆಯಿಂದ ಉದ್ಯಮಿ ಚೇತನ್ ಶಾ ಎಂಬವರನ್ನು ಅಪಹರಿಸಿದ್ದ ಆರೋಪಿಗಳು, 7 ಲಕ್ಷ ರೂ ವಸೂಲಿ ಮಾಡಿದ್ದರು. ಬಳಿಕ ತಾನೇ ಹಣ ಕೊಡುತ್ತಿರುವುದಾಗಿ ಚೇತನ್ ಶಾರಿಂದ ಸ್ವಯಂ ಹೇಳಿಕೆ ಕೊಡಿಸಿ, ವಿಡಿಯೋ ಚಿತ್ರೀಕರಣ ಮಾಡಿಕೊಂಡು ಬಿಟ್ಟು ಪರಾರಿಯಾಗಿದ್ದರು.
ಚೇತನ್ ಶಾ ಅವರು 2023ನೇ ಸಾಲಿನಲ್ಲಿ ತಮ್ಮ ಮಗಳಿಗೆ ಸೆಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಬಿಬಿಎ ಸೀಟಿಗಾಗಿ ಪ್ರಯತ್ನಿಸುತ್ತಿದ್ದರು. ಆ ಸಂದರ್ಭದಲ್ಲಿ ಚೇತನ್ ಶಾ ಅವರ ಮಗಳ ಸ್ನೇಹಿತನೊಬ್ಬನ ಮೂಲಕ ಆರೋಪಿ ಸಚಿನ್ ಪರಿಚಯವಾಗಿತ್ತು. ಯುಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಸಚಿನ್, ತನಗೆ ಸೆಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಪರಿಚಯದವರಿದ್ದಾರೆ, ತಾನೇ ಸೀಟು ಕೊಡಿಸುತ್ತೇನೆ ಎಂದಿದ್ದನಂತೆ.
ಇದಕ್ಕೆ ಪ್ರತಿಯಾಗಿ 4 ಲಕ್ಷ ರೂ ಹಣ ಕೇಳಿದ್ದಾನೆ. ಆದರೆ ಸೀಟು ಕೊಡಿಸದೇ ವಿಳಂಬ ಮಾಡಿದ್ದರಿಂದ ಬೇರೊಬ್ಬರ ಸಹಾಯದ ಮೂಲಕ ಚೇತನ್ ಶಾ ತಮ್ಮ ಮಗಳಿಗೆ ಸೀಟು ಪಡೆದುಕೊಂಡಿದ್ದರು. ಕಳೆದ ಮೇ ತಿಂಗಳಿನಲ್ಲಿ ಚೇತನ್ ಶಾರನ್ನು ಭೇಟಿಯಾಗಿದ್ದ ಸಚಿನ್, ನಿಮ್ಮ ಮಗಳಿಗೆ ಸೀಟು ಕೊಡಿಸಿದ್ದು ನಾನೇ, ನನಗೆ 4 ಲಕ್ಷ ರೂ ಕೊಡಬೇಕು ಎಂದು ಒತ್ತಾಯಿಸಿದ್ದಾನೆ. ಆದರೆ ಹಣ ಕೊಡಲು ಚೇತನ್ ಶಾ ಒಪ್ಪಿರಲಿಲ್ಲ. ಆ ಸಂದರ್ಭದಲ್ಲಿ ಬೆದರಿಕೆ ಹಾಕಿದ್ದ ಸಚಿನ್, ನಂತರದಲ್ಲೂ ಸಹ ಬೇರೆ ಬೇರೆ ವ್ಯಕ್ತಿಗಳಿಂದ ಬೆದರಿಕೆ ಕರೆ ಮಾಡಿಸಿದ್ದಾನೆ.
ಜನವರಿ 5ರಂದು ಪೀಣ್ಯದಲ್ಲಿರುವ ತಮ್ಮ ಇಂಡಸ್ಟ್ರಿಯಿಂದ ಮನೆಗೆ ತೆರಳುತ್ತಿದ್ದಾಗ ರಾಜಾಜಿನಗರ ರಸ್ತೆಯ ಸಿಗ್ನಲ್ ಬಳಿ ಆಟೋದಲ್ಲಿ ಬಂದು ಚೇತನ್ ಶಾರ ಕಾರು ಅಡ್ಡಗಟ್ಟಿದ್ದ ಸಚಿನ್ ಮತ್ತು ಆತನ ಸ್ನೇಹಿತರು, ಅವರದ್ದೇ ಕಾರಿನಲ್ಲಿ ಅಪಹರಿಸಿ ರಸ್ತೆಯಲ್ಲೆಲ್ಲ ಸುತ್ತಾಡಿಸಿದ್ದರು. ಸೀಟು ಕೊಡಿಸಿದ್ದಕ್ಕಾಗಿ 4 ಲಕ್ಷ ರೂ, ಬಡ್ಡಿ 2 ಲಕ್ಷ ರೂ. ಹಾಗೂ ತನ್ನ ಹುಡುಗರಿಗೆ 1 ಲಕ್ಷ ರೂ., ಒಟ್ಟು 7 ಲಕ್ಷ ರೂ. ಕೊಡುವಂತೆ ಸಚಿನ್ ಬೆದರಿಕೆ ಹಾಕಿದ್ದ. ಈ ವೇಳೆ ಚೇತನ್ ಮನೆಗೆ ಓರ್ವ ಆರೋಪಿಯನ್ನು ಕಳುಹಿಸಿ, ಆತನ ಹೆಂಡತಿಯ ಬಳಿಯಿಂದ 7 ಲಕ್ಷ ರೂ. ಹಣ ಪಡೆದಿದ್ದ ಆರೋಪಿಗಳು, ಮಧ್ಯಾಹ್ನ 2 ಗಂಟೆ ಸುಮಾರಿಗೆ ಶಾರನ್ನು ಬಿಟ್ಟು ಕಳುಹಿಸಿದ್ದರು. ಇದಾದ ಬಳಿಕ ಚೇತನ್ ಶಾ ರಾಜಾಜಿನಗರ ಠಾಣೆಗೆ ದೂರು ನೀಡಿದ್ದರು.
Rajajinagar police have arrested two persons, including a youth, who were preparing for the UPSC exams, for allegedly abducting, threatening and extorting money from a businessman. Sachin and Gaurishankar have been arrested.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm