ಬ್ರೇಕಿಂಗ್ ನ್ಯೂಸ್
18-01-24 04:32 pm Mangalore Correspondent ಕ್ರೈಂ
ಉಳ್ಳಾಲ, ಜ.18: ಉಳ್ಳಾಲ ಠಾಣೆ ವ್ಯಾಪ್ತಿಯ ಕೋಟೆಪುರದ ಬೃಹತ್ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗೆ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯ ನಾಯಕ್ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿದ್ದು ಆರೋಪಿ ಸಮೇತ ಅಪಾರ ಪ್ರಮಾಣದ ಗ್ಯಾಸ್ ಸಿಲಿಂಡರ್ ಗಳನ್ನ ವಶಪಡಿಸಿದ್ದಲ್ಲದೆ, ಅಕ್ರಮವಾಗಿ ಮಾರಾಟ ನಡೆಸುತ್ತಿದ್ದ ಲೀಟರ್ ಗಟ್ಟಲೆ ಪೆಟ್ರೋಲನ್ನೂ ವಶಪಡಿಸಿಕೊಂಡಿದೆ.
ಉಳ್ಳಾಲ ಕೋಟೆಪುರದ ಬರಾಖ ಫ್ಯಾಕ್ಟರಿ ಮುಂಭಾಗದ ರಸ್ತೆ ಬದಿಯ ಮನೆಯೊಂದರಲ್ಲಿ ನಡೆಯುತ್ತಿದ್ದ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗೆ ಎಸಿಪಿ ಧನ್ಯ ನಾಯಕ್ ಮತ್ತು ತಂಡ ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ದಾಸ್ತಾನು ಇರಿಸಿದ್ದ ಗ್ಯಾಸ್ ಸಿಲಿಂಡರ್ ಮತ್ತು ಸುಮಾರು 280 ಲೀಟರ್ ಪೆಟ್ರೋಲನ್ನ ಜಪ್ತಿಗೊಳಿಸಿದ್ದು ಆರೋಪಿ ಅಬ್ದುಲ್ ಅಲ್ತಾಫ್ (49) ಎಂಬಾತನನ್ನ ಬಂಧಿಸಿದೆ.
ಕೋಟೆಪುರದ ರಸ್ತೆ ಬದಿಯ ಮನೆಯಲ್ಲೇ ತೋರ್ಪಡಿಕೆಗೆ ಗುಜರಿ ಅಂಗಡಿ ನಡೆಸುತ್ತಿದ್ದ ಆರೋಪಿ ಅಲ್ತಾಫ್ ಮನೆಯೊಳಗಿನ ವಿಶಾಲ ಪ್ರದೇಶದಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಗಳನ್ನ ದಾಸ್ತಾನು ಇರಿಸಿ ರೀಫಿಲ್ಲಿಂಗ್ ಮಾಡುತ್ತಿದ್ದ ಎನ್ನಲಾಗಿದೆ. ಇಷ್ಟಲ್ಲದೆ ಸ್ಥಳೀಯ ನಾಡ ದೋಣಿಗಾರರಿಗೆ ದುಪ್ಪಟ್ಟು ದರದಲ್ಲಿ ಪೆಟ್ರೋಲನ್ನ ದಾಸ್ತಾನು ಇರಿಸಿ ಮಾರಾಟ ಮಾಡುತ್ತಿದ್ದ.

ಖಚಿತ ಮಾಹಿತಿಯನ್ವಯ ಎಸಿಪಿ ಧನ್ಯ ನಾಯಕ್ ಸಮೇತ ಸಿಬ್ಬಂದಿಗಳಾದ ರಿಜಿ, ಸಾಜು ನಾಯರ್, ಮಹೇಶ್, ಅಕ್ಬರ್ ನೇತೃತ್ವದ ತಂಡ ಗುರುವಾರ ದಿಢೀರ್ ದಾಳಿ ನಡೆಸಿದೆ. ಸುಮಾರು 55 ಕ್ಕೂ ಮಿಕ್ಕಿದ ಗ್ಯಾಸ್ ಸಿಲಿಂಡರ್ ಮತ್ತು 280 ಲೀಟರ್ ನಷ್ಟು ಅಕ್ರಮ ದಾಸ್ತಾನು ಇರಿಸಿದ್ದ ಪೆಟ್ರೋಲನ್ನ ವಶ ಪಡಿಸಿದ್ದು ,ಆರೋಪಿ ಅಲ್ತಾಪ್ ನನ್ನು ಬಂಧಿಸಿದ್ದಾರೆ.
ತಮ್ಮ ಠಾಣೆಯ ಕೂಗಳತೆಯಲ್ಲಿ ರಸ್ತೆ ಬದಿಯಲ್ಲೇ ನಡೆಯುತ್ತಿರುವ ಅಕ್ರಮಗಳು ಉಳ್ಳಾಲ ಠಾಣಾ ಇನ್ಸ್ ಪೆಕ್ಟರ್ ಅವರ ಆಪ್ತ ಸಲಹೆಗಾರರಿಗೆ ತಿಳಿಯದ ಸಂಗತಿ ಏನೂ ಅಲ್ಲ. ಎಲ್ಲವೂ ತಿಳಿದು ಪಾಲಿಗೆ ಬಂದದನ್ನ ಪಂಚಾಮೃತವನ್ನಾಗಿ ಸ್ವೀಕರಿಸುತ್ತಿದ್ದ ಉಳ್ಳಾಲ ಇನ್ಸ್ ಪೆಕ್ಟರ್ ಅವರ ಗುಪ್ತ ಮಾಹಿತಿದಾರರು ಇಂದಿನ ಎಸಿಪಿ ದಾಳಿಯಿಂದ ದಂಗಾಗಿ ಕರಟಿದ ಮುಖದಿಂದ ದಾಳಿಯ ಗುಂಪಿನ ಫೋಟೋಕ್ಕೆ ಪೋಸು ನೀಡಿದ್ದಾರೆ.
Mangalore ACP Dhanya N Nayak and team raids Illegal gas refilling hub at Kotepura in Ullal.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm