ಬ್ರೇಕಿಂಗ್ ನ್ಯೂಸ್
18-01-24 04:32 pm Mangalore Correspondent ಕ್ರೈಂ
ಉಳ್ಳಾಲ, ಜ.18: ಉಳ್ಳಾಲ ಠಾಣೆ ವ್ಯಾಪ್ತಿಯ ಕೋಟೆಪುರದ ಬೃಹತ್ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗೆ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯ ನಾಯಕ್ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿದ್ದು ಆರೋಪಿ ಸಮೇತ ಅಪಾರ ಪ್ರಮಾಣದ ಗ್ಯಾಸ್ ಸಿಲಿಂಡರ್ ಗಳನ್ನ ವಶಪಡಿಸಿದ್ದಲ್ಲದೆ, ಅಕ್ರಮವಾಗಿ ಮಾರಾಟ ನಡೆಸುತ್ತಿದ್ದ ಲೀಟರ್ ಗಟ್ಟಲೆ ಪೆಟ್ರೋಲನ್ನೂ ವಶಪಡಿಸಿಕೊಂಡಿದೆ.
ಉಳ್ಳಾಲ ಕೋಟೆಪುರದ ಬರಾಖ ಫ್ಯಾಕ್ಟರಿ ಮುಂಭಾಗದ ರಸ್ತೆ ಬದಿಯ ಮನೆಯೊಂದರಲ್ಲಿ ನಡೆಯುತ್ತಿದ್ದ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗೆ ಎಸಿಪಿ ಧನ್ಯ ನಾಯಕ್ ಮತ್ತು ತಂಡ ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ದಾಸ್ತಾನು ಇರಿಸಿದ್ದ ಗ್ಯಾಸ್ ಸಿಲಿಂಡರ್ ಮತ್ತು ಸುಮಾರು 280 ಲೀಟರ್ ಪೆಟ್ರೋಲನ್ನ ಜಪ್ತಿಗೊಳಿಸಿದ್ದು ಆರೋಪಿ ಅಬ್ದುಲ್ ಅಲ್ತಾಫ್ (49) ಎಂಬಾತನನ್ನ ಬಂಧಿಸಿದೆ.
ಕೋಟೆಪುರದ ರಸ್ತೆ ಬದಿಯ ಮನೆಯಲ್ಲೇ ತೋರ್ಪಡಿಕೆಗೆ ಗುಜರಿ ಅಂಗಡಿ ನಡೆಸುತ್ತಿದ್ದ ಆರೋಪಿ ಅಲ್ತಾಫ್ ಮನೆಯೊಳಗಿನ ವಿಶಾಲ ಪ್ರದೇಶದಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಗಳನ್ನ ದಾಸ್ತಾನು ಇರಿಸಿ ರೀಫಿಲ್ಲಿಂಗ್ ಮಾಡುತ್ತಿದ್ದ ಎನ್ನಲಾಗಿದೆ. ಇಷ್ಟಲ್ಲದೆ ಸ್ಥಳೀಯ ನಾಡ ದೋಣಿಗಾರರಿಗೆ ದುಪ್ಪಟ್ಟು ದರದಲ್ಲಿ ಪೆಟ್ರೋಲನ್ನ ದಾಸ್ತಾನು ಇರಿಸಿ ಮಾರಾಟ ಮಾಡುತ್ತಿದ್ದ.
ಖಚಿತ ಮಾಹಿತಿಯನ್ವಯ ಎಸಿಪಿ ಧನ್ಯ ನಾಯಕ್ ಸಮೇತ ಸಿಬ್ಬಂದಿಗಳಾದ ರಿಜಿ, ಸಾಜು ನಾಯರ್, ಮಹೇಶ್, ಅಕ್ಬರ್ ನೇತೃತ್ವದ ತಂಡ ಗುರುವಾರ ದಿಢೀರ್ ದಾಳಿ ನಡೆಸಿದೆ. ಸುಮಾರು 55 ಕ್ಕೂ ಮಿಕ್ಕಿದ ಗ್ಯಾಸ್ ಸಿಲಿಂಡರ್ ಮತ್ತು 280 ಲೀಟರ್ ನಷ್ಟು ಅಕ್ರಮ ದಾಸ್ತಾನು ಇರಿಸಿದ್ದ ಪೆಟ್ರೋಲನ್ನ ವಶ ಪಡಿಸಿದ್ದು ,ಆರೋಪಿ ಅಲ್ತಾಪ್ ನನ್ನು ಬಂಧಿಸಿದ್ದಾರೆ.
ತಮ್ಮ ಠಾಣೆಯ ಕೂಗಳತೆಯಲ್ಲಿ ರಸ್ತೆ ಬದಿಯಲ್ಲೇ ನಡೆಯುತ್ತಿರುವ ಅಕ್ರಮಗಳು ಉಳ್ಳಾಲ ಠಾಣಾ ಇನ್ಸ್ ಪೆಕ್ಟರ್ ಅವರ ಆಪ್ತ ಸಲಹೆಗಾರರಿಗೆ ತಿಳಿಯದ ಸಂಗತಿ ಏನೂ ಅಲ್ಲ. ಎಲ್ಲವೂ ತಿಳಿದು ಪಾಲಿಗೆ ಬಂದದನ್ನ ಪಂಚಾಮೃತವನ್ನಾಗಿ ಸ್ವೀಕರಿಸುತ್ತಿದ್ದ ಉಳ್ಳಾಲ ಇನ್ಸ್ ಪೆಕ್ಟರ್ ಅವರ ಗುಪ್ತ ಮಾಹಿತಿದಾರರು ಇಂದಿನ ಎಸಿಪಿ ದಾಳಿಯಿಂದ ದಂಗಾಗಿ ಕರಟಿದ ಮುಖದಿಂದ ದಾಳಿಯ ಗುಂಪಿನ ಫೋಟೋಕ್ಕೆ ಪೋಸು ನೀಡಿದ್ದಾರೆ.
Mangalore ACP Dhanya N Nayak and team raids Illegal gas refilling hub at Kotepura in Ullal.
19-03-25 12:44 pm
Bangalore Correspondent
ಸೌಜನ್ಯಾ ಪ್ರಕರಣ ; ನ್ಯಾಯಕ್ಕಾಗಿ ಆಗ್ರಹಿಸಿ ಧರ್ಮಸ್ಥ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
Bangalore JCB Accident, Two Killed; ರಸ್ತೆ ಕಾಮ...
18-03-25 02:30 pm
19-03-25 02:10 pm
HK News Desk
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
18-03-25 10:09 pm
Mangalore Correspondent
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am