ಬ್ರೇಕಿಂಗ್ ನ್ಯೂಸ್
18-01-24 04:32 pm Mangalore Correspondent ಕ್ರೈಂ
ಉಳ್ಳಾಲ, ಜ.18: ಉಳ್ಳಾಲ ಠಾಣೆ ವ್ಯಾಪ್ತಿಯ ಕೋಟೆಪುರದ ಬೃಹತ್ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗೆ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯ ನಾಯಕ್ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿದ್ದು ಆರೋಪಿ ಸಮೇತ ಅಪಾರ ಪ್ರಮಾಣದ ಗ್ಯಾಸ್ ಸಿಲಿಂಡರ್ ಗಳನ್ನ ವಶಪಡಿಸಿದ್ದಲ್ಲದೆ, ಅಕ್ರಮವಾಗಿ ಮಾರಾಟ ನಡೆಸುತ್ತಿದ್ದ ಲೀಟರ್ ಗಟ್ಟಲೆ ಪೆಟ್ರೋಲನ್ನೂ ವಶಪಡಿಸಿಕೊಂಡಿದೆ.
ಉಳ್ಳಾಲ ಕೋಟೆಪುರದ ಬರಾಖ ಫ್ಯಾಕ್ಟರಿ ಮುಂಭಾಗದ ರಸ್ತೆ ಬದಿಯ ಮನೆಯೊಂದರಲ್ಲಿ ನಡೆಯುತ್ತಿದ್ದ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗೆ ಎಸಿಪಿ ಧನ್ಯ ನಾಯಕ್ ಮತ್ತು ತಂಡ ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ದಾಸ್ತಾನು ಇರಿಸಿದ್ದ ಗ್ಯಾಸ್ ಸಿಲಿಂಡರ್ ಮತ್ತು ಸುಮಾರು 280 ಲೀಟರ್ ಪೆಟ್ರೋಲನ್ನ ಜಪ್ತಿಗೊಳಿಸಿದ್ದು ಆರೋಪಿ ಅಬ್ದುಲ್ ಅಲ್ತಾಫ್ (49) ಎಂಬಾತನನ್ನ ಬಂಧಿಸಿದೆ.
ಕೋಟೆಪುರದ ರಸ್ತೆ ಬದಿಯ ಮನೆಯಲ್ಲೇ ತೋರ್ಪಡಿಕೆಗೆ ಗುಜರಿ ಅಂಗಡಿ ನಡೆಸುತ್ತಿದ್ದ ಆರೋಪಿ ಅಲ್ತಾಫ್ ಮನೆಯೊಳಗಿನ ವಿಶಾಲ ಪ್ರದೇಶದಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಗಳನ್ನ ದಾಸ್ತಾನು ಇರಿಸಿ ರೀಫಿಲ್ಲಿಂಗ್ ಮಾಡುತ್ತಿದ್ದ ಎನ್ನಲಾಗಿದೆ. ಇಷ್ಟಲ್ಲದೆ ಸ್ಥಳೀಯ ನಾಡ ದೋಣಿಗಾರರಿಗೆ ದುಪ್ಪಟ್ಟು ದರದಲ್ಲಿ ಪೆಟ್ರೋಲನ್ನ ದಾಸ್ತಾನು ಇರಿಸಿ ಮಾರಾಟ ಮಾಡುತ್ತಿದ್ದ.

ಖಚಿತ ಮಾಹಿತಿಯನ್ವಯ ಎಸಿಪಿ ಧನ್ಯ ನಾಯಕ್ ಸಮೇತ ಸಿಬ್ಬಂದಿಗಳಾದ ರಿಜಿ, ಸಾಜು ನಾಯರ್, ಮಹೇಶ್, ಅಕ್ಬರ್ ನೇತೃತ್ವದ ತಂಡ ಗುರುವಾರ ದಿಢೀರ್ ದಾಳಿ ನಡೆಸಿದೆ. ಸುಮಾರು 55 ಕ್ಕೂ ಮಿಕ್ಕಿದ ಗ್ಯಾಸ್ ಸಿಲಿಂಡರ್ ಮತ್ತು 280 ಲೀಟರ್ ನಷ್ಟು ಅಕ್ರಮ ದಾಸ್ತಾನು ಇರಿಸಿದ್ದ ಪೆಟ್ರೋಲನ್ನ ವಶ ಪಡಿಸಿದ್ದು ,ಆರೋಪಿ ಅಲ್ತಾಪ್ ನನ್ನು ಬಂಧಿಸಿದ್ದಾರೆ.
ತಮ್ಮ ಠಾಣೆಯ ಕೂಗಳತೆಯಲ್ಲಿ ರಸ್ತೆ ಬದಿಯಲ್ಲೇ ನಡೆಯುತ್ತಿರುವ ಅಕ್ರಮಗಳು ಉಳ್ಳಾಲ ಠಾಣಾ ಇನ್ಸ್ ಪೆಕ್ಟರ್ ಅವರ ಆಪ್ತ ಸಲಹೆಗಾರರಿಗೆ ತಿಳಿಯದ ಸಂಗತಿ ಏನೂ ಅಲ್ಲ. ಎಲ್ಲವೂ ತಿಳಿದು ಪಾಲಿಗೆ ಬಂದದನ್ನ ಪಂಚಾಮೃತವನ್ನಾಗಿ ಸ್ವೀಕರಿಸುತ್ತಿದ್ದ ಉಳ್ಳಾಲ ಇನ್ಸ್ ಪೆಕ್ಟರ್ ಅವರ ಗುಪ್ತ ಮಾಹಿತಿದಾರರು ಇಂದಿನ ಎಸಿಪಿ ದಾಳಿಯಿಂದ ದಂಗಾಗಿ ಕರಟಿದ ಮುಖದಿಂದ ದಾಳಿಯ ಗುಂಪಿನ ಫೋಟೋಕ್ಕೆ ಪೋಸು ನೀಡಿದ್ದಾರೆ.
Mangalore ACP Dhanya N Nayak and team raids Illegal gas refilling hub at Kotepura in Ullal.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm