ಬ್ರೇಕಿಂಗ್ ನ್ಯೂಸ್
21-01-24 07:12 pm Udupi Correspondent ಕ್ರೈಂ
ಉಡುಪಿ, ಜ.21: ಇಲೆಕ್ಟ್ರಿಕ್ ಸ್ಕೂಟರ್ ಬುಕ್ ಮಾಡಿದ್ದರೂ ಡೆಲಿವರಿ ಆಗಿಲ್ಲ ಎಂದು ಕಂಪೆನಿಯ ವಿರುದ್ಧ ಆನ್ಲೈನ್ ದೂರು ನೀಡಲು ಹೋದ ವ್ಯಕ್ತಿಯೊಬ್ಬರು ತನ್ನ ಬ್ಯಾಂಕ್ ಖಾತೆಯಿಂದಲೇ ಲಕ್ಷಾಂತರ ರೂಪಾಯಿ ಹಣ ಕಳಕೊಂಡ ಪ್ರಸಂಗ ನಡೆದಿದೆ.
ಉಡುಪಿ ಸಂತೆಕಟ್ಟೆಯ ರವಿರಾಜ್ ಎಂಬವರು ಇಲೆಕ್ಟ್ರಿಕ್ ವಾಹನ ಖರೀದಿಸಲು ಬುಕ್ಕಿಂಗ್ ಮಾಡಿಸಿದ್ದರು. ಆದರೆ ಸ್ಕೂಟರ್ ಪೂರೈಕೆಯಾಗದ ಸಿಟ್ಟಿನಲ್ಲಿ ಕಂಪೆನಿಯ ವಿರುದ್ಧ ದೂರು ನೀಡಲು ಜ.15ರಂದು ಗೂಗಲ್ ಸರ್ಚ್ ಮಾಡಿದ್ದರು. ಅದರಲ್ಲಿ ವೆಬ್ಸೈಟ್ ಬಗ್ಗೆ ಮಾಹಿತಿ ಬಂದಿದ್ದರಿಂದ ಅದನ್ನು ಅನುಸರಿಸಿದ್ದರು.
ಅಲ್ಲಿ ವಿಷಯ ನಮೂದಿಸಿದ ಕೆಲವೇ ಕ್ಷಣಗಳಲ್ಲಿ ಮೆಸೇಜ್ ಬಂದಿತ್ತು. ನಿಮ್ಮ ದೂರನ್ನು ಸ್ವೀಕರಿಸಲಾಗಿದೆ. ವಾಟ್ಸ್ ಆ್ಯಪ್ನಲ್ಲಿ ಕಳುಹಿಸಿರುವ ಲಿಂಕ್ಗೆ ಮಾಹಿತಿಗಳನ್ನು ನಮೂದಿಸಿ ಎಂದು ಕರೆ ಮಾಡಿದ ವ್ಯಕ್ತಿ ತಿಳಿಸಿದ್ದರು. ಅದರಂತೆ ರವಿರಾಜ್ ತಾನು ಬುಕ್ಕಿಂಗ್ ಸಂದರ್ಭದಲ್ಲಿ ನೀಡಿದ್ದ ಹಣಕಾಸು ಸೇರಿದಂತೆ ಬ್ಯಾಂಕ್ ಮಾಹಿತಿ ಹಾಗೂ ಯುಪಿಐ ಸಂಖ್ಯೆಯನ್ನು ನಮೂದಿಸಿದ್ದರು. ಬಳಿಕ ಅವರ ಗಮನಕ್ಕೆ ಬರದಂತೆ ಬ್ಯಾಂಕ್ ಖಾತೆಯಿಂದ ಜ.20ರಂದು ಹಂತ ಹಂತವಾಗಿ 1,99,000 ರೂ. ಕಡಿತಗೊಂಡಿತ್ತು. ಅತ್ತ ಸ್ಕೂಟರ್ ಕೂಡ ಇಲ್ಲ, ಇತ್ತ ಬ್ಯಾಂಕ್ನಲ್ಲಿದ್ದ ಹಣವೂ ಇಲ್ಲ ಎಂಬ ಸ್ಥಿತಿ ಅವರದ್ದಾಗಿದೆ. ಈ ಬಗ್ಗೆ ಉಡುಪಿ ಸೆನ್ ಠಾಣೆಯಲ್ಲಿ ರವಿರಾಜ್ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
A man, who had gone to lodge an online complaint against an electric scooter for not being delivered despite booking it, lost lakhs of rupees from his bank account.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm