ಬ್ರೇಕಿಂಗ್ ನ್ಯೂಸ್
22-11-20 12:15 pm Mangalore Correspondent ಕ್ರೈಂ
ಮಂಗಳೂರು, ನವೆಂಬರ್ 22: ಫೇಸ್ಬುಕ್ನಲ್ಲಿ ಪರಿಚಯವಾದ ವ್ಯಕ್ತಿಯ ಭರ್ಜರಿ ಗಿಫ್ಟ್ ಆಸೆಗೆ ಒಳಗಾದ ವ್ಯಕ್ತಿಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ವ್ಯಕ್ತಿಗೆ ರಿಯನಾರ್ಡೊ ನೀಲ್ ಹೆಸರಿನ ವ್ಯಕ್ತಿಯೊಬ್ಬ ಇತ್ತೀಚೆಗೆ ಫೇಸ್ಬುಕ್ ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿ ಪರಿಚಯವಾಗಿದ್ದ. ಬಳಿಕ ಮೊಬೈಲ್ ನಂಬರ್ ಪಡೆದು ಇಂಟರ್ನೆಟ್ ಮುಖಾಂತರ ಸಂಪರ್ಕದಲ್ಲಿದ್ದು ಪರಿಚಯದಿಂದ ಮಾತಾಡಿಕೊಂಡಿದ್ದ. ಆದರೆ ಕೆಲ ದಿನಗಳ ಹಿಂದೆ ಯಾವುದೋ ಕಾರಣಕ್ಕೆ ನಾನು ನಿಮಗೆ ಭರ್ಜರಿ ಗಿಫ್ಟ್ ಕಳುಹಿಸುವುದಾಗಿ ರಿಯನಾರ್ಡೊ ನೀಲ್ ಹೆಸರಿನ ಗೆಳೆಯ ತಿಳಿಸಿದ್ದ. ಆರಂಭದಲ್ಲಿ ನಿರಾಕರಿಸಿದ್ದ ವ್ಯಕ್ತಿ, ಕೊನೆಗೆ ಆತನ ಒತ್ತಾಯಕ್ಕೆ ಮಣಿದು 'ಓಕೆ' ಎಂದಿದ್ದರು.

ಅದಾದ ಕೆಲವೇ ದಿನದಲ್ಲಿ ದೆಹಲಿಯಿಂದ ಮಹಿಳೆಯೊಬ್ಬಳು ಕರೆ ಮಾಡಿದ್ದಾಳೆ. ಕೊರಿಯರ್ ಆಫೀಸ್ನಿಂದ ಕರೆ ಮಾಡಿದ್ದು , ಪಾರ್ಸೆಲ್ ಮೊತ್ತ 32,800 ರೂ. ಪಾವತಿ ಮಾಡುವಂತೆ ತಿಳಿಸಿದ್ದು ಅದನ್ನು ಪೇ ಮಾಡಿದ್ದಾರೆ. ಅದಾದ ಕೆಲವೇ ಕ್ಷಣದಲ್ಲಿ ದೆಹಲಿ ಕಸ್ಟಮ್ಸ್ ಇಲಾಖೆಯಿಂದ ಅಂತ ಹೆಸರೇಳಿಕೊಂಡು ಮತ್ತೊಬ್ಬ ಮಹಿಳೆ ಕರೆ ಮಾಡಿದ್ದು ಜಿಎಸ್ ಟಿ, ಕಸ್ಟಮ್ಸ್ ಫೀಸ್, ಇತರ ವೆಚ್ಚದ ಬಗ್ಗೆ ಮಾತನಾಡಿದ್ದಾಳೆ. ಬೇರೆ ಬೇರೆ ಖಾತೆಗಳ ವಿವರ ನೀಡಿದ್ದು ಅದಕ್ಕೆ ಹಣ ಪಾವತಿ ಮಾಡುವಂತೆ ಕೇಳಿಕೊಂಡಿದ್ದಾಳೆ. ಆಕೆಯ ಒತ್ತಾಯಕ್ಕೆ ಕಟ್ಟುಬಿದ್ದ ವ್ಯಕ್ತಿ ಭಾರೀ ದೊಡ್ಡ ಗಿಫ್ಟ್ ಬರುವ ನಿರೀಕ್ಷೆಯಲ್ಲಿ ವಿವಿಧ ಖಾತೆಗಳಿಗೆ 14,91,840 ರೂ. ಜಮೆ ಮಾಡಿದ್ದಾರೆ.
ಆದರೆ, ಇದಾದ ನಂತರ ಅವರ ಸಂಪರ್ಕವೇ ಕಡಿತಗೊಂಡಿದ್ದು, ವ್ಯಕ್ತಿಗೆ ಮೋಸ ಹೋಗಿರುವ ಸಂಶಯ ಬಂದಿದೆ. ಲೆಕ್ಕ ಹಾಕಿದಾಗ ಲಕ್ಷಾಂತರ ರೂಪಾಯಿ ಕಳಕೊಂಡಿದ್ದು ಅರಿವಿಗೆ ಬಂದಿದೆ. ಇದೊಂದು ವಂಚನೆಯ ಜಾಲ ಅನ್ನೋದು ಗೊತ್ತಾಗಿ, ಇದೀಗ ಮೋಸ ಹೋದ ವ್ಯಕ್ತಿ ಮಂಗಳೂರಿನ ಸೈಬರ್ ಕ್ರೈಂ ಪೊಲೀಸರ ಮೊರೆ ಹೋಗಿದ್ದಾರೆ.
Man lost Rs 14,91,840 lakh to a Facebook friend who lured him with gifts worth lakhs of rupees. A case has been registered at the cyber crime police station in Mangalore.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm