ಬ್ರೇಕಿಂಗ್ ನ್ಯೂಸ್
24-01-24 06:18 pm HK News Desk ಕ್ರೈಂ
ಮೈಸೂರು, ಜ 24: ಹೆತ್ತ ತಾಯಿ ಹಾಗೂ ತಂಗಿಯನ್ನು ಕೆರೆಗೆ ತಳ್ಳಿ ಕೊಲೆ ಮಾಡಿರುವ ಘಟನೆ ಹುಣಸೂರು ತಾಲೂಕಿನ ಮರೂರು ಗ್ರಾಮದಲ್ಲಿ ನಡೆದಿದೆ. ಸ್ವಂತ ಮಗನಿಂದಲೇ ಕೃತ್ಯ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಯುವಕನೊಬ್ಬನನ್ನು ಪ್ರೀತಿಸುತ್ತಿದ್ದ ವಿಚಾರವಾಗಿ ತಂಗಿಯೊಂದಿಗೆ ದ್ವೇಷ ಬೆಳೆಸಿಕೊಂಡಿದ್ದ ಅಣ್ಣ ನಿತಿನ್ ಈ ಕೃತ್ಯ ಎಸಗಿದ್ದಾನೆ. ಆರೋಪಿಯು ಮೊದಲು ತಂಗಿಯನ್ನು ಕೆರೆಗೆ ತಳ್ಳಿದ್ದ. ಈ ವೇಳೆ ರಕ್ಷಿಸಲು ಬಂದ ತಾಯಿಯನ್ನೂ ಸಹ ಕೆರೆಗೆ ತಳ್ಳಿದ್ದಾನೆ. ಹಿರಿಕ್ಯಾತನಹಳ್ಳಿಯ ಅನಿತಾ(40) ಹಾಗೂ ಮಗಳು ಧನುಶ್ರೀ(19) ಮೃತರು.

ಹನಗೋಡು ಗ್ರಾಮದ ಬೇರೆ ಯುವಕನೊಂದಿಗಿನ ಪ್ರೀತಿ ವಿಚಾರವಾಗಿ ಅಣ್ಣ-ತಂಗಿ ಮಧ್ಯೆ ವೈಮನಸ್ಸು ಬೆಳೆದಿತ್ತು. ಆಗಾಗ ಇಬ್ಬರ ನಡುವೆ ಗಲಾಟೆ ಕೂಡ ನಡೆಯುತ್ತಿತ್ತು. ನಾವೇ ಹಲವು ಬಾರಿ ಸಮಾಧಾನಪಡಿಸಿದ್ದೆವು. ಮಂಗಳವಾರ ಸಂಜೆ ಹೆಮ್ಮಿಗೆ ಗ್ರಾಮದಲ್ಲಿರುವ ಮಾವನ ಮನೆಗೆ ಹೋಗುವ ಕಾರಣ ನೀಡಿ ತಾಯಿ ಹಾಗೂ ತಂಗಿಯನ್ನು ನಿತಿನ್ ಬೈಕ್ನಲ್ಲಿ ಕರೆದೊಯ್ದು ಈ ಕೃತ್ಯವೆಸಗಿದ್ದಾನೆ ಎಂದು ತಂದೆ ಸತೀಶ್ ಹೇಳಿದ್ದಾರೆ. ಒದ್ದೆ ಬಟ್ಟೆಯಲ್ಲೇ ಮನೆಗೆ ಹಿಂದಿರುಗಿ ಈ ಬಗ್ಗೆ ಮಾಹಿತಿ ನೀಡಿದ್ದಾಗಿ ಸತೀಶ್ ತಿಳಿಸಿದ್ದಾರೆ.
ಘಟನೆ ಬಳಿಕ ಪಶ್ಚಾತ್ತಾಪ ಪಟ್ಟು ತಾಯಿಯನ್ನು ರಕ್ಷಿಸಲು ನಿತಿನ್ ಕೆರೆಗೆ ಹಾರಿದ್ದಾನೆ. ಆದ್ರೆ, ಅಷ್ಟರಲ್ಲಾಗಲೇ ಇಬ್ಬರ ಪ್ರಾಣಪಕ್ಷಿ ಹಾರಿಹೋಗಿದೆ. ಆರೋಪಿ ನಿತಿನ್ನನ್ನು ಹುಣಸೂರು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.
In a shocking incident, a mother and her sister were allegedly pushed into a lake and murdered at Marur village in Hunsur taluk on Jan. 24. The crime was committed by his own son. The accused has been arrested by the police.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 07:23 pm
Mangalore Correspondent
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
07-11-25 08:05 pm
HK News Desk
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm