ಬ್ರೇಕಿಂಗ್ ನ್ಯೂಸ್
24-01-24 06:18 pm HK News Desk ಕ್ರೈಂ
ಮೈಸೂರು, ಜ 24: ಹೆತ್ತ ತಾಯಿ ಹಾಗೂ ತಂಗಿಯನ್ನು ಕೆರೆಗೆ ತಳ್ಳಿ ಕೊಲೆ ಮಾಡಿರುವ ಘಟನೆ ಹುಣಸೂರು ತಾಲೂಕಿನ ಮರೂರು ಗ್ರಾಮದಲ್ಲಿ ನಡೆದಿದೆ. ಸ್ವಂತ ಮಗನಿಂದಲೇ ಕೃತ್ಯ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಯುವಕನೊಬ್ಬನನ್ನು ಪ್ರೀತಿಸುತ್ತಿದ್ದ ವಿಚಾರವಾಗಿ ತಂಗಿಯೊಂದಿಗೆ ದ್ವೇಷ ಬೆಳೆಸಿಕೊಂಡಿದ್ದ ಅಣ್ಣ ನಿತಿನ್ ಈ ಕೃತ್ಯ ಎಸಗಿದ್ದಾನೆ. ಆರೋಪಿಯು ಮೊದಲು ತಂಗಿಯನ್ನು ಕೆರೆಗೆ ತಳ್ಳಿದ್ದ. ಈ ವೇಳೆ ರಕ್ಷಿಸಲು ಬಂದ ತಾಯಿಯನ್ನೂ ಸಹ ಕೆರೆಗೆ ತಳ್ಳಿದ್ದಾನೆ. ಹಿರಿಕ್ಯಾತನಹಳ್ಳಿಯ ಅನಿತಾ(40) ಹಾಗೂ ಮಗಳು ಧನುಶ್ರೀ(19) ಮೃತರು.

ಹನಗೋಡು ಗ್ರಾಮದ ಬೇರೆ ಯುವಕನೊಂದಿಗಿನ ಪ್ರೀತಿ ವಿಚಾರವಾಗಿ ಅಣ್ಣ-ತಂಗಿ ಮಧ್ಯೆ ವೈಮನಸ್ಸು ಬೆಳೆದಿತ್ತು. ಆಗಾಗ ಇಬ್ಬರ ನಡುವೆ ಗಲಾಟೆ ಕೂಡ ನಡೆಯುತ್ತಿತ್ತು. ನಾವೇ ಹಲವು ಬಾರಿ ಸಮಾಧಾನಪಡಿಸಿದ್ದೆವು. ಮಂಗಳವಾರ ಸಂಜೆ ಹೆಮ್ಮಿಗೆ ಗ್ರಾಮದಲ್ಲಿರುವ ಮಾವನ ಮನೆಗೆ ಹೋಗುವ ಕಾರಣ ನೀಡಿ ತಾಯಿ ಹಾಗೂ ತಂಗಿಯನ್ನು ನಿತಿನ್ ಬೈಕ್ನಲ್ಲಿ ಕರೆದೊಯ್ದು ಈ ಕೃತ್ಯವೆಸಗಿದ್ದಾನೆ ಎಂದು ತಂದೆ ಸತೀಶ್ ಹೇಳಿದ್ದಾರೆ. ಒದ್ದೆ ಬಟ್ಟೆಯಲ್ಲೇ ಮನೆಗೆ ಹಿಂದಿರುಗಿ ಈ ಬಗ್ಗೆ ಮಾಹಿತಿ ನೀಡಿದ್ದಾಗಿ ಸತೀಶ್ ತಿಳಿಸಿದ್ದಾರೆ.
ಘಟನೆ ಬಳಿಕ ಪಶ್ಚಾತ್ತಾಪ ಪಟ್ಟು ತಾಯಿಯನ್ನು ರಕ್ಷಿಸಲು ನಿತಿನ್ ಕೆರೆಗೆ ಹಾರಿದ್ದಾನೆ. ಆದ್ರೆ, ಅಷ್ಟರಲ್ಲಾಗಲೇ ಇಬ್ಬರ ಪ್ರಾಣಪಕ್ಷಿ ಹಾರಿಹೋಗಿದೆ. ಆರೋಪಿ ನಿತಿನ್ನನ್ನು ಹುಣಸೂರು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.
In a shocking incident, a mother and her sister were allegedly pushed into a lake and murdered at Marur village in Hunsur taluk on Jan. 24. The crime was committed by his own son. The accused has been arrested by the police.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm