ಬ್ರೇಕಿಂಗ್ ನ್ಯೂಸ್
25-01-24 03:10 pm HK News Desk ಕ್ರೈಂ
ವಿಜಯಪುರ, ಜ 25: ನಗರದ ಪೊಲೀಸ್ ಪೇದೆಯೊಬ್ಬ ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ್ದಾನೆಂದು ಯುವತಿಯೊಬ್ಬಳು ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಜರುಗಿದೆ.
ಪ್ರೀತಿ, ಪ್ರೇಮದ ನಾಟಕವಾಡಿ, ಮದುವೆ ಆಗುವುದಾಗಿ ನಂಬಿಸಿ, ವಿಜಯಪುರ ನಗರದ ಗಾಂಧಿಚೌಕ ಠಾಣೆಯಲ್ಲಿ ಸೇವೆಯಲ್ಲಿರುವ ಪೇದೆಯ ವಿರುದ್ಧವೇ ಯುವತಿ ದೂರು ನೀಡಿದ್ದಾಳೆ.

ಈ ಮಧ್ಯೆ ಪೇದೆ ವಿನಾಯಕ ಕಳೆದ 20 ದಿನಗಳಿಂದ ಸೇವೆಗೆ ಬಾರದೇ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
ನನ್ನನ್ನು ಮದುವೆ ಆಗುವುದಾಗಿ ನಂಬಿಸಿ ನನ್ನ ಮೇಲೆ ದೈಹಿಕವಾಗಿ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಮದುವೆ ಮಾಡಿಕೊಳ್ಳದೇ ನನಗೆ ಮೋಸ ಮಾಡಿದ್ದಾನೆ ಎಂದು ಸಂತ್ರಸ್ತ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ
ನಗರದ ಮಹಿಳಾ ಠಾಣೆಗೆ ಸಂತ್ರಸ್ತ ಯುವತಿ ಪೇದೆ ವಿನಾಯಕ ಟಕ್ಕಳಕಿ ವಿರುದ್ಧ ದೂರು ನೀಡಿದ್ದಾಳೆ.
ಯಾವಾಗ ಯುವತಿ ತನ್ನನ್ನ ಮದುವೆಯಾಗಬೇಕೆಂದು ದುಂಬಾಲು ಬಿದ್ದಳೋ ಆಗಿನಿಂದ ಕಾನ್ಸ್ಟೇಬಲ್ ವಿನಾಯಕ ಟಕ್ಕಳಕಿ ಸೇವೆಗೆ ಗೈರಾಗಿ ನಾಪತ್ತೆಯಾಗಿದ್ದಾನೆ. ಕಳೆದ 20 ದಿನಗಳಿಂದ ಗಾಂಧಿ ಚೌಕ್ ಪೊಲೀಸ್ ಠಾಣೆಗೆ ಆತ ಸೇವೆಗೆ ಹಾಜರಾಗಿಲ್ಲ. ಯುವತಿ ಮೇಲೆ ಅತ್ಯಾಚಾರ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ವಿನಾಯಕ ಟಕ್ಕಳಕಿ ಪತ್ತೆಗೆ ಬೀಸಿದ್ದಾರೆ.
ಸದ್ಯ ನಾಪತ್ತೆಯಾಗಿರುವ ವಿನಾಯಕ ಟಕ್ಕಳಕಿ ಬಂಧನವಾಗಬೇಕು. ಕಾನೂನಿನ ಪ್ರಕಾರ ಆತನಿಗೆ ಶಿಕ್ಷೆ ಆಗಬೇಕು. ಇಲ್ಲವೇ ನನ್ನ ಜೊತೆ ಆತ ಮದುವೆಯಾಗಬೇಕೆಂದು ಯುವತಿ ಪಟ್ಟು ಹಿಡಿದಿದ್ದಾಳೆ. ಪೊಲೀಸ್ ಕಾನ್ಸ್ಟೇಬಲ್ ವಿನಾಯಕ ಟಕ್ಕಳಕಿಯ ಲವ್, ಸೆಕ್ಸ್, ದೋಖಾ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
Police constable Vinayak alleged of Love sex and cheating of marriage at Vijayapura. A cade has been filed at Women police station. The police constable is said to be Missing since then.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm