ಬ್ರೇಕಿಂಗ್ ನ್ಯೂಸ್
22-11-20 03:13 pm Mangalore Correspondent ಕ್ರೈಂ
ಮಂಗಳೂರು, ನವೆಂಬರ್ 22: ಮಲೈಕಾ ಕೋ ಆಪರೇಟಿವ್ ಸೊಸೈಟಿ ಹಗರಣಕ್ಕೆ ಸಂಬಂಧಿಸಿ ಪೊಲೀಸರು ಮಂಗಳೂರಿನ ಪ್ರಧಾನ ಕಚೇರಿಯಲ್ಲಿ ಮ್ಯಾನೇಜರ್ ಆಗಿದ್ದ ರೀನಾ ಜೋಸ್ ಎಂಬವರನ್ನು ಬಂಧಿಸಿದ್ದಾರೆ.
ಹಗರಣದ ಬಗ್ಗೆ ಪ್ರಕರಣ ದಾಖಲಾಗಿ ಒಂದು ತಿಂಗಳಾದ್ರೂ ಪೊಲೀಸರು ಕ್ರಮ ಜರುಗಿಸಿಲ್ಲ ಎಂದು ಹೆಡ್ ಲೈನ್ ಕರ್ನಾಟಕ ವರದಿ ಮಾಡಿತ್ತು. ಇದರಿಂದ ಎಚ್ಚೆತ್ತ ಪೊಲೀಸರು ಈಗ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಂಗಳೂರಿನಲ್ಲಿ ಗ್ರಾಹಕರನ್ನು ವಂಚಿಸಿದ್ದ ಆರೋಪ ಎದುರಿಸುತ್ತಿರುವ ರೀನಾ ಜೋಸ್ ತಲೆಮರೆಸಿಕೊಂಡಿದ್ದಾರೆ ಎನ್ನಲಾಗುತ್ತಿತ್ತು. ಆದರೆ, ಪೊಲೀಸರು ಮಂಗಳೂರಿನಲ್ಲಿಯೇ ಬಂಧಿಸಿದ್ದಾಗಿ ಮಾಹಿತಿ ನೀಡಿದ್ದಾರೆ.


ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ಮತ್ತಷ್ಟು ವಿಚಾರಣೆಗಾಗಿ ಮೂರು ದಿನಗಳ ಕಸ್ಟಡಿ ಪಡೆದಿದ್ದಾರೆ. ಇದೇ ವೇಳೆ, ಇತರೇ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಮಂಗಳೂರಿನ ಬೆಂದೂರ್ ವೆಲ್ ನಲ್ಲಿದ್ದ ಮಲೈಕಾ ಮಲ್ಟಿ ಸ್ಟೇಟ್ ಕೋ ಆಪರೇಟಿವ್ ಸೊಸೈಟಿಯ ಕಚೇರಿಯಲ್ಲಿ ಮ್ಯಾನೇಜರ್ ಆಗಿದ್ದ ರೀನಾ, ಸಂಸ್ಥೆಯ ಮುಖ್ಯಸ್ಥ ಗಿಲ್ಬರ್ಟ್ ಬ್ಯಾಪ್ಟಿಸ್ಟ್ ಆಪ್ತೆಯೂ ಆಗಿದ್ದಳು. ಗಿಲ್ಬರ್ಟ್ ಮತ್ತು ರೀನಾ ಜೋಸ್ ಸೇರಿ ನೂರಾರು ಗ್ರಾಹಕರಿಗೆ ಟೋಪಿ ಹಾಕಿದ್ದಾರೆ ಎಂದು ದೂರು ಕೇಳಿಬಂದಿತ್ತು.

ಮಲೈಕಾ ಸೊಸೈಟಿ ಮಂಗಳೂರು, ಉಡುಪಿ, ಗೋವಾ, ಮುಂಬೈ ಸೇರಿದಂತೆ ಹಲವೆಡೆ ನೂರಾರು ಕಚೇರಿಗಳನ್ನು ಹೊಂದಿದ್ದು, ಸಾವಿರಾರು ಗ್ರಾಹಕರು ತಮ್ಮ ಕಷ್ಟದ ದುಡ್ಡನ್ನು ಡಿಪಾಸಿಟ್ ಮಾಡಿದ್ದರು. ಅಂದಾಜು 350 ಕೋಟಿ ರೂಪಾಯಿ ವಂಚನೆ ಆಗಿರುವ ಬಗ್ಗೆ ದೂರು ದಾಖಲಾಗಿದೆ. ಮಂಗಳೂರಿನ ಪಾಂಡೇಶ್ವರ ಠಾಣೆಯಲ್ಲೇ 150ಕ್ಕೂ ಹೆಚ್ಚು ಮಂದಿ ದೂರು ದಾಖಲಿಸಿದ್ದಾರೆ.
Headline Karnataka Impact, Malaika Credit Society Mangalore Manager Reena Josh has been arrested by the Pandeshwar Police in connection of Cheating investors of 350 crores by the company MD Gilbert Baptist and others.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am