ಬ್ರೇಕಿಂಗ್ ನ್ಯೂಸ್
01-02-24 01:54 pm HK News Desk ಕ್ರೈಂ
ಕಾಸರಗೋಡು, ಫೆ.1: ಕಾಸರಗೋಡಿನ ವ್ಯಕ್ತಿಯೊಬ್ಬರನ್ನು ಮಂಗಳೂರಿಗೆ ಕರೆದೊಯ್ದು ಹನಿಟ್ರ್ಯಾಪ್ ಮಾಡಿರುವ ಪ್ರಕರಣದ ಬೆನ್ನತ್ತಿದ ಮೇಲ್ಪರಂಬ ಪೊಲೀಸರು ಇಬ್ಬರು ಮಹಿಳೆಯರು ಸೇರಿ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಮಾಂಗಾಡ್ ನಿವಾಸಿಯನ್ನು ಹನಿಟ್ರ್ಯಾಪ್ನಲ್ಲಿ ಸಿಲುಕಿಸಿ 5 ಲಕ್ಷ ರೂ. ಲಪಟಾಯಿಸಿದ ಬಗ್ಗೆ ಕಾಸರಗೋಡು ಜಿಲ್ಲೆಯ ಮೇಲ್ಪರಂಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕೋಜಿಕ್ಕೋಡ್ ಮೂಲದ ಎಂ.ಪಿ.ರುಬೀನಾ(29), ಆಕೆಯ ಪತಿ ಪ್ರಕರಣದ ಸೂತ್ರಧಾರ ಫೈಝಲ್ (37), ಕಾಸರಗೋಡು ಶಿರಿಬಾಗಿಲು ನಿವಾಸಿ ಎನ್. ಸಿದ್ದಿಕ್ (48), ಮಾಂಗಾಡ್ನ ದಿಲ್ಶಾದ್ (40), ಮುಟ್ಟತ್ತೋಡಿಯ ನಫೀಸತ್ ಮಿಸ್ರಿಯ (40), ಮಾಂಗಾಡ್ನ ಅಬ್ದುಲ್ಲ ಕುಂಞಿ (32), ಪಡನ್ನಕ್ಕಾಡ್ನ ರಫೀಕ್ ಮಹಮ್ಮದ್ (42) ಬಂಧಿತ ಆರೋಪಿಗಳು.
ಜನವರಿ 23 ರಂದು ರುಬಿನಾ ಎಂಬಾಕೆ ಮೊಬೈಲ್ ಮೂಲಕ 59 ವರ್ಷದ ವ್ಯಕ್ತಿಯ ಪರಿಚಯ ಮಾಡಿಕೊಂಡಿದ್ದಳು. ಶೈಕ್ಷಣಿಕ ಉದ್ದೇಶಕ್ಕಾಗಿ ಲ್ಯಾಪ್ ಟಾಪ್ ಖರೀದಿಸಿದ್ದು ಅದು ಹಾಳಾಗಿದೆ. ನಿಮ್ಮ ಸಮಾಜ ಸೇವೆ ಬಗ್ಗೆ ತಿಳಿದುಕೊಂಡಿದ್ದೇನೆ. ಅದಕ್ಕಾಗಿ ಸಹಾಯ ಮಾಡಬೇಕೆಂದು ಬೇಡಿಕೆ ಇಟ್ಟಿದ್ದಳು. ಅದರಂತೆ ಯುವತಿಯೊಂದಿಗೆ ಕಾಸರಗೋಡಿಗೆ ಆಗಮಿಸಿದ ಅವರು ಲ್ಯಾಪ್ ಟಾಪ್ ರಿಪೇರಿ ಸಾಧ್ಯವಿಲ್ಲ. ಹೊಸ ಲ್ಯಾಪ್ ಟಾಪ್ ಖರೀದಿಸಿ ಕೊಡುವುದಾಗಿ ಹೇಳಿದ್ದರು.
ಲ್ಯಾಪ್ಟಾಪ್ ಖರೀದಿಸುವ ನೆಪದಲ್ಲಿ ಆರೋಪಿ ಯುವತಿ ರುಬಿನಾ ಮಂಗಳೂರಿಗೆ ಬಂದಿದ್ದಳು. ಈ ವೇಳೆ, ಆ ವ್ಯಕ್ತಿಯೊಂದಿಗೆ ಸಲುಗೆಯಲ್ಲಿದ್ದ ವಸತಿ ಗೃಹವೊಂದಕ್ಕೆ ತೆರಳಿದ್ದರು. ಅಷ್ಟರಲ್ಲಿ ರುಬಿನಾ ಪತಿ ಸೇರಿದಂತೆ ಐದಾರು ಮಂದಿಯ ತಂಡ ಎಂಟ್ರಿಯಾಗಿದ್ದು ಬಲವಂತದಿಂದ ನಗ್ನ ಫೋಟೊ ತೆಗೆದುಕೊಂಡಿದ್ದಾರೆ. ಬಳಿಕ ಆರೋಪಿಗಳು ಆ ವ್ಯಕ್ತಿಯನ್ನು ಕಾಸರಗೋಡಿಗೆ ಕರೆದೊಯ್ದು ಕೂಡಿಹಾಕಿ ಬೆದರಿಸಿ ₹5 ಲಕ್ಷ ಸುಲಿಗೆ ಮಾಡಿದ್ದಾರೆ. ಆನಂತರವೂ, ಆರೋಪಿಗಳು ಹಣಕ್ಕಾಗಿ ಬ್ಲಾಕ್ಮೇಲ್ ಮಾಡಿದ್ದರು.
ಈ ಬಗ್ಗೆ ಸಂತ್ರಸ್ತ ವ್ಯಕ್ತಿ ಕಾಸರಗೋಡು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಮೇಲ್ಪರಂಬ ಠಾಣಾ ಎಸ್ ಐ ಸುರೇಶ್ ಮತ್ತು ಅರುಣ್ ಮೋಹನ್ ಹನಿಟ್ರಾಪ್ ತಂಡದ ಏಳು ಆರೋಪಿಗಳನ್ನು ಬಂಧಿಸಿದ್ದಾರೆ.
Kerala Police arrested seven people, including a woman, on Wednesday for embezzling around Rs 5 lakh from a 59-year-old man through 'honey trap'. The arrested are Kasaragod natives Dilshad, Siddique, Lubna, Faisal and three others.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm