ಬ್ರೇಕಿಂಗ್ ನ್ಯೂಸ್
04-02-24 06:50 pm Mangalore Correspondent ಕ್ರೈಂ
ಬೆಳ್ತಂಗಡಿ, ಫೆ.4: ಆನ್ಲೈನ್ ಮೋಸದ ಉದ್ದೇಶದಲ್ಲಿ ಅಕ್ರಮವಾಗಿ ಅಪರಿಮಿತ ಸಿಮ್ ಗಳನ್ನು ಸಾಗಿಸುತ್ತಿದ್ದ ನಾಲ್ವರು ಯುವಕರನ್ನು ಧರ್ಮಸ್ಥಳ ಪೊಲೀಸರು ಸೆರೆಹಿಡಿದಿದ್ದಾರೆ. ಧರ್ಮಸ್ಥಳದಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವನ್ನು ಪೊಲೀಸರು ಸುಳಿವು ಆಧರಿಸಿ ಬಂಧಿಸಿದ್ದಾರೆ.
ಒಬ್ಬ ಅಪ್ರಾಪ್ತ ಸೇರಿ ಐವರು ಯುವಕರಲ್ಲಿ 42 ಅಕ್ರಮ ಸಿಮ್ಗಳು ಪತ್ತೆಯಾಗಿದ್ದು ಫೆಬ್ರವರಿ 1 ರಂದು ನೆರಿಯ ಗ್ರಾಮದಲ್ಲಿ ಯುವಕರನ್ನು ಬಂಧಿಸಿ ಸಿಮ್ಗಳನ್ನು ಜಪ್ತಿ ಮಾಡಲಾಗಿದೆ. ರಮೀಝ್ (20), ಅಕ್ಬರ್ ಅಲಿ (24), ಮೊಹಮ್ಮದ್ ಮುಸ್ತಫಾ (22), ಮೊಹಮ್ಮದ್ ಸಾದಿಕ್ (27) ಬಂಧಿತರು. ಇವರ ಜೊತೆ 17 ವರ್ಷದ ಅಪ್ರಾಪ್ತ ಬಾಲಕನೂ ಇದ್ದಾನೆ.
ಆರೋಪಿ ಅಕ್ಬರ್ ಅಲಿ ದುಬೈನಲ್ಲಿ ಇದ್ದಾಗ ಬೇರೆಯವರ ಹೆಸರಿನಲ್ಲಿ ನಕಲಿ ದಾಖಲೆ ಕೊಟ್ಟು ಸಿಮ್ ಖರೀದಿ ಮಾಡುತ್ತಿದ್ದ. ನಾಲ್ಕು ತಿಂಗಳ ಹಿಂದೆ ಊರಿಗೆ ಮರಳಿದ್ದು ವಿದೇಶದ ನಂಟು ಇರುವುದರಿಂದ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಅಕ್ಬರ್ ಆಲಿ ತನ್ನ ಸ್ನೇಹಿತ ಮೊಹಮ್ಮದ್ ಮುಸ್ತಫಾನಲ್ಲಿ ಹೇಳಿ ಸಿಮ್ ಖರೀದಿಸುತ್ತಿದ್ದ. ಮುಸ್ತಫಾಗೆ ರಮೀಜ್ ಮತ್ತು ಸಾದಿಕ್ ನೆರವು ನೀಡಿದ್ದು ಬೇರೆ ಬೇರೆ ಕಡೆಗಳಲ್ಲಿ ತಮ್ಮ ಆತ್ಮೀಯರಿಂದ ಕಮಿಷನ್ ಕೊಟ್ಟು ಸಿಮ್ ಖರೀದಿಸಿ ಕೊಡುತ್ತಿದ್ದರು. ನಂತರ ಅಕ್ಬರ್ ಆಲಿ ಸೂಚನೆಯಂತೆ ಇವರು ಸಿಮ್ ಕಾರ್ಡ್ಗಳನ್ನು ಬೆಂಗಳೂರಿನ ವ್ಯಕ್ತಿಗಳಿಗೆ ಪೂರೈಸುವ ಕೆಲಸ ಮಾಡುತ್ತಿದ್ದರು. ಪ್ರಾಥಮಿಕ ತನಿಖೆಯಲ್ಲಿ ನಕಲಿ ಸಿಮ್ ಪೂರೈಕೆ ಜಾಲ ಪತ್ತೆಯಾಗಿದ್ದು ಇದರ ಹಿಂದಿನ ಅಜೆಂಡಾ ಬಗ್ಗೆ ಕುತೂಹಲ ಉಂಟಾಗಿದೆ.
The Dharmasthala police at Dakshina Kannada in Karnataka have successfully dismantled an illegal operation involving the purchase of 42 SIM cards, suspected to be linked to a foreign currency transfer business. The accused, allegedly part of a clandestine network, were reportedly engaged in converting foreign currency into Indian rupees through online channels with the help of foreign intermediaries.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
19-06-25 01:05 pm
Mangalore Correspondent
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm