ಬ್ರೇಕಿಂಗ್ ನ್ಯೂಸ್
04-02-24 06:50 pm Mangalore Correspondent ಕ್ರೈಂ
ಬೆಳ್ತಂಗಡಿ, ಫೆ.4: ಆನ್ಲೈನ್ ಮೋಸದ ಉದ್ದೇಶದಲ್ಲಿ ಅಕ್ರಮವಾಗಿ ಅಪರಿಮಿತ ಸಿಮ್ ಗಳನ್ನು ಸಾಗಿಸುತ್ತಿದ್ದ ನಾಲ್ವರು ಯುವಕರನ್ನು ಧರ್ಮಸ್ಥಳ ಪೊಲೀಸರು ಸೆರೆಹಿಡಿದಿದ್ದಾರೆ. ಧರ್ಮಸ್ಥಳದಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವನ್ನು ಪೊಲೀಸರು ಸುಳಿವು ಆಧರಿಸಿ ಬಂಧಿಸಿದ್ದಾರೆ.
ಒಬ್ಬ ಅಪ್ರಾಪ್ತ ಸೇರಿ ಐವರು ಯುವಕರಲ್ಲಿ 42 ಅಕ್ರಮ ಸಿಮ್ಗಳು ಪತ್ತೆಯಾಗಿದ್ದು ಫೆಬ್ರವರಿ 1 ರಂದು ನೆರಿಯ ಗ್ರಾಮದಲ್ಲಿ ಯುವಕರನ್ನು ಬಂಧಿಸಿ ಸಿಮ್ಗಳನ್ನು ಜಪ್ತಿ ಮಾಡಲಾಗಿದೆ. ರಮೀಝ್ (20), ಅಕ್ಬರ್ ಅಲಿ (24), ಮೊಹಮ್ಮದ್ ಮುಸ್ತಫಾ (22), ಮೊಹಮ್ಮದ್ ಸಾದಿಕ್ (27) ಬಂಧಿತರು. ಇವರ ಜೊತೆ 17 ವರ್ಷದ ಅಪ್ರಾಪ್ತ ಬಾಲಕನೂ ಇದ್ದಾನೆ.
ಆರೋಪಿ ಅಕ್ಬರ್ ಅಲಿ ದುಬೈನಲ್ಲಿ ಇದ್ದಾಗ ಬೇರೆಯವರ ಹೆಸರಿನಲ್ಲಿ ನಕಲಿ ದಾಖಲೆ ಕೊಟ್ಟು ಸಿಮ್ ಖರೀದಿ ಮಾಡುತ್ತಿದ್ದ. ನಾಲ್ಕು ತಿಂಗಳ ಹಿಂದೆ ಊರಿಗೆ ಮರಳಿದ್ದು ವಿದೇಶದ ನಂಟು ಇರುವುದರಿಂದ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಅಕ್ಬರ್ ಆಲಿ ತನ್ನ ಸ್ನೇಹಿತ ಮೊಹಮ್ಮದ್ ಮುಸ್ತಫಾನಲ್ಲಿ ಹೇಳಿ ಸಿಮ್ ಖರೀದಿಸುತ್ತಿದ್ದ. ಮುಸ್ತಫಾಗೆ ರಮೀಜ್ ಮತ್ತು ಸಾದಿಕ್ ನೆರವು ನೀಡಿದ್ದು ಬೇರೆ ಬೇರೆ ಕಡೆಗಳಲ್ಲಿ ತಮ್ಮ ಆತ್ಮೀಯರಿಂದ ಕಮಿಷನ್ ಕೊಟ್ಟು ಸಿಮ್ ಖರೀದಿಸಿ ಕೊಡುತ್ತಿದ್ದರು. ನಂತರ ಅಕ್ಬರ್ ಆಲಿ ಸೂಚನೆಯಂತೆ ಇವರು ಸಿಮ್ ಕಾರ್ಡ್ಗಳನ್ನು ಬೆಂಗಳೂರಿನ ವ್ಯಕ್ತಿಗಳಿಗೆ ಪೂರೈಸುವ ಕೆಲಸ ಮಾಡುತ್ತಿದ್ದರು. ಪ್ರಾಥಮಿಕ ತನಿಖೆಯಲ್ಲಿ ನಕಲಿ ಸಿಮ್ ಪೂರೈಕೆ ಜಾಲ ಪತ್ತೆಯಾಗಿದ್ದು ಇದರ ಹಿಂದಿನ ಅಜೆಂಡಾ ಬಗ್ಗೆ ಕುತೂಹಲ ಉಂಟಾಗಿದೆ.
The Dharmasthala police at Dakshina Kannada in Karnataka have successfully dismantled an illegal operation involving the purchase of 42 SIM cards, suspected to be linked to a foreign currency transfer business. The accused, allegedly part of a clandestine network, were reportedly engaged in converting foreign currency into Indian rupees through online channels with the help of foreign intermediaries.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm