ಬ್ರೇಕಿಂಗ್ ನ್ಯೂಸ್
04-02-24 07:55 pm HK News Desk ಕ್ರೈಂ
ಹಾಸನ, ಫೆ.4: ಪಿಸ್ತೂಲ್ ಹಿಡಿದು ಒಂಟಿ ಮನೆಗೆ ನುಗ್ಗಿರುವ ಇಬ್ಬರು ದರೋಡೆಕೋರರು ಮನೆಯ ಗೋಡೆಗೆ ಗುಂಡು ಹಾರಿಸಿ ಮನೆಯಲ್ಲಿದ್ದ ಮಹಿಳೆ ಧರಿಸಿದ್ದ ಚಿನ್ನಾಭರಣಗಳನ್ನು ಬಲವಂತವಾಗಿ ಕಸಿದು ಎಸ್ಕೇಪ್ ಆಗಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಮುದಿಗೆರೆ ಕ್ರಾಸ್ನಲ್ಲಿ ನಡೆದಿದೆ.
ಗ್ರಾಮದ ರವಿ ಎಂಬವರು ಶನಿವಾರ ಸಂಜೆ ಮನೆ ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಮುಖಕ್ಕೆ ಕರವಸ್ತ್ರ ಹಾಕಿಕೊಂಡು ಇಬ್ಬರು ಕಳ್ಳರು ಮನೆಗೆ ನುಗ್ಗಿದ್ದಾರೆ. ಮನೆಯಲ್ಲಿ ರವಿ ಪತ್ನಿ ಶೃತಿ ಹಾಗೂ ಅವರ ತಾಯಿ ಚಂದ್ರಮ್ಮ ಇದ್ದು, ಅವರಿಗೆ ಪಿಸ್ತೂಲ್ ತೋರಿಸಿ ಮೈಮೇಲಿದ್ದ ಚಿನ್ನಾಭರಣ ನೀಡುವಂತೆ ಹೆದರಿಸಿದ್ದಾರೆ. ಚಿನ್ನಾಭರಣ ನೀಡದಿದ್ದಕ್ಕೆ ಗೋಡೆಗೆ ಗುಂಡು ಹಾರಿಸಿದ್ದಾರೆ. ಪಿಸ್ತೂಲ್ನಿಂದ ಫೈಯರ್ ಆಗುತ್ತಿದ್ದಂತೆ ಹೆದರಿದ ಶೃತಿ ತಮ್ಮ ಮಕ್ಕಳನ್ನು ರೂಂನಲ್ಲಿ ಕೂಡಿ ಹಾಕಿದ್ದಾರೆ. ಒಡವೆ ಕೊಡದಿದ್ದರೆ ಗುಂಡು ಹಾರಿಸುವುದಾಗಿ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ್ದು, ಈ ವೇಳೆ ಶೃತಿ ಮೈಮೇಲಿದ್ದ ಚಿನ್ನದ ತಾಳಿ, ಒಂದು ಜೊತೆ ಚಿನ್ನದ ಓಲೆ, ಎರಡು ಚಿನ್ನದ ಗುಂಡು ತೆಗೆದು ಕೊಟ್ಟಿದ್ದಾರೆ. ಬಳಿಕ ಅವರ ಮೊಬೈಲ್ ಕಸಿದುಕೊಂಡು ಕಳ್ಳರು ಪರಾರಿಯಾಗಿದ್ದಾರೆ.


ಪಿಸ್ತೂಲ್ ಶಬ್ದ ಕೇಳುತ್ತಿದ್ದಂತೆ ರವಿ ಮನೆಗೆ ಓಡಿ ಬಂದಿದ್ದು ಕಳ್ಳರನ್ನು ಹಿಡಿಯಲು ಮುಂದಾಗಿದ್ದಾರೆ. ಈ ವೇಳೆ ಮತ್ತೊಮ್ಮೆ ಗಾಳಿಯಲ್ಲಿ ಫೈಯರ್ ಮಾಡಿ ಕಳ್ಳರು ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಕಳ್ಳರು ಓಡಿ ಹೋಗುವ ದೃಶ್ಯ ಅಲ್ಲಿಯೇ ಸನಿಹ ಸಿಸಿಟಿಯಲ್ಲಿ ಸೆರೆಯಾಗಿದೆ. ಮನೆಗೆ ನುಗ್ಗಿದ ವೇಳೆ ಪಿಸ್ತೂಲ್ ತೋರಿಸಿ ಕನ್ನಡ ಭಾಷೆಯಲ್ಲೇ ಚಿನ್ನಾಭರಣ ನೀಡುವಂತೆ ಹೆದರಿಸಿದರು ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
Hassan robbers threaten people in home rob gold jewellery by showing pistol.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm