ಬ್ರೇಕಿಂಗ್ ನ್ಯೂಸ್
04-02-24 07:55 pm HK News Desk ಕ್ರೈಂ
ಹಾಸನ, ಫೆ.4: ಪಿಸ್ತೂಲ್ ಹಿಡಿದು ಒಂಟಿ ಮನೆಗೆ ನುಗ್ಗಿರುವ ಇಬ್ಬರು ದರೋಡೆಕೋರರು ಮನೆಯ ಗೋಡೆಗೆ ಗುಂಡು ಹಾರಿಸಿ ಮನೆಯಲ್ಲಿದ್ದ ಮಹಿಳೆ ಧರಿಸಿದ್ದ ಚಿನ್ನಾಭರಣಗಳನ್ನು ಬಲವಂತವಾಗಿ ಕಸಿದು ಎಸ್ಕೇಪ್ ಆಗಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಮುದಿಗೆರೆ ಕ್ರಾಸ್ನಲ್ಲಿ ನಡೆದಿದೆ.
ಗ್ರಾಮದ ರವಿ ಎಂಬವರು ಶನಿವಾರ ಸಂಜೆ ಮನೆ ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಮುಖಕ್ಕೆ ಕರವಸ್ತ್ರ ಹಾಕಿಕೊಂಡು ಇಬ್ಬರು ಕಳ್ಳರು ಮನೆಗೆ ನುಗ್ಗಿದ್ದಾರೆ. ಮನೆಯಲ್ಲಿ ರವಿ ಪತ್ನಿ ಶೃತಿ ಹಾಗೂ ಅವರ ತಾಯಿ ಚಂದ್ರಮ್ಮ ಇದ್ದು, ಅವರಿಗೆ ಪಿಸ್ತೂಲ್ ತೋರಿಸಿ ಮೈಮೇಲಿದ್ದ ಚಿನ್ನಾಭರಣ ನೀಡುವಂತೆ ಹೆದರಿಸಿದ್ದಾರೆ. ಚಿನ್ನಾಭರಣ ನೀಡದಿದ್ದಕ್ಕೆ ಗೋಡೆಗೆ ಗುಂಡು ಹಾರಿಸಿದ್ದಾರೆ. ಪಿಸ್ತೂಲ್ನಿಂದ ಫೈಯರ್ ಆಗುತ್ತಿದ್ದಂತೆ ಹೆದರಿದ ಶೃತಿ ತಮ್ಮ ಮಕ್ಕಳನ್ನು ರೂಂನಲ್ಲಿ ಕೂಡಿ ಹಾಕಿದ್ದಾರೆ. ಒಡವೆ ಕೊಡದಿದ್ದರೆ ಗುಂಡು ಹಾರಿಸುವುದಾಗಿ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ್ದು, ಈ ವೇಳೆ ಶೃತಿ ಮೈಮೇಲಿದ್ದ ಚಿನ್ನದ ತಾಳಿ, ಒಂದು ಜೊತೆ ಚಿನ್ನದ ಓಲೆ, ಎರಡು ಚಿನ್ನದ ಗುಂಡು ತೆಗೆದು ಕೊಟ್ಟಿದ್ದಾರೆ. ಬಳಿಕ ಅವರ ಮೊಬೈಲ್ ಕಸಿದುಕೊಂಡು ಕಳ್ಳರು ಪರಾರಿಯಾಗಿದ್ದಾರೆ.


ಪಿಸ್ತೂಲ್ ಶಬ್ದ ಕೇಳುತ್ತಿದ್ದಂತೆ ರವಿ ಮನೆಗೆ ಓಡಿ ಬಂದಿದ್ದು ಕಳ್ಳರನ್ನು ಹಿಡಿಯಲು ಮುಂದಾಗಿದ್ದಾರೆ. ಈ ವೇಳೆ ಮತ್ತೊಮ್ಮೆ ಗಾಳಿಯಲ್ಲಿ ಫೈಯರ್ ಮಾಡಿ ಕಳ್ಳರು ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಕಳ್ಳರು ಓಡಿ ಹೋಗುವ ದೃಶ್ಯ ಅಲ್ಲಿಯೇ ಸನಿಹ ಸಿಸಿಟಿಯಲ್ಲಿ ಸೆರೆಯಾಗಿದೆ. ಮನೆಗೆ ನುಗ್ಗಿದ ವೇಳೆ ಪಿಸ್ತೂಲ್ ತೋರಿಸಿ ಕನ್ನಡ ಭಾಷೆಯಲ್ಲೇ ಚಿನ್ನಾಭರಣ ನೀಡುವಂತೆ ಹೆದರಿಸಿದರು ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
Hassan robbers threaten people in home rob gold jewellery by showing pistol.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm