ಬ್ರೇಕಿಂಗ್ ನ್ಯೂಸ್
05-02-24 01:34 pm Mangalore Correspondent ಕ್ರೈಂ
ಮಂಗಳೂರು, ಫೆ.5: ಮಂಗಳೂರಿನಲ್ಲಿ ಮತ್ತೆ ನೈತಿಕ ಗೂಂಡಾಗಿರಿ ಪ್ರಕರಣ ನಡೆದಿದ್ದು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಯುವತಿ ಮತ್ತು ಕೇರಳ ಮೂಲದ ಮುಸ್ಲಿಂ ಯುವಕ ಪಣಂಬೂರು ಬೀಚ್ ನಲ್ಲಿ ಜೊತೆಗಿದ್ದಾಗ ಹಿಂದು ಸಂಘಟನೆ ಯುವಕರು ಹಲ್ಲೆಗೆ ಯತ್ನಿಸಿದ್ದಾರೆ.
ಘಟನೆ ಸಂಬಂಧಿಸಿ ಬೆಂಗಳೂರಿನ ಯುವತಿ ಪಣಂಬೂರು ಠಾಣೆಗೆ ದೂರು ನೀಡಿದ್ದು ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ್ದಾರೆ. ಬಂಟ್ವಾಳ ಪಿಲಾತಬೆಟ್ಟು ನಿವಾಸಿ ಪ್ರಶಾಂತ ಭಂಡಾರಿ (38), ಬೆಳ್ತಂಗಡಿ ಕರಾಯ ನಿವಾಸಿ ಉಮೇಶ್ (23), ಬೆಳ್ತಂಗಡಿ ಪುತ್ತಿಲ ನಿವಾಸಿ ಸುಧೀರ್ (26), ಬೆಳ್ತಂಗಡಿ ಮಚ್ಚಿನ ನಿವಾಸಿ ಕೀರ್ತನ್ ಪೂಜಾರಿ (20) ಬಂಧಿತರು. ಇವರನ್ನು ರಾಮಸೇನೆ ಸಂಘಟನೆ ಕಾರ್ಯಕರ್ತರು ಎಂದು ಗುರುತಿಸಲಾಗಿದೆ.
ಯುವಕ - ಯುವತಿ ಜೊತೆಗಿದ್ದಾಗ ಅವರನ್ನು ತಡೆದ ಯುವಕರು ಪ್ರಶ್ನಿಸಿದ್ದು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ್ದಲ್ಲದೆ ವಿಡಿಯೋ ಮಾಡಿದ್ದಾರೆ. ಆನಂತರ ಪಣಂಬೂರು ಪೊಲೀಸರು ಸ್ಥಳಕ್ಕಾಗಮಿಸಿ, ಪರಿಸ್ಥಿತಿ ತಿಳಿಗೊಳಿಸಿ ಹಿಂದು ಸಂಘಟನೆ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಯುವತಿ ಬೀಡಿದ ದೂರಿನಲ್ಲಿ, ಮಲ್ಪೆಗೆ ತೆರಳುತ್ತಿದ್ದಾಗ ಪರಿಚಯದ ಯುವಕ ಸಿಕ್ಕಿದ್ದು ಪಣಂಬೂರು ಬೀಚ್ ಗೆ ಭೇಟಿಯಾಗಿದ್ದೆ. ಆತನಿಗೆ ಸಾಹಿತ್ಯ ಕ್ಷೇತ್ರದಲ್ಲಿ ಪ್ರಶಸ್ತಿ ಬಂದಿದ್ದರಿಂದ ಅಭಿನಂದಿಸಲು ಹೋಗಿದ್ದೆ. ನಾವು ಜೊತೆಗೆ ಇದ್ದುದಕ್ಕೆ ಯುವಕರು ಬೈದು ಅಡ್ಡಗಟ್ಟಿ ನಮ್ಮ ಖಾಸಗಿತನಕ್ಕೆ ಧಕ್ಕೆ ತಂದಿದ್ದಾರೆ ಎಂದು ತಿಳಿಸಿದ್ದಾರೆ.
ಘಟನೆ ಕುರಿತು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇಂತಹ ಕೃತ್ಯ ಮರುಕಳಿಸದಂತೆ ಪಣಂಬೂರು ಬೀಚ್, ತಣ್ಣೀರುಬಾವಿ ಬೀಚ್ ಗಳಲ್ಲಿ ಪ್ರತಿ ನಿತ್ಯ ಹೆಚ್ಚುವರಿ ಸಿಬಂದಿ ನಿಯೋಜಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
Moral Policing in Mangalore at Panambur Beach, Four ram sena activist arrested. A Bangalore based Hindu girl was found with Kerala Muslim youth after which Ram Sena members have assulted them.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm