ಬ್ರೇಕಿಂಗ್ ನ್ಯೂಸ್
05-02-24 01:34 pm Mangalore Correspondent ಕ್ರೈಂ
ಮಂಗಳೂರು, ಫೆ.5: ಮಂಗಳೂರಿನಲ್ಲಿ ಮತ್ತೆ ನೈತಿಕ ಗೂಂಡಾಗಿರಿ ಪ್ರಕರಣ ನಡೆದಿದ್ದು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಯುವತಿ ಮತ್ತು ಕೇರಳ ಮೂಲದ ಮುಸ್ಲಿಂ ಯುವಕ ಪಣಂಬೂರು ಬೀಚ್ ನಲ್ಲಿ ಜೊತೆಗಿದ್ದಾಗ ಹಿಂದು ಸಂಘಟನೆ ಯುವಕರು ಹಲ್ಲೆಗೆ ಯತ್ನಿಸಿದ್ದಾರೆ.
ಘಟನೆ ಸಂಬಂಧಿಸಿ ಬೆಂಗಳೂರಿನ ಯುವತಿ ಪಣಂಬೂರು ಠಾಣೆಗೆ ದೂರು ನೀಡಿದ್ದು ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ್ದಾರೆ. ಬಂಟ್ವಾಳ ಪಿಲಾತಬೆಟ್ಟು ನಿವಾಸಿ ಪ್ರಶಾಂತ ಭಂಡಾರಿ (38), ಬೆಳ್ತಂಗಡಿ ಕರಾಯ ನಿವಾಸಿ ಉಮೇಶ್ (23), ಬೆಳ್ತಂಗಡಿ ಪುತ್ತಿಲ ನಿವಾಸಿ ಸುಧೀರ್ (26), ಬೆಳ್ತಂಗಡಿ ಮಚ್ಚಿನ ನಿವಾಸಿ ಕೀರ್ತನ್ ಪೂಜಾರಿ (20) ಬಂಧಿತರು. ಇವರನ್ನು ರಾಮಸೇನೆ ಸಂಘಟನೆ ಕಾರ್ಯಕರ್ತರು ಎಂದು ಗುರುತಿಸಲಾಗಿದೆ.
ಯುವಕ - ಯುವತಿ ಜೊತೆಗಿದ್ದಾಗ ಅವರನ್ನು ತಡೆದ ಯುವಕರು ಪ್ರಶ್ನಿಸಿದ್ದು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ್ದಲ್ಲದೆ ವಿಡಿಯೋ ಮಾಡಿದ್ದಾರೆ. ಆನಂತರ ಪಣಂಬೂರು ಪೊಲೀಸರು ಸ್ಥಳಕ್ಕಾಗಮಿಸಿ, ಪರಿಸ್ಥಿತಿ ತಿಳಿಗೊಳಿಸಿ ಹಿಂದು ಸಂಘಟನೆ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಯುವತಿ ಬೀಡಿದ ದೂರಿನಲ್ಲಿ, ಮಲ್ಪೆಗೆ ತೆರಳುತ್ತಿದ್ದಾಗ ಪರಿಚಯದ ಯುವಕ ಸಿಕ್ಕಿದ್ದು ಪಣಂಬೂರು ಬೀಚ್ ಗೆ ಭೇಟಿಯಾಗಿದ್ದೆ. ಆತನಿಗೆ ಸಾಹಿತ್ಯ ಕ್ಷೇತ್ರದಲ್ಲಿ ಪ್ರಶಸ್ತಿ ಬಂದಿದ್ದರಿಂದ ಅಭಿನಂದಿಸಲು ಹೋಗಿದ್ದೆ. ನಾವು ಜೊತೆಗೆ ಇದ್ದುದಕ್ಕೆ ಯುವಕರು ಬೈದು ಅಡ್ಡಗಟ್ಟಿ ನಮ್ಮ ಖಾಸಗಿತನಕ್ಕೆ ಧಕ್ಕೆ ತಂದಿದ್ದಾರೆ ಎಂದು ತಿಳಿಸಿದ್ದಾರೆ.
ಘಟನೆ ಕುರಿತು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇಂತಹ ಕೃತ್ಯ ಮರುಕಳಿಸದಂತೆ ಪಣಂಬೂರು ಬೀಚ್, ತಣ್ಣೀರುಬಾವಿ ಬೀಚ್ ಗಳಲ್ಲಿ ಪ್ರತಿ ನಿತ್ಯ ಹೆಚ್ಚುವರಿ ಸಿಬಂದಿ ನಿಯೋಜಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
Moral Policing in Mangalore at Panambur Beach, Four ram sena activist arrested. A Bangalore based Hindu girl was found with Kerala Muslim youth after which Ram Sena members have assulted them.
04-05-25 02:27 pm
Bangalore Correspondent
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
Karkala Mla Sunil Kumar, Parameshwar: ಆ್ಯಂಟಿ...
03-05-25 09:38 pm
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm