ಬ್ರೇಕಿಂಗ್ ನ್ಯೂಸ್
05-02-24 01:34 pm Mangalore Correspondent ಕ್ರೈಂ
ಮಂಗಳೂರು, ಫೆ.5: ಮಂಗಳೂರಿನಲ್ಲಿ ಮತ್ತೆ ನೈತಿಕ ಗೂಂಡಾಗಿರಿ ಪ್ರಕರಣ ನಡೆದಿದ್ದು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಯುವತಿ ಮತ್ತು ಕೇರಳ ಮೂಲದ ಮುಸ್ಲಿಂ ಯುವಕ ಪಣಂಬೂರು ಬೀಚ್ ನಲ್ಲಿ ಜೊತೆಗಿದ್ದಾಗ ಹಿಂದು ಸಂಘಟನೆ ಯುವಕರು ಹಲ್ಲೆಗೆ ಯತ್ನಿಸಿದ್ದಾರೆ.
ಘಟನೆ ಸಂಬಂಧಿಸಿ ಬೆಂಗಳೂರಿನ ಯುವತಿ ಪಣಂಬೂರು ಠಾಣೆಗೆ ದೂರು ನೀಡಿದ್ದು ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ್ದಾರೆ. ಬಂಟ್ವಾಳ ಪಿಲಾತಬೆಟ್ಟು ನಿವಾಸಿ ಪ್ರಶಾಂತ ಭಂಡಾರಿ (38), ಬೆಳ್ತಂಗಡಿ ಕರಾಯ ನಿವಾಸಿ ಉಮೇಶ್ (23), ಬೆಳ್ತಂಗಡಿ ಪುತ್ತಿಲ ನಿವಾಸಿ ಸುಧೀರ್ (26), ಬೆಳ್ತಂಗಡಿ ಮಚ್ಚಿನ ನಿವಾಸಿ ಕೀರ್ತನ್ ಪೂಜಾರಿ (20) ಬಂಧಿತರು. ಇವರನ್ನು ರಾಮಸೇನೆ ಸಂಘಟನೆ ಕಾರ್ಯಕರ್ತರು ಎಂದು ಗುರುತಿಸಲಾಗಿದೆ.
ಯುವಕ - ಯುವತಿ ಜೊತೆಗಿದ್ದಾಗ ಅವರನ್ನು ತಡೆದ ಯುವಕರು ಪ್ರಶ್ನಿಸಿದ್ದು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ್ದಲ್ಲದೆ ವಿಡಿಯೋ ಮಾಡಿದ್ದಾರೆ. ಆನಂತರ ಪಣಂಬೂರು ಪೊಲೀಸರು ಸ್ಥಳಕ್ಕಾಗಮಿಸಿ, ಪರಿಸ್ಥಿತಿ ತಿಳಿಗೊಳಿಸಿ ಹಿಂದು ಸಂಘಟನೆ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಯುವತಿ ಬೀಡಿದ ದೂರಿನಲ್ಲಿ, ಮಲ್ಪೆಗೆ ತೆರಳುತ್ತಿದ್ದಾಗ ಪರಿಚಯದ ಯುವಕ ಸಿಕ್ಕಿದ್ದು ಪಣಂಬೂರು ಬೀಚ್ ಗೆ ಭೇಟಿಯಾಗಿದ್ದೆ. ಆತನಿಗೆ ಸಾಹಿತ್ಯ ಕ್ಷೇತ್ರದಲ್ಲಿ ಪ್ರಶಸ್ತಿ ಬಂದಿದ್ದರಿಂದ ಅಭಿನಂದಿಸಲು ಹೋಗಿದ್ದೆ. ನಾವು ಜೊತೆಗೆ ಇದ್ದುದಕ್ಕೆ ಯುವಕರು ಬೈದು ಅಡ್ಡಗಟ್ಟಿ ನಮ್ಮ ಖಾಸಗಿತನಕ್ಕೆ ಧಕ್ಕೆ ತಂದಿದ್ದಾರೆ ಎಂದು ತಿಳಿಸಿದ್ದಾರೆ.
ಘಟನೆ ಕುರಿತು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇಂತಹ ಕೃತ್ಯ ಮರುಕಳಿಸದಂತೆ ಪಣಂಬೂರು ಬೀಚ್, ತಣ್ಣೀರುಬಾವಿ ಬೀಚ್ ಗಳಲ್ಲಿ ಪ್ರತಿ ನಿತ್ಯ ಹೆಚ್ಚುವರಿ ಸಿಬಂದಿ ನಿಯೋಜಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
Moral Policing in Mangalore at Panambur Beach, Four ram sena activist arrested. A Bangalore based Hindu girl was found with Kerala Muslim youth after which Ram Sena members have assulted them.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 09:29 pm
HK News Staffer
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm