ಬ್ರೇಕಿಂಗ್ ನ್ಯೂಸ್
05-02-24 03:46 pm HK News Desk ಕ್ರೈಂ
ಕುಷ್ಟಗಿ, ಫೆ 05: ತಾಲೂಕಿನ ಕುಷ್ಟಗಿ-ಗಜೇಂದ್ರಗಡ ರಸ್ತೆ ಹಿರೇನಂದಿಹಾಳ ಸೀಮಾದ ಕುಷ್ಟಗಿ-ಗಜೇಂದ್ರಗಡ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಕೇಂದ್ರ ಸರ್ಕಾರದ ಅನುದಾನದಲ್ಲಿ ನಿರ್ಮಾಣಗೊಂಡಿರುವ ಕಪಿಲ ತೀರ್ಥ ತೋಟಗಾರಿಕಾ ರೈತ ಉತ್ಪಾದಕರ ಘಟಕದ ಉಗ್ರಾಣದಲ್ಲಿ ಸಂಗ್ರಹಿಸಿಟ್ಟಿದ್ದ 80 ಕ್ವಿಂಟಲ್ ಮೆಕ್ಕೆಜೋಳ ಉತ್ಪನ್ನವನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದೆ.
ಕಪಿಲತೀರ್ಥ ರೈತ ಉತ್ಪಾದಕರ ಘಟಕದಲ್ಲಿ ಗೋಡೌನ್ 500 ಚೀಲಗಳು ಹಾಗೂ 200 ಚೀಗಳು ಪ್ರತ್ಯೇಕವಾಗಿ ಸಂಗ್ರಹಿಸಿಡಲಾಗಿತ್ತು. ಲಾರಿಯೊಂದಿಗೆ ಆಗಮಿಸಿದ ಕಳ್ಳರು, ಗೋಡೌನ್ ಹಿಂಬದಿಯ ಕಿಟಕಿ ಎಕ್ಸೆಲ್ ಬ್ಲೇಡ್ ನಿಂದ ಕೊರೆದು ಒಳ ನುಗ್ಗಿದ್ದಾರೆ.
ನಂತರ ಮುಖ್ಯ ದ್ವಾರದ ಶೆಟರ್ ಎತ್ತಿ ಒಟ್ಟು 124 ಚೀಲಗಳ ಅಂದಾಜು 80 ಕ್ವಿಂಟಲ್ ಮೆಕ್ಕೆಜೋಳ ಲಾರಿಗೆ ಲೋಡ್ ಮಾಡಿಕೊಂಡು ಹೋಗಿದ್ದಾರೆ. ಹೋಗುವಾಗ ಅಳವಡಿಸಿದ ನಾಲ್ಕು ಸಿಸಿ ಕ್ಯಾಮರಾ ಹಾಗೂ ಡಿವೈಸ್ ಸಹ ಕದ್ದೊಯ್ದಿದ್ದಾರೆ. ಈ ಕಳ್ಳತನ ಪ್ರಕರಣದ ಹಿನ್ನೆಲೆ ಸ್ಥಳೀಯರ ಕೈವಾಡದ ಶಂಕೆ ಸಾರ್ವಜನಿಕವಾಗಿ ವ್ಯಕ್ತವಾಗಿದೆ.
ಸಿಪಿಐ ಯಶವಂತ ಬಿಸನಳ್ಳಿ, ಪಿಎಸ್ಐ ಮುದ್ದುರಂಗಸ್ವಾಮಿ ಭೇಟಿ ನೀಡಿ ಸ್ಥಾನಿಕ ಪರಿಶೀಲನೆ ನಡೆಸಿ, ಶ್ವಾನ ದಳ ಕರೆಸಿ ಕಳ್ಳರ ಪತ್ತೆಗೆ ಕ್ರಮಕ್ಕೆ ಮುಂದಾಗಿದ್ದಾರೆ.
ಕಪಿಲತೀರ್ಥ ರೈತರ ಉತ್ಪಾದನಾ ಘಟಕದ ಅಧ್ಯಕ್ಷ ಶರಣಗೌಡ ಪಾಟೀಲ ಪ್ರತಿಕ್ರಿಯಿಸಿ, ಕೇಂದ್ರ ಸರ್ಕಾರದ ಅನುದಾನದಲ್ಲಿ ನಿರ್ಮಾಣಗೊಂಡಿರುವ ರೈತರ ಉತ್ಪನ್ನ ಘಟಕದಲ್ಲಿ ಈ ಮೊದಲು ಕಾವಲುಗಾರರನ್ನು ನೇಮಿಸಿಕೊಂಡಿತ್ತು. ಆದರೆ ಅವರಿಗೆ ವೇತನ ಜಾಸ್ತಿ ಕೇಳಿದ್ದರಿಂದ 30 ಸಾವಿರ ರೂ. ವೆಚ್ಚ ಮಾಡಿ ಸಿಸಿ ಕ್ಯಾಮರಾ ಅಳವಡಿಸಲಾಗಿತ್ತು.
ಆದರೆ ಸಿಸಿ ಕ್ಯಾಮರಾ ಕಿಟ್ ಅನ್ನು ಕದ್ದೊಯ್ದಿರುವುದು ಹಾಗೂ ಮೆಕ್ಕೆಜೋಳ ಉತ್ಪನ್ನ ಸೇರಿದಂತೆ ಒಟ್ಟು 2.50 ಲಕ್ಷ ರೂ. ಮೌಲ್ಯದ ವಸ್ತುಗಳು ಕಳವಾಗಿದೆ.
ಗೋಡೌನ್ ನಲ್ಲಿ 200 ಚೀಲದಲ್ಲಿ 109 ಚೀಲಗಳು ಹಾಗೂ 500 ಚೀಲಗಳಲ್ಲಿ 15 ಚೀಲ ಕಳವಾಗಿದೆ ಎಂದು ತಿಳಿಸಿದ್ದಾರೆ.
Kushtagi thieves steal 80 quintals of rice bags from godown coming by truck. Police are now investigating the case.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm