ಬ್ರೇಕಿಂಗ್ ನ್ಯೂಸ್
06-02-24 01:19 pm Bangalore Correspondent ಕ್ರೈಂ
ಬೆಂಗಳೂರು, ಫೆ.06: ಕ್ಷುಲ್ಲಕ ವಿಚಾರಕ್ಕೆ ತಾಯಿಯೊಂದಿಗೆ ಜಗಳವಾಡಿದ ಮಗ ರಾಡಿನಿಂದ ಹೊಡೆದು ಕೊಲೆ ಮಾಡಿದ್ದ ಘಟನೆ 3-4 ದಿನಗಳ ಹಿಂದೆ ಕೆ.ಆರ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಕೊಲೆಗೆ ಈಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ತನಿಖೆ ವೇಳೆ ಈ ಕೊಲೆಯಲ್ಲಿ ತಂದೆಯೂ ಶಾಮೀಲಾಗಿದ್ದ ಅಂಶ ಬಯಲಾಗಿದೆ. ಕೊಲೆಗೆ ಬಳಸಲಾಗಿದ್ದ ರಾಡ್ನಲ್ಲಿ 2 ರೀತಿಯ ಫಿಂಗರ್ ಪ್ರಿಂಟ್ ಪತ್ತೆಯಾಗಿದ್ದು ತಂದೆ-ಮಗ ಸೇರಿಕೊಂಡು ಮಹಿಳೆಯನ್ನು ಕೊಲೆ ಮಾಡಿರುವುದು ಬಯಲಾಗಿದೆ.
ಫೆಬ್ರವರಿ 2ರಂದು ಕೆ.ಆರ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ನಡೆದಿತ್ತು. ಕ್ಷುಲ್ಲಕ ವಿಚಾರಕ್ಕೆ ತಾಯಿಯೊಂದಿಗೆ ಜಗಳವಾಡಿದ ಮಗ ರಾಡಿನಿಂದ ಹೊಡೆದು ಕೊಲೆ ಮಾಡಿದ್ದ. ಕೊಲೆಯ ತನಿಖೆ ನಡೆಸಿದ ಪೊಲೀಸರಿಗೆ ಮತ್ತೋರ್ವ ಕೊಲೆ ಆರೋಪಿ ಇರುವುದು ಬಯಲಾಗಿದೆ. ಕೊಲೆಗೆ ಬಳಸಲಾಗಿದ್ದ ರಾಡ್ ಮೇಲೆ 2 ರೀತಿಯ ಫಿಂಗರ್ ಪ್ರಿಂಟ್ಗಳು ಪತ್ತೆಯಾಗಿದ್ದವು. ಇದರಿಂದ ಅನುಮಾನಗೊಂಡ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದರು. ಆಗ ರಾಡ್ ನ ಎಫ್ಎಸ್ಎಲ್ಗೆ ಕಳುಹಿಸಿದಾಗ ರಾಡ್ ಮೇಲೆ ಇರುವುದು ಮಗ ಹಾಗೂ ತಂದೆಯ ಫಿಂಗರ್ ಪ್ರಿಂಟ್ ಎಂಬುವುದು ಬಯಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಕೊಲೆಯಾದ ನೇತ್ರಾಳ ಗಂಡ ಚಂದ್ರಪ್ಪನನ್ನು ಕೆ.ಆರ್. ಪುರಂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆಗ ಕೊಲೆಯ ಸತ್ಯ ಬಯಲಾಗಿದೆ.
ವಿಚಾರಣೆ ಮಾಡಿದಾಗ ಆರೋಪಿ ಕೊಲೆಗೆ ನಿಖರ ಕಾರಣ ಬಾಯಿಬಿಟ್ಟಿದ್ದಾನೆ. ಕೊಲೆಯಾದ ನೇತ್ರಾಳಿಗೆ ಅಕ್ರಮ ಸಂಬಂಧದ ಜೊತೆಗೆ ಕುಡಿತದ ಚಟ ಇತ್ತು. ಕೆಲವೊಮ್ಮೆ ಎರಡು ಮೂರು ದಿನಗಳ ಕಾಲ ಮನೆಗೆ ಬರ್ತಾ ಇರಲಿಲ್ಲ. ನಾವು ಊಟ ಇಲ್ಲದೆ ಉಪವಾಸ ಇರ್ತಾ ಇದ್ವಿ. ಹೀಗಾಗಿ ಮಗನ ಜೊತೆ ಸೇರಿ ಕೊಲೆ ಮಾಡಲು ನಿರ್ಧಾರ ಮಾಡಿದೆ ಎಂದು ಚಂದ್ರಪ್ಪ ಬಾಯ್ಬಿಟ್ಟಿದ್ದಾನೆ.
ಅಪ್ಪ ಜೈಲಿಗೆ ಹೋಗೋದು ಬೇಡ ಎಂದು ತಾನು ಜೈಲು ಸೇರಿದ ಮಗ ;
ಇನ್ನು ಅಪ್ಪ-ಮಗ ಸೇರಿಕೊಂಡು ತಾಯಿಯ ಕೊಲೆ ಮಾಡಿದ್ದಾರೆ. ಕೊಲೆ ಆದ ಬಳಿಕ ತಂದೆಯ ಬಗ್ಗೆ ಯೋಚನೆ ಮಾಡಿದ್ದ ಅಪ್ರಾಪ್ತ ಮಗ, ತಂದೆ ಜೈಲಿಗೆ ಹೋಗೋದು ಬೇಡ ಎಂದು ಕೊಲೆಯನ್ನ ತನ್ನ ಮೇಲೆಯೇ ಹಾಕಿಕೊಂಡಿದ್ದಾನೆ. ತಂದೆ ರಾಡ್ ನಿಂದ ಹೊಡೆದ ಬಳಿಕ ಮಗನೂ ಒಂದೆರಡು ಏಟು ಹೊಡೆದಿದ್ದಾನೆ. ಸತ್ತಿರೋದು ಕನ್ಫರ್ಮ್ ಆದ ಬಳಿಕ ಚಂದ್ರಪ್ಪ ಅಲ್ಲಿಂದ ಎಸ್ಕೇಪ್ ಆಗಿದ್ದ. ಫ್ಲಾನ್ ನಂತೆ ಮಗ ಕೆ.ಆರ್. ಪುರಂ ಠಾಣೆಗೆ ಹೋಗಿ ಸರೆಂಡರ್ ಆಗಿದ್ದಾನೆ.
ಜೈಲಿಗೆ ಹೋದ್ರೂ ಒಳ್ಳೆಯ ಎಜುಕೇಷನ್ ಸಿಗುತ್ತೆ ಅಂದಿದ್ದ ಮಗ ;
ಕೊಲೆ ಮಾಡಿದ ಬಳಿಕ ಅಪ್ಪ-ಮಗ ಇಬ್ಬರೂ ಕುಂತು ಪ್ಲಾನ್ ಮಾಡಿದ್ದಾರೆ. ಅಪ್ರಾಪ್ತರು ಜೈಲಿಗೆ ಹೋದರೆ ಶಿಕ್ಷೆ ಕಡಿಮೆ ಇರುತ್ತೆ, ಜೊತೆಗೆ ಅವರೇ ವಿದ್ಯಾಭ್ಯಾಸ ಕೊಡಿಸ್ತಾರೆ ಎಂದು ಅಪ್ಪನನ್ನು ಮಗ ಓಲೈಸಿದ್ದ. ನಾನು ಹೊರಗಡೆ ಬರೋ ಅಷ್ಟರಲ್ಲಿ ನೀನು ಚೆನ್ನಾಗಿ ಹಣ ಮಾಡಿಕೊಂಡಿರು ಎಂದು ಹೇಳಿ ತಂದೆಗೆ ಕೊಲೆಯಾದ ಸ್ಥಳದಿಂದ ಹೋಗಲು ಹೇಳಿ ಅಪ್ರಾಪ್ತ ಬಾಲಕನೇ ಠಾಣೆಗೆ ಬಂದು ಸರೆಂಡರ್ ಆಗಿದ್ದ. ಆದರೆ ಈಗ ಅಪ್ಪ ಕೂಡ ಜೈಲು ಸೇರಿದ್ದಾನೆ.
Mother killed by Son and husband over extramarital affair at k r param in Bangalore. After killing the mother son surrendered to the police saying that he killed her mother. But the fingerprints on the iron rod made it clear that even the husband was involved in the kind
19-03-25 12:44 pm
Bangalore Correspondent
ಸೌಜನ್ಯಾ ಪ್ರಕರಣ ; ನ್ಯಾಯಕ್ಕಾಗಿ ಆಗ್ರಹಿಸಿ ಧರ್ಮಸ್ಥ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
Bangalore JCB Accident, Two Killed; ರಸ್ತೆ ಕಾಮ...
18-03-25 02:30 pm
19-03-25 02:10 pm
HK News Desk
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
18-03-25 10:09 pm
Mangalore Correspondent
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am