ಬ್ರೇಕಿಂಗ್ ನ್ಯೂಸ್
07-02-24 01:39 pm Mangalore Correspondent ಕ್ರೈಂ
ಪುತ್ತೂರು, ಫೆ.7: ನೆಲ್ಯಾಡಿಯ ಕಾಮಧೇನು ಮಹಿಳಾ ಸಹಕಾರ ಸಂಘ ಹಾಗೂ ಉಪ್ಪಿನಂಗಡಿಯ ಒಡಿಯೂರು ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ ಶಾಖೆಯಲ್ಲಿ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಸಾಲ ಪಡೆದು ವಂಚಿಸಿರುವ ಆರೋಪಿಗಳು ಆಲಂಕಾರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಶಾಖೆಯಲ್ಲೂ ವಂಚಿಸಿರುವುದು ಬೆಳಕಿಗೆ ಬಂದಿದೆ.
ಆರೋಪಿ ಸೆಬಾಸ್ಟಿಯನ್ ಜ.30ರಂದು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ಆಲಂಕಾರು ಶಾಖೆಗೆ ಬಂದು ಮೇಲ್ನೋಟಕ್ಕೆ ನಕಲಿಯೆಂದು ಕಂಡುಬಾರದ 30.200 ಗ್ರಾಮ್ ತೂಕದ ನಾಲ್ಕು ಚಿನ್ನದ ಬಳೆಗಳನ್ನು ಅಡಮಾನ ಇರಿಸಿ 1.35 ಲಕ್ಷ ರೂ. ಸಾಲ ಪಡೆದು ವಂಚಿಸಿರುವುದು ಪತ್ತೆಯಾಗಿದೆ. ಈ ಬಗ್ಗೆ ಸಂಘದ ಆಲಂಕಾರು ಶಾಖಾ ಪ್ರಬಂಧಕಿ ರೇವತಿ ನೀಡಿದ ದೂರಿನ ಮೇರೆಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆಲ್ಯಾಡಿ ನಿವಾಸಿ ಸೆಬಾಸ್ಟಿಯನ್ ಹಾಗೂ ಕೇರಳ ಮೂಲದ ಡ್ಯಾನಿಶ್ ಜ.27ರಂದು ನೆಲ್ಯಾಡಿಯ ಕಾಮಧೇನು ಮಹಳಾ ಸಹಕಾರಿ ಸಂಘದಲ್ಲಿ 30 ಗ್ರಾಮ್ ತೂಕದ ನಾಲ್ಕು ಚಿನ್ನದ ಬಳೆಗಳನ್ನು ಅಡಮಾನವಿರಿಸಿ 1.40 ಲಕ್ಷ ರೂ. ಪಡೆದು ವಂಚಿಸಿರುವುದಾಗಿ ಸಂಘದ ವ್ಯವಸ್ಥಾಪಕಿ ಚೈತನ್ಯ ಸಿ.ಎಚ್. ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಆರೋಪಿಗಳು ಜ.31ರಂದು ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಉಪ್ಪಿನಂಗಡಿ ಶಾಖೆಗೆ ಬಂದು 40 ಗ್ರಾಮ್ ತೂಕದ 5 ನಕಲಿ ಬಳೆಗಳನ್ನು ಅಡಮಾನ ಇರಿಸಿ 1.70 ಲಕ್ಷ ರೂ. ಸಾಲ ಪಡೆದು ವಂಚಿಸಿರುವುದಾಗಿ ಶಾಖಾ ವ್ಯವಸ್ಥಾಪಕಿ ಕಮನ ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ಇನ್ನಷ್ಟು ಸಹಕಾರ ಸಂಘಗಳಲ್ಲಿ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ವಂಚಿಸಿರುವ ಸಾಧ್ಯತೆಯಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ವಿಷಯ ಹೊರ ಬರುತ್ತಿದ್ದಂತೆ ಕೆಲವು ಸೊಸೈಟಿಯವರು ತಮ್ಮಲ್ಲಿಯೂ ವಂಚನೆ ಎಸಗಿರುವ ಬಗ್ಗೆ ದೂರು ಹಿಡಿದು ಮುಂದೆ ಬಂದಿದ್ದಾರೆ.
Kadaba Fake gold pledge to banks for laon, two from kerala arrested.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm