ಬ್ರೇಕಿಂಗ್ ನ್ಯೂಸ್
07-02-24 04:32 pm HK News Desk ಕ್ರೈಂ
ಮೈಸೂರು, ಫೆ 07: ಸಾಲ ತೀರಿಸಲು ಹಣ ನೀಡದ ಪತ್ನಿಯನ್ನು ಪತಿಯೇ ಕತ್ತು ಹಿಸುಕಿ ಕೊಲೆ ಮಾಡಿದ್ದ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಆರೋಪಿ ಪತಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಡ್ಯ ಜಿಲ್ಲೆಯ ಅಕ್ಬರ್ ಆಲಿಯನ್ನು ನವೀದಾ 13 ವರ್ಷಗಳ ಹಿಂದೆ ವಿವಾಹವಾಗಿದ್ದರು. ಮೈಸೂರಿನ ರಾಜೀವ್ ನಗರದಲ್ಲಿ ಮೂರು ಮಕ್ಕಳೊಂದಿಗೆ ಸಂಸಾರ ನೆಲೆಸಿತ್ತು. ಮಂಡ್ಯದಲ್ಲಿ ಆಟೋ ಓಡಿಸುತ್ತಿದ್ದ ಅಕ್ಬರ್ ಆಲಿಗೆ ಹೃದಯಾಘಾತವಾದ ಹಿನ್ನಲೆ ಪತ್ನಿ ಮನೆಯವರು ಚಿಕಿತ್ಸೆ ಕೊಡಿಸಿ ಬದುಕಿಸಿಕೊಂಡಿದ್ದರು. ನಂತರ ಗೂಡ್ಸ್ ಆಟೋ, ಪ್ರಾವಿಷನ್ ಸ್ಟೋರ್ಸ್, ಆಟೋ ಮೊಬೈಲ್ಸ್ ಅಂಗಡಿ ಹೀಗೆ ಹಲವು ವ್ಯಾಪಾರ ಮಾಡಲು ಅಕ್ಬರ್ ಆಲಿಗೆ ಪತ್ನಿ ನವೀದಾ ಮನೆಯವರು ಆರ್ಥಿಕ ಸಹಾಯ ನೀಡಿದ್ದರು. ಎಲ್ಲಾ ಬಂಡವಾಳವನ್ನು ಬಳಸಿಕೊಂಡಿದ್ದರೂ ಸಹ ಅಕ್ಬರ್ ಆಲಿ ಮತ್ತಷ್ಟು ಸಾಲಗಾರನಾಗಿದ್ದ.
ನವೀದಾ ರವರು ನಡೆಸುತ್ತಿದ್ದ ಪುಟ್ಟ ಅಂಗಡಿಯಲ್ಲಿ ದುಡಿದು ಗಂಡನ ಸಾಲ ತೀರಿಸುತ್ತಿದ್ದರು. ಒಂದೆಡೆ ಸಾಲ ತೀರಿಸಿದರೆ ಮತ್ತೊಂದೆಡೆ ಸಾಲ ಮಾಡುತ್ತಿದ್ದ ಪತಿ ಜೊತೆ ಪತ್ನಿ ಆಗಾಗ ಗಲಾಟೆ ಮಾಡುತ್ತಿದ್ದರು. ರವಿವಾರ ಇದೇ ವಿಚಾರದಲ್ಲಿ ಗಲಾಟೆ ಆಗಿದೆ. ಇದ್ದಕ್ಕಿದ್ದಂತೆ ನವೀದಾ ರವರು ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಅಕ್ಬರ್ ಆಲಿಯನ್ನು ಪ್ರಶ್ನಿಸಿದಾಗ ತಂದೆ ಮನೆಗೆ ಹೋಗಿದ್ದಾಳೆ, ಅಂಗಡಿಯಲ್ಲಿ ಇದ್ದಾಳೆ ಎಂದು ಉತ್ತರ ನೀಡುತ್ತಿದ್ದ. ಅಕ್ಕಪಕ್ಕದ ಮನೆಯವರನ್ನು ಕೇಳಿದಾಗ ಇಬ್ಬರ ನಡುವೆ ನಡೆದ ಗಲಾಟೆ ವಿಚಾರ ತಿಳಿಸಿದರು. ಅನುಮಾನಗೊಂಡು ಬೀಗ ಹಾಕಿದ್ದ ಮನೆ ಬಾಗಿಲನ್ನು ಒಡೆದು ನೋಡಿದಾಗ ನವೀದಾ ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕುತ್ತಿಗೆ ಮೇಲೆ ಗಾಯದ ಗುರುತುಗಳು ಕಂಡು ಬಂದಿದೆ.
ಈ ಸಂಭಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಅಕ್ಬರ್ ಆಲಿಯನ್ನು ಬಂಧಿಸಿದ್ದಾರೆ
In a shocking incident, a man allegedly killed his wife at Rajiv Nagar in Mysuru. Naveeda is dead. Akbar Ali is an accused in the murder. The accused's husband, Akbar Ali, has been taken into custody by the police. Akbar Ali, a native of Mandya (Mandya), was an auto driver. Naveeda and Akbar Ali have been married for 13 years. The couple had three children and lived in Rajiv Nagar, Mysuru.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm