ಬ್ರೇಕಿಂಗ್ ನ್ಯೂಸ್
07-02-24 04:32 pm HK News Desk ಕ್ರೈಂ
ಮೈಸೂರು, ಫೆ 07: ಸಾಲ ತೀರಿಸಲು ಹಣ ನೀಡದ ಪತ್ನಿಯನ್ನು ಪತಿಯೇ ಕತ್ತು ಹಿಸುಕಿ ಕೊಲೆ ಮಾಡಿದ್ದ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಆರೋಪಿ ಪತಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಡ್ಯ ಜಿಲ್ಲೆಯ ಅಕ್ಬರ್ ಆಲಿಯನ್ನು ನವೀದಾ 13 ವರ್ಷಗಳ ಹಿಂದೆ ವಿವಾಹವಾಗಿದ್ದರು. ಮೈಸೂರಿನ ರಾಜೀವ್ ನಗರದಲ್ಲಿ ಮೂರು ಮಕ್ಕಳೊಂದಿಗೆ ಸಂಸಾರ ನೆಲೆಸಿತ್ತು. ಮಂಡ್ಯದಲ್ಲಿ ಆಟೋ ಓಡಿಸುತ್ತಿದ್ದ ಅಕ್ಬರ್ ಆಲಿಗೆ ಹೃದಯಾಘಾತವಾದ ಹಿನ್ನಲೆ ಪತ್ನಿ ಮನೆಯವರು ಚಿಕಿತ್ಸೆ ಕೊಡಿಸಿ ಬದುಕಿಸಿಕೊಂಡಿದ್ದರು. ನಂತರ ಗೂಡ್ಸ್ ಆಟೋ, ಪ್ರಾವಿಷನ್ ಸ್ಟೋರ್ಸ್, ಆಟೋ ಮೊಬೈಲ್ಸ್ ಅಂಗಡಿ ಹೀಗೆ ಹಲವು ವ್ಯಾಪಾರ ಮಾಡಲು ಅಕ್ಬರ್ ಆಲಿಗೆ ಪತ್ನಿ ನವೀದಾ ಮನೆಯವರು ಆರ್ಥಿಕ ಸಹಾಯ ನೀಡಿದ್ದರು. ಎಲ್ಲಾ ಬಂಡವಾಳವನ್ನು ಬಳಸಿಕೊಂಡಿದ್ದರೂ ಸಹ ಅಕ್ಬರ್ ಆಲಿ ಮತ್ತಷ್ಟು ಸಾಲಗಾರನಾಗಿದ್ದ.
ನವೀದಾ ರವರು ನಡೆಸುತ್ತಿದ್ದ ಪುಟ್ಟ ಅಂಗಡಿಯಲ್ಲಿ ದುಡಿದು ಗಂಡನ ಸಾಲ ತೀರಿಸುತ್ತಿದ್ದರು. ಒಂದೆಡೆ ಸಾಲ ತೀರಿಸಿದರೆ ಮತ್ತೊಂದೆಡೆ ಸಾಲ ಮಾಡುತ್ತಿದ್ದ ಪತಿ ಜೊತೆ ಪತ್ನಿ ಆಗಾಗ ಗಲಾಟೆ ಮಾಡುತ್ತಿದ್ದರು. ರವಿವಾರ ಇದೇ ವಿಚಾರದಲ್ಲಿ ಗಲಾಟೆ ಆಗಿದೆ. ಇದ್ದಕ್ಕಿದ್ದಂತೆ ನವೀದಾ ರವರು ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಅಕ್ಬರ್ ಆಲಿಯನ್ನು ಪ್ರಶ್ನಿಸಿದಾಗ ತಂದೆ ಮನೆಗೆ ಹೋಗಿದ್ದಾಳೆ, ಅಂಗಡಿಯಲ್ಲಿ ಇದ್ದಾಳೆ ಎಂದು ಉತ್ತರ ನೀಡುತ್ತಿದ್ದ. ಅಕ್ಕಪಕ್ಕದ ಮನೆಯವರನ್ನು ಕೇಳಿದಾಗ ಇಬ್ಬರ ನಡುವೆ ನಡೆದ ಗಲಾಟೆ ವಿಚಾರ ತಿಳಿಸಿದರು. ಅನುಮಾನಗೊಂಡು ಬೀಗ ಹಾಕಿದ್ದ ಮನೆ ಬಾಗಿಲನ್ನು ಒಡೆದು ನೋಡಿದಾಗ ನವೀದಾ ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕುತ್ತಿಗೆ ಮೇಲೆ ಗಾಯದ ಗುರುತುಗಳು ಕಂಡು ಬಂದಿದೆ.
ಈ ಸಂಭಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಅಕ್ಬರ್ ಆಲಿಯನ್ನು ಬಂಧಿಸಿದ್ದಾರೆ
In a shocking incident, a man allegedly killed his wife at Rajiv Nagar in Mysuru. Naveeda is dead. Akbar Ali is an accused in the murder. The accused's husband, Akbar Ali, has been taken into custody by the police. Akbar Ali, a native of Mandya (Mandya), was an auto driver. Naveeda and Akbar Ali have been married for 13 years. The couple had three children and lived in Rajiv Nagar, Mysuru.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm