ಬ್ರೇಕಿಂಗ್ ನ್ಯೂಸ್
07-02-24 11:12 pm Bengaluru Correspondent ಕ್ರೈಂ
ಬೆಂಗಳೂರು, ಫೆ 07: ಜಮೀನು ಕಬಳಿಸಿದ ಕೇಸ್ನಲ್ಲಿ ರಾಜಕೀಯ ಮುಖಂಡ ಜೇಡರಹಳ್ಳಿ ಕೃಷ್ಣಪ್ಪನನ್ನು ಬಂಧಿಸಲಾಗಿದೆ. ಬೆಂಗಳೂರಿನ ಬ್ಯಾಡರಹಳ್ಳಿ ಠಾಣೆ ಪೊಲೀಸರು ಕೃಷ್ಣಪ್ಪನನ್ನು ಬಂಧಿಸಿದ್ದಾರೆ. ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ಹೇರೋಹಳ್ಳಿ ಬಳಿ 16 ಎಕರೆ 37 ಗುಂಟೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಜಮೀನು ಕಬಳಿಸಿರೋ ಆರೋಪ ಜೇಡರಹಳ್ಳಿ ಕೃಷ್ಣಪ್ಪ ಮೇಲಿದೆ.
ಕೃಷ್ಣಪ್ಪ ವಿರುದ್ಧ ಶಂಕರಪ್ಪ ಎಂಬುವರು ದೂರು ನೀಡಿದ್ದು, ಅದರ ಅನ್ವಯ ಪೊಲೀಸರು ಜೇಡರಹಳ್ಳಿ ಕೃಷ್ಣಪ್ಪನನ್ನ ಅರೆಸ್ಟ್ ಮಾಡಿದ್ದಾರೆ.
16 ಎಕರೆ ಜಮೀನು ಕಬಳಿಸಿದ ಆರೋಪ ;
ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ಹೇರೋಹಳ್ಳಿ ಬಳಿ 16 ಎಕರೆ 37 ಗುಂಟೆ ಜಮೀನಿಗೆ ನಕಲಿ ದಾಖಲೆ ಸೃಷ್ಠಿ ಆರೋಪ ಇದೆ. ಅದು ಪಿತ್ರಾರ್ಜಿತ ಅಸ್ತಿಯಾಗಿದ್ದು, ಮರಣ ಹೊಂದಿದವರ ಹೆಸರನ್ನ ಕ್ರಿಯೆಟ್ ಮಾಡಿ ಆ ವ್ಯಕ್ತಿಯ ಮೂಲಕ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕ್ರಯ ಪತ್ರ ಮಾಡಿಸಿದ್ದಾರೆ ಅಂತ ಆರೋಪಿಸಲಾಗಿದೆ.
ಜೇಡರಹಳ್ಳಿ ಕೃಷ್ಣಪ್ಪ ಸೇರಿ 8 ಮಂದಿ ವಿರುದ್ಧ ಎಫ್ಐಆರ್ ;
ಶಂಕರಪ್ಪ ಎಂಬುವರ ಜಮೀನಿನ ಮೇಲೆ ನಕಲಿ ದಾಖಲೆ ಸೃಷ್ಠಿಸಿರೋ ಬಗ್ಹೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ದೂರು ದಾಖಲಿಸಿಕೊಂಡಿರುವ ಬ್ಯಾಡರಹಳ್ಳಿ ಠಾಣೆ ಪೊಲೀಸರು ಜೇಡರಹಳ್ಳಿ ಕೃಷ್ಣಪ್ಪ ಸೇರಿ ಎಂಟು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಬೇರೆಯವರ ಪಿತ್ರಾರ್ಜಿತ ಆಸ್ತಿ ಕಬಳಿಕೆ ;
ಬೆಂಗಳೂರು ಉತ್ತರ ತಾಲೂಕಿನ ಹೇರೋಹಳ್ಳಿ ಗ್ರಾಮದ ಜಮೀನಿನ ಮಾಲೀಕ ಶಂಕರಪ್ಪ ಎಂಬವರು, 16 ಎಕರೆ 37 ಗುಂಟೆ ಜಮೀನು ಹೊಂದಿದ್ದರಂತೆ. ಇದು ಶಂಕರಪ್ಪ ಅವರ ಪಿತ್ರಾರ್ಜಿತ ಆಸ್ತಿಯಾಗಿದ್ದು, ಇತ್ತೀಚಿಗೆ ಇದನ್ನು ಜೇಡರಹಳ್ಳಿ ಕೃಷ್ಣಪ್ಪ ಕಬಳಿಸಿದ್ದಾರೆ ಅಂತ ಆರೋಪಿಸಿದ್ದಾರೆ.
ಜಮೀನು ಕೆಲಸ ಮಾಡಿಸುತ್ತಿದ್ದಾಗ ಬೆದರಿಕೆ ;
ತಮ್ಮ ಪಾಲಿನ ನಾಲ್ಕು ಎಕರೆ 13 ಗುಂಟೆ ಜಾಗವನ್ನು ಕೃಷ್ಣಪ್ಪ ಅಭಿವೃದ್ಧಿ ಮಾಡಿಸ್ತಿದ್ರು. ಈ ನಡುವೆ ಅಲ್ಲಿಗೆ ಬಂದಿದ್ದ ಜೇಡರಹಳ್ಳಿ ಕೃಷ್ಣಪ್ಪ, ಗೋವಿಂದರಾಜು ಹಾಗೂ ಇತರರು ಶಂಕ್ರಪ್ಪಗೆ ಜೀವ ಬೆದರಿಕೆ ಹಾಕಿದ್ದಾರಂತೆ. ನಮ್ಮ ಹೆಸ್ರಲ್ಲಿ ಜಮೀನಿದೆ, ಅಭಿವೃದ್ಧಿ ಕೆಲಸ ನಿಲ್ಲಿಸಿ, ಜಾಗ ಖಾಲಿ ಮಾಡುವಂತೆ ಬೆದರಿಕೆ ಹಾಕಿದ್ರಂತೆ.
ಜೇಡರಹಳ್ಳಿ ಕೃಷ್ಣಪ್ಪ ಎ 1 ಆರೋಪಿ ;
ಇದರಿಂದ ಭಯಭೀತರಾಗಿರೋ ಶಂಕ್ರಪ್ಪರಿಂದ ಬ್ಯಾಡರಹಳ್ಳಿ ಠಾಣೆಗೆ ದೂರು ನೀಡಿದ್ರು. ಈ ದೂರಿನ ಅನ್ವಯ ಜೇಡರಹಳ್ಳಿ ಕೃಷ್ಣಪ್ಪನನ್ನ ಬಂಧಿಸಿರುವ ಬ್ಯಾಡರಹಳ್ಳಿ ಪೊಲೀಸರು, ವಿಚಾರಣೆ ನಡೆಸ್ತಿದ್ದಾರೆ. ಜೇಡರಹಳ್ಳಿ ಕೃಷ್ಣಪ್ಪ ಎ 1 ಆರೋಪಿಯಾಗಿದ್ದು, ಕೃಷ್ಣಪ್ಪ ವಿರುದ್ದ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.
ಹಲವು ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲು ;
ಇದೀಗ ಜೇಡರಹಳ್ಳಿ ಕೃಷ್ಣಪ್ಪ ಸೇರಿ ಎಂಟು ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸೆಕ್ಷನ್ 506, 341, 34, 504, 406, 420, 465, 468, 471 ಮತ್ತು 323ರ ಅಡಿಯಲ್ಲಿ 8 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ
Former Don Jedarahalli Krishnappa has been arrested by byadarahalli police for faking land documents of 16 acres in Bangalore. A case was filed by orginal owner Shankarappa.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm