ಬ್ರೇಕಿಂಗ್ ನ್ಯೂಸ್
08-02-24 01:29 pm Mangalore Correspondent ಕ್ರೈಂ
ಬಂಟ್ವಾಳ, ಫೆ.8: ವಿಟ್ಲ ಬಳಿಯ ಅಡ್ಯನಡ್ಕದ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಕಳ್ಳರು ನುಗ್ಗಿ ಲಾಕರ್ ಒಡೆದು ಕೋಟ್ಯಂತರ ಮೌಲ್ಯದ ನಗದು ಮತ್ತು ಚಿನ್ನಾಭರಣ ದೋಚಿರುವ ಕೃತ್ಯ ನಡೆದಿದೆ.
ಕೇರಳ- ಕರ್ನಾಟಕ ಗಡಿಭಾಗದ ಅಡ್ಯನಡ್ಕದಲ್ಲಿ ಹಳೆ ಕಟ್ಟಡದಲ್ಲಿರುವ ಕರ್ನಾಟಕ ಬ್ಯಾಂಕ್ ಶಾಖೆಗೆ ನಿನ್ನೆ ರಾತ್ರಿ ಕಳ್ಳರು ನುಗ್ಗಿದ್ದಾರೆ. ಹಿಂಭಾಗದ ಕಿಟಕಿಯ ಸರಳನ್ನು ಕತ್ತರಿಸಿ ಕಳ್ಳರು ಒಳನುಗ್ಗಿದ್ದು ಲಾಕರ್ ಒಡೆದು ನಗದು ಮತ್ತು ಚಿನ್ನಾಭರಣ ದೋಚಿದ್ದಾರೆ. ಲಾಕರನ್ನು ಗ್ಯಾಸ್ ಕಟ್ಟರ್ ಬಳಸಿ ಒಡೆದಿರುವುದು ಕಂಡುಬಂದಿದೆ.
ಬ್ಯಾಂಕ್ ಸಿಬಂದಿ ಇಂದು ಬೆಳಗ್ಗೆ 9.30ಕ್ಕೆ ಕೆಲಸಕ್ಕೆ ಆಗಮಿಸಿದಾಗ, ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ವಿಟ್ಲ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಬ್ಯಾಂಕ್ ಶಾಖೆಯನ್ನು ಸದ್ಯಕ್ಕೆ ಮುಚ್ಚಲಾಗಿದೆ. ಕಟ್ಟಡದ ಹಿಂಭಾಗದಲ್ಲಿ ಪೊದೆ ಆವರಿಸಿದ್ದು ಅದೇ ಜಾಗದಿಂದ ಕಳ್ಳರು ಕನ್ನ ಹಾಕಿರುವುದು ಯಾರಿಗೂ ಗೊತ್ತಾಗಿಲ್ಲ. ನಸುಕಿನ ಜಾವದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದು ಕೃತ್ಯ ನಡೆದಿರುವ ಶಂಕೆಯಿದೆ. ಹಿಂಭಾಗದಲ್ಲಿ ಸಿಸಿಟಿವಿ ಇಲ್ಲದಿರುವುದು ಕಳ್ಳರಿಗೆ ವರದಾನವಾಗಿತ್ತು. ಲಾಕರಿನಲ್ಲಿ ಎರಡು ಕೋಟಿಯಷ್ಟು ಮೌಲ್ಯದ ಚಿನ್ನಾಭರಣ ಇದ್ದಿರುವ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಬ್ಯಾಂಕ್ ಕಟ್ಟಡದ ಬಗ್ಗೆ ತಿಳಿದವರೇ ಕೃತ್ಯ ಎಸಗಿರುವ ಶಂಕೆಯಿದ್ದು ಬಂಟ್ವಾಳ ಪೊಲೀಸರು ತನಿಖೆ ಆರಂಭಿಸಿದ್ದಾರೆ.
A Karnataka Bank branch was robbed on Wednesday night in Adyanadka near Vitla Town of Dakshina Kannada District. Unidentified robbers broke into the bank by breaking the backside window of the bank. Cash and jewellery were stolen from the lockers in the bank. The incident occurred on Wenesnight and came to light when the staff opened the bank on Thursday morning.
19-03-25 12:44 pm
Bangalore Correspondent
ಸೌಜನ್ಯಾ ಪ್ರಕರಣ ; ನ್ಯಾಯಕ್ಕಾಗಿ ಆಗ್ರಹಿಸಿ ಧರ್ಮಸ್ಥ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
Bangalore JCB Accident, Two Killed; ರಸ್ತೆ ಕಾಮ...
18-03-25 02:30 pm
19-03-25 02:10 pm
HK News Desk
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
18-03-25 10:09 pm
Mangalore Correspondent
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am