ಬ್ರೇಕಿಂಗ್ ನ್ಯೂಸ್
08-02-24 09:39 pm Mangalore Correspondent ಕ್ರೈಂ
ಮಂಗಳೂರು, ಫೆ.8: ಕಾವೂರು ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿರುವ ಸಂತೋಷ್ ಸಿಜೆ ಎಂಬ ಸಿಬಂದಿ ದೂರು ಹೇಳಿಕೊಂಡು ಬಂದ ಮಹಿಳೆಯೊಬ್ಬರಿಗೆ ಅಸಹ್ಯ ರೀತಿಯಲ್ಲಿ ಸಂದೇಶ ಕಳುಹಿಸಿ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಆ ವ್ಯಕ್ತಿಯನ್ನು ಪೊಲೀಸ್ ಕಮಿಷನರ್ ಕರ್ತವ್ಯದಿಂದ ಸಸ್ಪೆಂಡ್ ಮಾಡಿದ್ದಾರೆ.
ಜನಸಾಮಾನ್ಯರ ದೂರು ಆಲಿಸುವ ಸ್ಥಾನದಲ್ಲಿರುವ ಪೊಲೀಸ್ ಸಿಬಂದಿಯೇ ಹಲವು ಸಮಯದಿಂದ ಮಹಿಳೆಯ ಮೊಬೈಲ್ ನಂಬರ್ ಪಡೆದು ಅಸಭ್ಯ ರೀತಿಯಲ್ಲಿ ಮೆಸೇಜ್ ಕಳಿಸುತ್ತಿದ್ದುದಲ್ಲದೆ, ಮಾನಸಿಕ ಕಿರುಕುಳ ನೀಡಿದ್ದಾನೆ. ಇದರಿಂದ ನೊಂದಿದ್ದ ಮಹಿಳೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರನ್ನು ಭೇಟಿಯಾಗಿ ದೂರು ಹೇಳಿಕೊಂಡಿದ್ದರು. ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಂತೋಷ್ ಕರೆ ಮಾಡಿ, ಧಮಕಿ ಹಾಕಿರುವ ಆಡಿಯೋ ರೆಕಾರ್ಡ್ ಆಗಿದ್ದು, ಅದನ್ನೂ ಪೊಲೀಸ್ ಕಮಿಷನರ್ ಗೆ ನೀಡಿದ್ದಾರೆ. ಅಲ್ಲದೆ, ರಾತ್ರಿ ವೇಳೆ ತನ್ನ ಕಾರನ್ನು ಅಡ್ಡಗಟ್ಟಿ ಕಿರುಕುಳ ನೀಡಿರುವುದನ್ನೂ ಪೊಲೀಸ್ ಹಿರಿಯಧಿಕಾರಿಗಳ ಗಮನಕ್ಕೆ ಮಹಿಳೆ ತಂದಿದ್ದಾರೆ. ನೀನು ಪೊಲೀಸ್ ದೂರು ಕೊಟ್ಟರೆ, ನಿನ್ನ ಕುಟುಂಬವನ್ನು ಮುಗಿಸುತ್ತೇನೆ. ಇಡೀ ಜೀವನ ಪರ್ಯಂತ ಕೊರಗುವಂತೆ ಮಾಡುತ್ತೇನೆಂದು ಮಹಿಳೆಯನ್ನು ಬೆದರಿಸಿದ್ದಾಗಿ ನೊಂದ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಆಡಿಯೋ ಮತ್ತು ವಾಟ್ಸಪ್ ಸಂದೇಶಗಳನ್ನು ನೋಡಿದ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಮೇಲ್ನೋಟಕ್ಕೆ ಅಪರಾಧ ಸಂಜ್ಞೆ ಕಂಡಿದ್ದರಿಂದ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಿ ಬಿಸಿ ಮುಟ್ಟಿಸಿದ್ದಾರೆ. ಅಲ್ಲದೆ, ಕೃತ್ಯದ ಬಗ್ಗೆ ತನಿಖೆ ಕೈಗೊಂಡು ವರದಿ ನೀಡುವಂತೆ ಮಂಗಳೂರು ಉತ್ತರ ವಿಭಾಗದ ಎಸಿಪಿಗೆ ಆದೇಶ ಮಾಡಿದ್ದಾರೆ. ಅಮಾನತು ಆದೇಶಕ್ಕೊಳಗಾದ ಸಿಬಂದಿ ಸಂತೋಷ್ ಅದನ್ನು ರದ್ದುಪಡಿಸುವಂತೆ ಕಾಂಗ್ರೆಸ್ ನಾಯಕರ ಮೂಲಕ ಒತ್ತಡ ಹೇರಿದ್ದಾರೆ ಎನ್ನುವ ಮಾಹಿತಿಗಳಿದ್ದು, ಅದಕ್ಕಾಗಿ ಮಹಿಳೆಯಿಂದ ದೂರು ಹಿಂಪಡೆಯುವಂತೆ ಪ್ರಯತ್ನಿಸಿದ್ದಾರೆ ಎನ್ನುವ ಮಾತೂ ಕೇಳಿಬಂದಿದೆ.
Mangalore Kavoor Police Constable Santosh suspended over sexual harrasment to women. Santosh was textinf incident text messages to Women who had come to file a complaint at the station. Police commissioner Anupam Agarwal has suspended santosh soon after the incident came to light.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm