ಬ್ರೇಕಿಂಗ್ ನ್ಯೂಸ್
08-02-24 09:39 pm Mangalore Correspondent ಕ್ರೈಂ
ಮಂಗಳೂರು, ಫೆ.8: ಕಾವೂರು ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿರುವ ಸಂತೋಷ್ ಸಿಜೆ ಎಂಬ ಸಿಬಂದಿ ದೂರು ಹೇಳಿಕೊಂಡು ಬಂದ ಮಹಿಳೆಯೊಬ್ಬರಿಗೆ ಅಸಹ್ಯ ರೀತಿಯಲ್ಲಿ ಸಂದೇಶ ಕಳುಹಿಸಿ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಆ ವ್ಯಕ್ತಿಯನ್ನು ಪೊಲೀಸ್ ಕಮಿಷನರ್ ಕರ್ತವ್ಯದಿಂದ ಸಸ್ಪೆಂಡ್ ಮಾಡಿದ್ದಾರೆ.
ಜನಸಾಮಾನ್ಯರ ದೂರು ಆಲಿಸುವ ಸ್ಥಾನದಲ್ಲಿರುವ ಪೊಲೀಸ್ ಸಿಬಂದಿಯೇ ಹಲವು ಸಮಯದಿಂದ ಮಹಿಳೆಯ ಮೊಬೈಲ್ ನಂಬರ್ ಪಡೆದು ಅಸಭ್ಯ ರೀತಿಯಲ್ಲಿ ಮೆಸೇಜ್ ಕಳಿಸುತ್ತಿದ್ದುದಲ್ಲದೆ, ಮಾನಸಿಕ ಕಿರುಕುಳ ನೀಡಿದ್ದಾನೆ. ಇದರಿಂದ ನೊಂದಿದ್ದ ಮಹಿಳೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರನ್ನು ಭೇಟಿಯಾಗಿ ದೂರು ಹೇಳಿಕೊಂಡಿದ್ದರು. ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಂತೋಷ್ ಕರೆ ಮಾಡಿ, ಧಮಕಿ ಹಾಕಿರುವ ಆಡಿಯೋ ರೆಕಾರ್ಡ್ ಆಗಿದ್ದು, ಅದನ್ನೂ ಪೊಲೀಸ್ ಕಮಿಷನರ್ ಗೆ ನೀಡಿದ್ದಾರೆ. ಅಲ್ಲದೆ, ರಾತ್ರಿ ವೇಳೆ ತನ್ನ ಕಾರನ್ನು ಅಡ್ಡಗಟ್ಟಿ ಕಿರುಕುಳ ನೀಡಿರುವುದನ್ನೂ ಪೊಲೀಸ್ ಹಿರಿಯಧಿಕಾರಿಗಳ ಗಮನಕ್ಕೆ ಮಹಿಳೆ ತಂದಿದ್ದಾರೆ. ನೀನು ಪೊಲೀಸ್ ದೂರು ಕೊಟ್ಟರೆ, ನಿನ್ನ ಕುಟುಂಬವನ್ನು ಮುಗಿಸುತ್ತೇನೆ. ಇಡೀ ಜೀವನ ಪರ್ಯಂತ ಕೊರಗುವಂತೆ ಮಾಡುತ್ತೇನೆಂದು ಮಹಿಳೆಯನ್ನು ಬೆದರಿಸಿದ್ದಾಗಿ ನೊಂದ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಆಡಿಯೋ ಮತ್ತು ವಾಟ್ಸಪ್ ಸಂದೇಶಗಳನ್ನು ನೋಡಿದ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಮೇಲ್ನೋಟಕ್ಕೆ ಅಪರಾಧ ಸಂಜ್ಞೆ ಕಂಡಿದ್ದರಿಂದ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಿ ಬಿಸಿ ಮುಟ್ಟಿಸಿದ್ದಾರೆ. ಅಲ್ಲದೆ, ಕೃತ್ಯದ ಬಗ್ಗೆ ತನಿಖೆ ಕೈಗೊಂಡು ವರದಿ ನೀಡುವಂತೆ ಮಂಗಳೂರು ಉತ್ತರ ವಿಭಾಗದ ಎಸಿಪಿಗೆ ಆದೇಶ ಮಾಡಿದ್ದಾರೆ. ಅಮಾನತು ಆದೇಶಕ್ಕೊಳಗಾದ ಸಿಬಂದಿ ಸಂತೋಷ್ ಅದನ್ನು ರದ್ದುಪಡಿಸುವಂತೆ ಕಾಂಗ್ರೆಸ್ ನಾಯಕರ ಮೂಲಕ ಒತ್ತಡ ಹೇರಿದ್ದಾರೆ ಎನ್ನುವ ಮಾಹಿತಿಗಳಿದ್ದು, ಅದಕ್ಕಾಗಿ ಮಹಿಳೆಯಿಂದ ದೂರು ಹಿಂಪಡೆಯುವಂತೆ ಪ್ರಯತ್ನಿಸಿದ್ದಾರೆ ಎನ್ನುವ ಮಾತೂ ಕೇಳಿಬಂದಿದೆ.
Mangalore Kavoor Police Constable Santosh suspended over sexual harrasment to women. Santosh was textinf incident text messages to Women who had come to file a complaint at the station. Police commissioner Anupam Agarwal has suspended santosh soon after the incident came to light.
19-03-25 12:44 pm
Bangalore Correspondent
ಸೌಜನ್ಯಾ ಪ್ರಕರಣ ; ನ್ಯಾಯಕ್ಕಾಗಿ ಆಗ್ರಹಿಸಿ ಧರ್ಮಸ್ಥ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
Bangalore JCB Accident, Two Killed; ರಸ್ತೆ ಕಾಮ...
18-03-25 02:30 pm
19-03-25 02:10 pm
HK News Desk
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
18-03-25 10:09 pm
Mangalore Correspondent
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am